48 ಪಿಕೆಪಿಎಸ್ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಾಣಕ್ಕೆ ತಲಾ ₹25 ಲಕ್ಷ

KannadaprabhaNewsNetwork |  
Published : Aug 14, 2025, 01:02 AM IST
ಖಾನಾಪುರ ತಾಲೂಕಿನ ಬೀಡಿ ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ರೈತ ಭವನ ನಿರ್ಮಾಣ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಹಾಗೂ ವಿಠ್ಠಲ ಹಲಗೇಕರ ಜಂಟಿಯಾಗಿ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ತಮ್ಮ ಹಾಗೂ ಸ್ಥಳೀಯ ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಪ್ರಯತ್ನದ ಫಲವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ತಾಲೂಕಿನ 48 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಿಸಲು ತಲಾ ₹25 ಲಕ್ಷದಂತೆ ₹12 ಕೋಟಿ ಮೊತ್ತದ ಅನುದಾನ ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಖಾನಾಪುರ

ತಮ್ಮ ಹಾಗೂ ಸ್ಥಳೀಯ ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಪ್ರಯತ್ನದ ಫಲವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ತಾಲೂಕಿನ 48 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಿಸಲು ತಲಾ ₹25 ಲಕ್ಷದಂತೆ ₹12 ಕೋಟಿ ಮೊತ್ತದ ಅನುದಾನ ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ತಾಲೂಕಿನ ಬೀಡಿ ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ರೈತ ಭವನ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಈಗಾಗಲೇ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಿಗೆ ರೈತ ಭವನ ನಿರ್ಮಿಸುವ ಕುರಿತು ಸರ್ಕಾರದಿಂದ ಅನುಮೋದನೆ ಪತ್ರ ನೀಡಲಾಗಿದೆ ಎಂದರು.ಕಳೆದ ವರ್ಷ ಅಕ್ಟೋಬರ್‌ನಲ್ಲಿ ತಾವು ಮತ್ತು ಹಲಗೇಕರ ಜಂಟಿಯಾಗಿ ಸರ್ಕಾರಕ್ಕೆ ಪತ್ರ ಬರೆದು ಪಿಕೆಪಿಎಸ್‌ಗಳಿಗೆ ರೈತ ಭವನ ನಿರ್ಮಿಸಿಕೊಳ್ಳಲು ತಲಾ ₹25 ಲಕ್ಷ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ್ದು, ತಮ್ಮಿಬ್ಬರ ಮನವಿಯನ್ನು ಪರಿಗಣಿಸಿದ ಸರ್ಕಾರ ರೈತ ಭವನ ನಿರ್ಮಾಣಕ್ಕೆ ನೀರಾವರಿ ನಿಗಮದ ಮೂಲಕ ಅನುದಾನ ಮಂಜೂರು ಮಾಡಿದೆ ಎಂದು ವಿವರಿಸಿದರು.ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ತಾಲೂಕಿನ ವಿವಿಧ ಪಿಕೆಪಿಎಸ್‌ಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ರೈತ ಭವನಗಳನ್ನು ನಿರ್ಮಿಸಿಕೊಂಡು ರೈತ ಭವನದ ಮೂಲಕ ಸಮುದಾಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಕಾರ್ಯಕ್ರಮದಲ್ಲಿ ರಾಜು ಸಿದ್ಧಾನಿ, ಭರಮಾಣಿ ಪಾಟೀಲ, ಸಂತೋಷ ಕಾಶೀಲಕರ ಸೇರಿದಂತೆ ತಾಲೂಕಿನ ವಿವಿಧ ಪಿಕೆಪಿಎಸ್‌ಗಳ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿ ಹಾಗೂ ರೈತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌