ಕೋಲಾರದ ೨೫೦೦ ಟನ್ ತ್ಯಾಜ್ಯ ತೆರವು

KannadaprabhaNewsNetwork |  
Published : Dec 28, 2025, 02:15 AM IST
೨೭ಕೆಎಲ್‌ಆರ್-೧೦ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ನೇತೃತ್ವದಲ್ಲಿ ಕೋಲಾರದಲ್ಲಿ ಶನಿವಾರ ಸುಮಾರು ೨೫೦೦ ಟನ್ ತ್ಯಾಜ್ಯವನ್ನು ತೆರವುಗೊಳಿಸಿದರು. | Kannada Prabha

ಸಾರಾಂಶ

ಕೋಲಾರ ನಗರದ ಹೊರವಲಯದ ಬಂಗಾರಪೇಟೆ ಬೈಪಾಸ್‌ನಿಂದ ಬೇತಮಂಗಲ ಮೇಲ್ಸೇತುವೆವರೆಗಿನ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ, ಮಣಿಗಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣದ ಹಿಂಭಾಗದ ಸರ್ವೇ ನಂ.೧೮೧ರ ವ್ಯಾಪ್ತಿಯಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕೋಲಾರಕೋಲಾರ ನಗರ ವ್ಯಾಪ್ತಿಯಲ್ಲಿ ದಶಕಗಳಿಂದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶದಂತೆ ನಿರಂತರವಾಗಿ ನಡೆಯುತ್ತಿದ್ದು, ಶನಿವಾರವೂ ಸುಮಾರು ೨೫೦೦ ಟನ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು ನಗರಸಭೆ ಆಯುಕ್ತ ನವೀನ್ ಚಂದ್ರ ತಿಳಿಸಿದರು.ನಗರದ ಹೊರವಲಯದ ಬಂಗಾರಪೇಟೆ ಬೈಪಾಸ್‌ನಿಂದ ಬೇತಮಂಗಲ ಮೇಲ್ಸೇತುವೆವರೆಗಿನ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ, ಮಣಿಗಟ್ಟ, ಸ್ಯಾನಿಟೋರಿಯಂ ಪ್ರದೇಶ, ನಗರ ಬಸ್ ನಿಲ್ದಾಣದ ಹಿಂಭಾಗದ ಸರ್ವೇ ನಂ.೧೮೧ರ ವ್ಯಾಪ್ತಿಯಲ್ಲಿದ್ದ ಕಟ್ಟಡ ತ್ಯಾಜ್ಯ ಮತ್ತು ಪಾರಂಪರಿಕ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ೧೬ ಟಿಪ್ಪರ್, ೧೦ ಜೆಸಿಬಿ ಬಳಕೆ

ಕಾರ್ಯಾಚರಣೆಯಲ್ಲಿ ಸುಮಾರು ೧೬ ಟಿಪ್ಪರ್ ವಾಹನಗಳು ಹಾಗೂ ೧೦ ಜೆಸಿಬಿ ಯಂತ್ರಗಳನ್ನು ಬಳಸಲಾಗಿದ್ದು, ಶನಿವಾರವೂ ಸಹ ತ್ಯಾಜ್ಯ ತೆರವು ಕಾರ್ಯ ಯಶಸ್ವಿಯಾಗಿ ಮುಂದುವರೆದಿದೆ. ತೆರವುಗೊಳಿಸಲಾದ ಕಟ್ಟಡ ತ್ಯಾಜ್ಯವನ್ನು ಅರಬ್ಬಿಕೊತ್ತನೂರು ಸಮೀಪದ ಕೆಂದಟ್ಟಿ ವ್ಯಾಪ್ತಿಯ ಹಳ್ಳ ಪ್ರದೇಶಕ್ಕೆ ಸಾಗಿಸಲಾಗಿದ್ದು, ಪಾರಂಪರೀಕ ತ್ಯಾಜ್ಯವನ್ನು ನಗರಸಭೆಯ ಅಧಿಕೃತ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗಿದ್ದು, ಪಾರಂಪರಿಕ ತ್ಯಾಜ್ಯವನ್ನು ಮಣ್ಣು, ಗೊಬ್ಬರ, ಗಾಜು, ಲೋಹ ಹಾಗೂ ಪ್ಲಾಸ್ಟಿಕ್ ಸೇರಿದಂತೆ ವಿಭಿನ್ನ ವಿಭಾಗಗಳಾಗಿ ಬೇರ್ಪಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರು ವಿವರಿಸಿದರು.

ನಗರವನ್ನು ಸ್ವಚ್ಛ, ಸುಂದರ ಮತ್ತು ಆರೋಗ್ಯಕರವಾಗಿಟ್ಟುಕೊಳ್ಳುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ನಗರಸಭೆ ಕೈಗೊಂಡಿರುವ ಈ ಅಭಿಯಾನ ಮುಂದಿನ ದಿನಗಳಲ್ಲೂ ನಿರಂತರವಾಗಿ ಮುಂದುವರೆಯಲಿದೆ. ತ್ಯಾಜ್ಯವನ್ನು ದಶಕಗಳಿಂದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದರ ಜೊತೆಗೆ, ಸಾರ್ವಜನಿಕರು ಸಹ ಸ್ವಚ್ಛತೆ ಕಾಪಾಡುವಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ತ್ಯಾಜ್ಯ ವಿಲೇವಾರಿ ಕಾರ್ಯದ ವೇಳೆ ಯೋಜನಾಧಿಕಾರಿ ಅಂಬಿಕಾ, ಕಾರ್ಯಪಾಲಕ ಇಂಜಿನಿಯರ್ ಶ್ರೀನಿವಾಸ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ