ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸೌಧದಲ್ಲಿ ಗುರುವಾರ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ ಹಲವು ಸೂಚನೆಗಳನ್ನು ನೀಡಿದರು.
ಈ ವರ್ಷ ಮುಂಗಾರು ಪೂರ್ವ ಮತ್ತು ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ನಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಆಯಾ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು. ಒಂದು ವೇಳೆ ಸಮಸ್ಯೆಯಾದರೆ ಜಿಲ್ಲಾಧಿಕಾರಿಗಳನ್ನೇ ಹೊಣೆಯಾಗಿಸಲಾಗುವುದು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಬೇಕು ಎಂದು ನಿರ್ದೇಶಿಸಿದರು.ಕುಡಿಯುವ ನೀರು ಪೂರೈಕೆಗೆ ಅನುದಾನದ ಕೊರತೆಯಿಲ್ಲ. ಸದ್ಯ ಕುಡಿಯುವ ನೀರಿಗಾಗಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 419.50 ಕೋಟಿ ರು. ಲಭ್ಯವಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ. ಅದನ್ನು ಬಳಸಿ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಅಧಿಕಾರಿಗಳು, ಬೇಸಿಗೆಯಲ್ಲಿ 213 ತಾಲೂಕುಗಳ 2410 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ. ಅದರಲ್ಲಿ ಪ್ರಸ್ತುತ 114 ತಾಲೂಕುಗಳ 598 ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 137 ಗ್ರಾಮಗಳಿಗೆ 129 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜತೆಗೆ 585 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆಯಲಾಗಿದ್ದು, ಅದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನಿವಾರ್ಯ ಸಂದರ್ಭದಲ್ಲಿ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಅದರ ಬದಲು ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಲು ನಿರ್ಧರಿಸಬೇಕು. ಇನ್ನು, ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿಎಂಸಿ ನೀರು ಲಭ್ಯವಿದ್ದು, ಅದು ಒಟ್ಟು ಸಾಮರ್ಥ್ಯದ ಶೇ. 36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿಎಂಸಿ ನೀರು ಲಭ್ಯವಿತ್ತು. ಇದನ್ನು ಗಮನಿಸಿದರೆ ಜಲಾಶಯಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಬೇಕಾಗುವಷ್ಟು ನೀರು ಲಭ್ಯವಿದೆ ಎಂದರು.
ತಾಲೂಕು-ವಾರ್ಡ್ಗಳಲ್ಲಿ ನಿಯಂತ್ರಣ ಕೊಠಡಿ:
ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ:
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎನ್. ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಬಿ.ಎಸ್.ಸುರೇಶ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ। ಶಾಲಿನಿ ರಜನೀಶ್ ಇದ್ದರು.
ಮುಂಗಾರು ಪೂರ್ವ ಮಳೆ ಕೊರತೆ:
*ಯಾದಗಿರಿ, ರಾಯಚೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ--
ಮುಂಗಾರು ಮಳೆ ಸಂಭವನೀಯತೆ:ವಾಡಿಕೆಗಿಂತ ಹೆಚ್ಚಿನ ಮಳೆ: ಯಾದಗಿರಿ, ಕಲಬುರಗಿ
ವಾಡಿಕೆ ಮಳೆ: ವಿಜಯಪುರ, ರಾಯಚೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರವಾಡಿಕೆಗಿಂತ ಕಡಿಮೆ: ಉಳಿದ ಎಲ್ಲ 22 ಜಿಲ್ಲೆಗಳು
---ಹೆಚ್ಚು ಬಿಸಿಗಾಳಿಯ ಜಿಲ್ಲೆಗಳು:
*ವಿಜಯನಗರ, ಕೊಪ್ಪಳ, ಗದಗ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್, ಧಾರವಾಡ (ಸ್ವಲ್ಪ ಭಾಗ), ಹಾವೇರಿ (ಸ್ವಲ್ಪ ಭಾಗ)---