ಶಿವಮೊಗ್ಗ: ಧೀರ ದೀವರ ಬಳಗ ಮತ್ತು ಹಳೆಪೈಕ ದೀವರ ಸಂಸ್ಕೃತಿ ಸಂವಾದ ಬಳಗ ಇವರ ವತಿಯಿಂದ ನ.26ರಂದು ನಗರದ ಈಡಿಗರ ಭವನದಲ್ಲಿ ದೀವರ ಸಾಂಸ್ಕೃತಿಕ ವೈಭವ ಮತ್ತು ರಾಜ್ಯಮಟ್ಟದ ಭೂಮಣ್ಣಿ ಬುಟ್ಟಿ, ಹಸೆ ಚಿತ್ತಾರ ಸ್ಪರ್ಧೆ ಮತ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಬಳಗದ ಸಂಚಾಲಕ ಸುರೇಶ್ ಬಾಳೆಗುಂಡಿ ಹೇಳಿದರು.
ಮಧ್ಯಾಹ್ನ 3 ಗಂಟೆಗೆ ‘ಧೀರ ದೀವರು’ ಪುರಸ್ಕಾರವನ್ನು ಸಿಗಂದೂರು ಕ್ಷೇತ್ರ ಧರ್ಮದರ್ಶಿ ಎಸ್.ರಾಮಪ್ಪ, ಜಾನಪದ ಕಲಾವಿದ ಟಾಕಪ್ಪ ಕಣ್ಣೂರು ಮತ್ತು ಲಕ್ಷ್ಮಮ್ಮ ಗಡೆಮನೆ ಅವರಿಗೆ ಪ್ರದಾನ ಮಾಡಲಾಗುವುದು. ಸಿರಿವಂತೆ ಚಂದ್ರಶೇಖರ್ ಸಮಾರೋಪ ಭಾಷಣ ಮಾಡುವರು. ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಿಕೊಡುವರು. ಅತಿಥಿಗಳಾಗಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯ್ಕ, ಗೃಹ ಸಚಿವರ ಆಪ್ತ ಕಾರ್ಯದರ್ಶಿ ಕೆ.ಚನ್ನಬಸಪ್ಪ, ನಗರಾಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ, ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಬ್ರ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ. ಜಿ.ಡಿ. ನಾರಾಯಣಪ್ಪ, ಡಾ. ರಾಜನಂದಿನಿ ಕಾಗೋಡು, ಮಹಿಳಾ ಈಡಿಗ ಸಂಘದ ಜಿಲ್ಲಾಧ್ಯಕ್ಷೆ ಗೀತಾಂಜಲಿ ದತ್ತಾತ್ರೇಯ ಆಗಮಿಸುವರು. ಸಂಚಾಲಕ ನಾಗರಾಜ ನೇರಿಗೆ ಅಧ್ಯಕ್ಷತೆ ವಹಿಸುವರು. ಇನ್ನೊಬ್ಬ ಸಂಚಾಲಕ ಸುರೇಶ್ ಬಾಳೆಗುಂಡಿ, ಹಳೆಪೈಕ ದೀವರ ಸಂಸ್ಕತಿ ಬಳಗದ ಅರವಿಂದ ಕರ್ಕಿಕೋಡಿ ಹೊನ್ನಾವರ ಉಪಸ್ಥಿತರಿರುವರು ಎಂದು ವಿವರಿಸಿದರು.
ಮುಖಂಡರಾದ ಲಕ್ಷ್ಮೀಕಾಂತ ಚಿಮಣೂರು, ಪುನೀತ್, ಕೃಷ್ಣಮೂರ್ತಿ, ಜಯದೇವಪ್ಪ ಮೊದಲಾದವರಿದ್ದರು.