ಜುಲೈ 27, 28ರಂದು ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

KannadaprabhaNewsNetwork |  
Published : Jul 24, 2024, 12:19 AM IST
ಸುದ್ದಿಗೋಷ್ಠಿಯಲ್ಲಿ | Kannada Prabha

ಸಾರಾಂಶ

ಮಡಿಕೇರಿ ತಾಲೂಕಿನ ಅರ್ವತ್ತೊಕ್ಕಲು ಗ್ರಾಮದ ಬೇಕೋಟ್ ಮಕ್ಕ ಕ್ಲಬ್ ವತಿಯಿಂದ ಹಿಂದೂ ಬಾಂಧವರ 4ನೇ ವರ್ಷದ ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ 27 ಹಾಗೂ 28ರಂದು ಗ್ರಾಮದ ತಳೂರು ಚಂಗಪ್ಪ, ಕುಶಾಲಪ್ಪ ಗದ್ದೆಯಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ತಾಲೂಕಿನ ಅರ್ವತ್ತೊಕ್ಕಲು ಗ್ರಾಮದ ಬೇಕೋಟ್ ಮಕ್ಕ ಕ್ಲಬ್ ವತಿಯಿಂದ ಹಿಂದೂ ಬಾಂಧವರ 4ನೇ ವರ್ಷದ ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ 27 ಹಾಗೂ 28ರಂದು ಗ್ರಾಮದ ತಳೂರು ಚಂಗಪ್ಪ, ಕುಶಾಲಪ್ಪ ಗದ್ದೆಯಲ್ಲಿ ನಡೆಯಲಿದೆ.

ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಲಬ್ ಕಾರ್ಯದರ್ಶಿ ಗಿರಿ ಅಪ್ಪಯ್ಯ, 20 ತಂಡಗಳಿಗೆ ಸೀಮಿತವಾದ ಪುರುಷರ ಕ್ರಿಕೆಟ್ ಪಂದ್ಯಾಟ, ಪುರುಷರ ಹಾಗೂ ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟ, ವಿವಿಧ ಹಂತದ ಕೆಸರು ಗದ್ದೆ ಓಟ, ದಂಪತಿಗೆ ಕೆಸರು ಗದ್ದೆಯಲ್ಲಿ ಅಡಕೆ ಹಾಳೆ ಎಳೆಯುವ ಸ್ಪರ್ಧೆ ನಡೆಯಲಿದೆ.

28 ರಂದು ಸಭಾ ಕಾರ್ಯಕ್ರಮ ನಡೆಯಲಿದ್ದು, ಸ್ಥಳದಾನಿಗಳಾದ ತಳೂರು ಎಂ ಚಂಗಪ್ಪ, ಕುಶಾಲಪ್ಪ, ದಾನಿ ಪೊನ್ನೇಟಿ ಅಕ್ಕಮ ಕುಟ್ಟಪ್ಪ ಉದಾಟಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಕ್ಲಬ್ ಅಧ್ಯಕ್ಷ ತಳೂರು ವಿವೇಕ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಂಸದ ಯುದುವೀರ್ ಒಡೆಯರ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಶಾಸಕರಾದ ಎ.ಎಸ್. ಪೊನ್ನಣ್ಣ, ಮಂತರ್ ಗೌಡ, ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಸಿ.ಕೆ. ಬೋಪಣ್ಣ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಬೆಟ್ಟಗೇರಿ ವಿ.ಎಸ್.ಎಸ್.ಎನ್ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷೆ ಚಳಿಯಂಡ ಕಮಲ ಉತ್ತಯ್ಯ, ಸದಸ್ಯ ದಿನೇಶ್ ಕರುಂಬಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ಎಸ್. ಪುಟ್ಟಯ್ಯ ಸೇರಿದಂತೆ ಇನ್ನಿತರರು ಹಾಜರಿರುತ್ತಾರೆ ಎಂದು ತಿಳಿಸಿದರು.

ಅಧ್ಯಕ್ಷ ತಳೂರು ವಿವೇಕ್ ಮಾತನಾಡಿ, ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಸುಳ್ಯ ಭಾಗಗಳಿಂದಲೂ ತಂಡಗಳು ಭಾಗವಹಿಸುತ್ತಿವೆ. ಹಗ್ಗಜಗ್ಗಾಟದಲ್ಲಿ ಸ್ಥಳದಲ್ಲಿ ತಂಡಗಳ ನೋಂದಣಿಗೆ ಅವಕಾಶವಿದೆ.

ಹೆಚ್ಚಿನ ಮಾಹಿತಿಗೆ 7338151277, 9906894429 ಸಂಖ್ಯೆ ಸಂಪರ್ಕಿಸುವಂತೆ ಮನವಿ ಮಾಡಿದರು.

ಉಪಾಧ್ಯಕ್ಷ ಟಿ.ಕೆ. ಕುಮಾರಧರ, ಗೌರವಾಧ್ಯಕ್ಷ ಟಿ.ಎಸ್. ಜಗದೀಶ್, ಸೂರಿ ಕಾಕೇರಿ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ