ಮಾ.21 ರಿಂದ ಶ್ರೀಶೈಲಕ್ಕೆ 280 ವಿಶೇಷ ಬಸ್

KannadaprabhaNewsNetwork |  
Published : Mar 17, 2025, 12:32 AM IST

ಸಾರಾಂಶ

280 special bus to Srishaila from March 21

ರಾಯಚೂರು: ಮಾ.21ರಿಂದ ಮಾ.31ರವರೆಗೆ ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲ ಶ್ರೀಮಲ್ಲಿಕಾರ್ಜುನ ಜಾತ್ರಗೆ ರಾಯಚೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಲಿಂಗಸೂಗುರು, ಸಿಂಧನೂರು, ಮಾನ್ವಿ, ದೇವದುರ್ಗ, ಮಸ್ಕಿ ಘಟಕಗಳಿಂದ 280 ವಿಶೇಷ ಬಸ್ಸುಗಳ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.

ಈ ಬಸ್ಸುಗಳು ಮಾ.21ರಿಂದ ಮಾ.31ರವರೆಗೆ ರಾಯಚೂರು-ಕರ್ನೂಲ್-ಶ್ರೀಶೈಲ, ಸಿಂಧನೂರು-ಆದೋನಿ-ಶ್ರೀಶೈಲ, ಸಿಂಧನೂರು-ರಾಯಚೂರು-ಕರ್ನೂಲ್-ಶ್ರೀಶೈಲ, ಲಿಂಗಸೂಗುರು-ಮಸ್ಕಿ-ಸಿಂಧನೂರು-ಆದೋನಿ-ಶ್ರೀಶೈಲ, ಮಾನವಿ-ರಾಯಚೂರು-ಕರ್ನೂಲ್-ಶ್ರೀಶೈಲ,ಮಾನ್ವಿ-ಸಿಂಧನೂರು-ಆದೋನಿ-ಶ್ರೀಶೈಲ, ಮಸ್ಕಿ-ರಾಯಚೂರು-ಕರ್ನೂಲ್-ಶ್ರೀಶೈಲ, ಮಸ್ಕಿ-ಸಿಂಧನೂರು-ಆದೋನಿ-ಶ್ರೀಶೈಲ, ದೇವದುರ್ಗ-ರಾಯಚೂರು-ಕರ್ನೂಲ್-ಶ್ರೀಶೈಲ ಮಾರ್ಗದಲ್ಲಿ ಕಾರ್ಯಾಚರಣೆಯನ್ನು ಮಾಡಲಿದೆ.

50 ಪ್ರಯಾಣಿಕರು ಲಭ್ಯವಿದ್ದಲ್ಲಿ ಅವರ ಸ್ವಸ್ಥಳದಿಂದ ನೇರವಾಗಿ ಶ್ರೀಶೈಲಂಗೆ ಬಸ್‌ ವ್ಯವಸ್ಥೆ ಒದಗಿಸುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಯಾಣಿಕರು ಮಹಾನಂದಿಗೆ ಹೋಗುವದಕ್ಕೆ ಇಷ್ಟಪಟ್ಟಲ್ಲಿ ಅಲ್ಲಿಗೆ ಕರೆದುಕೊಂಡು ಹೋಗಿ ಬರಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ರಾಯಚೂರು ಘಟಕ 1 (7760992363) ರಾಯಚೂರು ಘಟಕ 2 (7760992364) ರಾಯಚೂರು ಘಟಕ 3 (7619351087) ಲಿಂಗಸೂಗುರು( 7760992365) ಸಿಂಧನೂರು( 7760992366) ಮಾನ್ವಿ (7760992367) ದೇವದುರ್ಗ( 7760992368) ಮಸ್ಕಿ( 7760992361) ಕೇಂದ್ರ ಬಸ್ ನಿಲ್ದಾಣ ರಾಯಚೂರು (7760992370) ವಿಭಾಗೀಯ ಸಂಚಾರ ಅಧಿಕಾರಿ (7760992352) ಸಂಪರ್ಕ ಮಾಡಬಹುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ ಎಂ.ಎಸ್. ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು