ರಾಷ್ಟ್ರಮಟ್ಟದ ಖೋಖೋದಲ್ಲಿ ದ್ವಿತೀಯ ಸ್ಥಾನ

KannadaprabhaNewsNetwork |  
Published : Jan 09, 2025, 12:45 AM IST
ಕೊಲ್ಹಾರ ತಾಲ್ಲೂಕಿನ ಮಸೂತಿಯಲ್ಲಿ ಅಯೋಧ್ಯೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಖೋಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಮಸೂತಿ ಗ್ರಾಮದ ಗುರುಸಂಗನಬಸವೇಶ್ವರ ಪ್ರೌಢ ಶಾಲೆಯ ಬಾಲಕಿಯರನ್ನು ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕಲ್ಲು ಬ ಸೊನ್ನದ ಹಾಗೂ ಪ್ರಮುಖ ನಾಯಕರು ಸನ್ಮಾನಿಸಿದರು.ಈ ವೇಳೆ ಎಪಿಎ0ಸಿ ಮಾಜಿ ಸದಸ್ಯ ಮುದಕಣ್ಣ ಹೊರ್ತಿ, ಅನೀಲ ಗೊಳಸ೦ಗಿ. ಶಿಕ್ಷಕರಾದ ಹೂನಸಿ೦ಗ ರಾಠೋಡ,ಮಲ್ಲನಗೌಡ ಪಾಟೀಲ,ಗೌಡಪ್ಪ ಗರಸ೦ಗಿ, ಲಕ್ಷ್ಮಣ ಡೆಂಗಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕೊಲ್ಹಾರಅಯೋಧ್ಯೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಖೋಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಮಸೂತಿ ಗ್ರಾಮದ ಗುರುಸಂಗನಬಸವೇಶ್ವರ ಪ್ರೌಢ ಶಾಲೆಯ ಬಾಲಕಿಯರನ್ನು ತಾಪಂ ಮಾಜಿ ಅಧ್ಯಕ್ಷ ಕಲ್ಲು ಸೊನ್ನದ ಸನ್ಮಾನಿಸಿದರು.

ಕನ್ನಡಪ್ರಭ ವಾರ್ತೆ ಕೊಲ್ಹಾರ

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಖೋಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಮಸೂತಿ ಗ್ರಾಮದ ಗುರುಸಂಗನಬಸವೇಶ್ವರ ಪ್ರೌಢ ಶಾಲೆಯ ಬಾಲಕಿಯರನ್ನು ತಾಪಂ ಮಾಜಿ ಅಧ್ಯಕ್ಷ ಕಲ್ಲು ಸೊನ್ನದ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಅವರು, ಬಾಲಕಿಯರು ಖೋಖೋ ಪಂದ್ಯದಲ್ಲಿ ಕರ್ನಾಟಕ 2ನೇ ಸ್ಥಾನ ಪಡೆಯಲು ಬಾಲಕಿಯರಾದ ಶ್ರಾವಣಿ ಸಾಲಳ್ಳಿ ಹಾಗೂ ವರ್ಷಾ ಬಂಡಿವಡ್ಡರ ಸಾಧನೆ ಅಮೋಘವಾಗಿದೆ. ಮತ್ತು ಈ ಬಾಲಕಿಯರಿಗೆ ಆರ್ಥಿಕವಾಗಿ ಸಹಾಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.

ಬಸವನ ಬಾಗೇವಾಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿಜಾಪುರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಾವು ಹೆಚ್ಚು ಕ್ರೀಡೆಗೆ ಒತ್ತು ನೀಡಬೇಕು. ಏಕೆಂದರೆ ನಮ್ಮ ಆರೋಗ್ಯದ ಗುಟ್ಟು ಕ್ರೀಡೆಯಲ್ಲಿ ಅಡಗಿದೆ. ಈ ಮಕ್ಕಳ ಸಾಧನೆಯಿಂದ ನಮ್ಮ ಜಿಲ್ಲೆಯ ಹೆಸರು ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಸದಸ್ಯ ಮುದಕಣ್ಣ ಹೊರ್ತಿ, ಅನೀಲ ಗೊಳಸ೦ಗಿ. ಶಿಕ್ಷಕರಾದ ಹೂನಸಿ೦ಗ ರಾಠೋಡ, ಮಲ್ಲನಗೌಡ ಪಾಟೀಲ, ಗೌಡಪ್ಪ ಗರಸ೦ಗಿ, ಲಕ್ಷ್ಮಣ ಡೆಂಗಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!