ಶೈಕ್ಷಣಿಕ ಸೌಲಭ್ಯಕ್ಕೆ ₹3 ಕೋಟಿ ಅನುದಾನ: ಶಾಸಕ ಬಸವರಾಜ ಶಿವಣ್ಣನವರ

KannadaprabhaNewsNetwork |  
Published : May 17, 2025, 01:41 AM IST
ಮ | Kannada Prabha

ಸಾರಾಂಶ

ಧಾರ್ಮಿಕ ಅಪ್ರಬುದ್ಧತೆ ಹೆಚ್ಚುಅಪಾಯಕಾರಿ. ಇದರಿಂದ ಸಮಾಜದಲ್ಲಿ ಸಾಮರಸ್ಯದ ಬದಲು ಪರಸ್ಪರ ದ್ವೇಷ ಪ್ರದರ್ಶಿತಗೊಳ್ಳುತ್ತಿವೆ.

ಬ್ಯಾಡಗಿ: ಧಾರ್ಮಿಕ ಹಾಗೂ ಶೈಕ್ಷಣಿಕ ಚಿಂತನೆಗಳಿಂದ ಸಮಾಜದ ಸ್ತರಗಳಲ್ಲಿನ ಮೇಲು- ಕೀಳೆಂಬ ಅಂತರವನ್ನು ಕಡಿಮೆ ಮಾಡಲು ಸಾಧ್ಯವಿದೆ. ಹೀಗಾಗಿ ಹೊರಬೀರೇಶ್ವರ ದೇವಸ್ಥಾನದಲ್ಲಿ ಸಮುದಾಯ ಭವನ ಸೇರಿದಂತೆ ಶೈಕ್ಷಣಿಕ ಸೌಲಭ್ಯಗಳಿಗಾಗಿ ₹3 ಕೋಟಿ ಅನುದಾನ ನೀಡುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.ಪಟ್ಟಣದ ಶಿಡೇನೂರ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಹೊರಬೀರೇಶ್ವರ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಕಾರ‍್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ಸರ್ಕಾರದಿಂದ ಬೀರೇಶ್ವರ ದೇವಸ್ಥಾನ ನಿರ್ಮಾಣಕ್ಕಾಗಿ 3 ಎಕರೆ ಜಾಗೆಯನ್ನು ಮಂಜೂರು ಮಾಡಲಾಗಿತ್ತು. ಈ ಜಾಗದಲ್ಲಿ ಧಾರ್ಮಿಕ ಹಾಗೂ ಶೈಕ್ಷಣಿಕ ಉದ್ದೇಶಗಳನ್ನು ಈಡೇರಿಸಲು ಮುಂದಾಗಿದ್ದು, ಸುಸಜ್ಜಿತವಾದ ವಸತಿ ಸಹಿತ ಶಾಲಾ- ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಅನುದಾನ ನೀಡುವುದಾಗಿ ತಿಳಿಸಿದ ಅವರು, ರಾಜಕೀಯ ಬೇರೆ, ವಾಸ್ತವದಲ್ಲಿ ಜೀವನವೇ ಬೇರೆ. ಬ್ಯಾಡಗಿ ಜನರು ಪಕ್ಷಾತೀತ, ಜಾತ್ಯತೀತವಾಗಿ ಬೀರೇಶ್ವರ ದೇವಸ್ಥಾನಕ್ಕೆ ಸಹಕಾರ ನೀಡಿದ್ದಾರೆ ಎಂದರು.ಗುರುವಿನ ಚಿಂತನೆಗಳು ಅಗತ್ಯ: ಸಾನಿಧ್ಯ ವಹಿಸಿದ್ದ ಕನಕಗುರುಪೀಠದ ನಿರಂಜನಾನಂದಪುರಿ ಶ್ರೀ ಮಾತನಾಡಿ, ಧಾರ್ಮಿಕ ಅಪ್ರಬುದ್ಧತೆ ಹೆಚ್ಚುಅಪಾಯಕಾರಿ. ಇದರಿಂದ ಸಮಾಜದಲ್ಲಿ ಸಾಮರಸ್ಯದ ಬದಲು ಪರಸ್ಪರ ದ್ವೇಷ ಪ್ರದರ್ಶಿತಗೊಳ್ಳುತ್ತಿವೆ. ಪ್ರಸ್ತುತ ಕುರುಬ ಸಮಾಜ ಗಟ್ಟಿಗೊಳ್ಳಬೇಕಾದಲ್ಲಿ ಗುರುವಿನ ಚಿಂತನೆಗಳು ಅಗತ್ಯವಿದೆ. ಅಲ್ಲದೇ ಇನ್ನೊಂದು ಸಮಾಜಕ್ಕೆ ತೊಂದರೆ ಕೊಡದಂತೆ ಕುರುಬ ಸಮಾಜ ಕಟ್ಟಬೇಕಾಗಿದೆ ಎಂದರು.ಕುರುಬ ಸಮಾಜ ಧನ್ಯ: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಸಾಮಾಜಿಕ, ಸಾಂಸ್ಕೃತಿಕ, ಪಾರಮಾರ್ಥಿಕ ಹಾಗೂ ಸ್ವತಂತ್ರ ಮನೋಧರ್ಮ ಸಹ ಗುರುವಿನ ಮಾರ್ಗದರ್ಶನದಿಂದ ಬೆಳಕಿಗೆ ಬಂದಿವೆ. ಸಮಾಜ ಮುನ್ನಡೆಯಬೇಕಾದರೆ ಗುರುವಿನ ಸನ್ಮಾರ್ಗ ಅವಶ್ಯಕ. ಕಾಲಕಾಲಕ್ಕೆ ಸಮಾಜವನ್ನು ಎಚ್ಚರಿಸುತ್ತಿರುವ ನಿರಂಜನಾನಂದ ಶ್ರೀಗಳನ್ನು ಪಡೆದ ಕುರುಬ ಸಮಾಜ ಧನ್ಯವೆಂದರು.

ಬಂಕಾಪುರ ಕೆಂಡದಮಠದ ರೇವಣಸಿದ್ದೇಶ್ವರಶ್ರೀಗಳು ಸಾನ್ನಿಧ್ಯ, ಪಂಚ ಕಮೀಟಿ ಅಧ್ಯಕ್ಷ ಚಿಕ್ಕಪ್ಪ ಹಾದೀಮನಿ ಅಧ್ಯಕ್ಷತೆ, ಅತಿಥಿಗಳಾಗಿ ಮಾಜಿ ಶಾಸಕ ಸುರೇಶಗೌಡ ಪಾಟೀಲ, ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಪುರಸಭೆ ಅಧ್ಯಕ್ಷ ಬಾಲಚಂದ್ರ ಪಾಟೀಲ, ಉಪಾಧ್ಯಕ್ಷ ಸುಭಾಸ ಮಾಳಗಿ, ಸದಸ್ಯರಾದ ಬಿ.ಎಂ. ಛತ್ರದ, ಈರಣ್ಣ ಬಣಕಾರ, ನಿವೃತ್ತ ಸೈನಿಕ ಕ್ಯಾ. ಮಹದೇವಪ್ಪ ಬಣಕಾರ, ಮುಖಂಡರಾದ ಶಂಕ್ರಣ್ಣ ಮಾತನವರ, ಗುಡ್ಡಪ್ಪ ಆಡಿನವರ, ಬೀರಣ್ಣ ಬಣಕಾರ, ದಾನಪ್ಪ ಚೂರಿ, ನಾಗರಾಜ ಆನ್ವೇರಿ, ಜೀವರಾಜ ಛತ್ರದ, ಯಮನೂರಪ್ಪ ಉಜನಿ, ರಾಮಣ್ಣ ಉಕ್ಕುಂದ, ಮಾಸಣಗಿ ಗ್ರಾಪಂ ಅಧ್ಯಕ್ಷೆ ರೇಣುಕಾ ತಗಡಿನಮನಿ, ಮಾಜಿ ಸದಸ್ಯ ಮಲ್ಲೇಶ ಬಣಕಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಲತೇಶ ಕಂಬಳಿ, ಕನಕ ನೌಕರರ ಸಂಘದ ಅಧ್ಯಕ್ಷ ನಾಗರಾಜ ಬಣಕಾರ ಮಾಲತೇಶ ಕುರಿಯವರ ಇತರರು ಇದ್ದರು. ಬಿ.ಎಂ. ಜಗಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಫ್. ಕರಿಯಣ್ಣವರ ಸ್ವಾಗತಿಸಿದರು. ಎಸ್.ಡಿ. ಅಲ್ಲಾಪೂರ ನಿರೂಪಿಸಿದರು. ಮಹೇಶ ಉಜನಿ ವಂದಿಸಿದರು.Byadagi, MLA Basavaraja Shivannavaraಬ್ಯಾಡಗಿ ಸುದ್ದಿ, ಶಾಸಕ ಬಸವರಾಜ ಶಿವಣ್ಣನವರ, ಬೀರೇಶ್ವರ ದೇವಸ್ಥಾನ, ‍Byadagi News, MLA Basavaraja Shivannavar, Bireshwar Templeದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಶಿವಣ್ಣನವರ

ಧಾರ್ಮಿಕ ಅಪ್ರಬುದ್ಧತೆ ಹೆಚ್ಚುಅಪಾಯಕಾರಿ. ಇದರಿಂದ ಸಮಾಜದಲ್ಲಿ ಸಾಮರಸ್ಯದ ಬದಲು ಪರಸ್ಪರ ದ್ವೇಷ ಪ್ರದರ್ಶಿತಗೊಳ್ಳುತ್ತಿವೆ.

----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ