3 ರಿಂದ ಮುಕ್ಕಾಟಿರ ಕ್ರಿಕೆಟ್ ನಮ್ಮೆ-2026

KannadaprabhaNewsNetwork |  
Published : Apr 01, 2026, 02:45 AM IST
ಮುಕ್ಕಾಟಿರ ಕ್ರಿಕೆಟ್ ನಮ್ಮೆ ಸುದ್ದಿಗೋಷ್ಠಿ | Kannada Prabha

ಸಾರಾಂಶ

ಬೇತ್ರಿ ಮುಕ್ಕಾಟಿರ ಕುಟುಂಬಸ್ಥರ ವತಿಯಿಂದ ಕೊಡವ ಕುಟುಂಬಗಳ ನಡುವೆ ಏ. 3ರಿಂದ ಮತ್ತು ಮೇ 1 ರವರೆಗೆ ಮೂರ್ನಾಡು ಹಾಗೂ ಅರಮೇರಿಯಲ್ಲಿ 24ನೇ ವರ್ಷದ ''''ಮುಕ್ಕಾಟಿರ ಕ್ರಿಕೆಟ್ ನಮ್ಮೆ-2026'''' ನಡೆಯಲಿದೆ.

ಮಡಿಕೇರಿ : ಬೇತ್ರಿ ಮುಕ್ಕಾಟಿರ ಕುಟುಂಬಸ್ಥರ ವತಿಯಿಂದ ಕೊಡವ ಕುಟುಂಬಗಳ ನಡುವೆ ಏ. 3ರಿಂದ ಮತ್ತು ಮೇ 1 ರವರೆಗೆ ಮೂರ್ನಾಡು ಹಾಗೂ ಅರಮೇರಿಯಲ್ಲಿ 24ನೇ ವರ್ಷದ ''''''''''''''''ಮುಕ್ಕಾಟಿರ ಕ್ರಿಕೆಟ್ ನಮ್ಮೆ-2026'''''''''''''''' ನಡೆಯಲಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇತ್ರಿ ಮುಕ್ಕಾಟಿರ ಕುಟುಂಬದ ವಕ್ತಾರ ರವಿ ಚಿಯಣ್ಣ ಹಾಗೂ ಗೌರವ ಕಾರ್ಯದರ್ಶಿ ಭಜನ್ ಬೋಪಣ್ಣ ಅವರು ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದರು. ಮುಕ್ಕಾಟಿರ ಕ್ರಿಕೆಟ್ ನಮ್ಮೆಯಲ್ಲಿ ಸೆಣಸಾಡಲು ದಾಖಲೆಯ ಒಟ್ಟು 289 ಕೊಡವ ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಮೂರ್ನಾಡು ವಿದ್ಯಾ ಸಂಸ್ಥೆಯ లాలు ಮುದ್ದಯ್ಯ ಕ್ರೀಡಾಂಗಣ, ಸರಕಾರಿ ಶಾಲಾ ಮೈದಾನ ಹಾಗೂ ಅರಮೇರಿ ಕಳಂಚೇರಿ ಶಾಲಾ ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಆರು ಓವರ್ ನ ಪಂದ್ಯಾವಳಿ ಇದಾಗಿದ್ದು, ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮಹಿಳಾ ಕ್ರಿಕೆಟ್ ಗೆ ಈಗಾಗಲೇ 44 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ನೋಂದಣಿಗೆ ಏ.4 ರವರೆಗೆ ಅವಕಾಶವಿರುವುದರಿಂದ ಮತ್ತಷ್ಟು ಮಹಿಳಾ ತಂಡ ಬರುವ ನಿರೀಕ್ಷೆ ಇದೆ ಎಂದರು. ಮೇ 1 ರಂದು ಅಂತಿಮ ಪಂದ್ಯ ನಡೆಯಲಿದ್ದು, ಪುರುಷರ ವಿಭಾಗದಲ್ಲಿ ವಿಜೇತರಿಗೆ 1 ಲಕ್ಷ ನಗದು ಹಾಗೂ ಟ್ರೋಫಿ, ದ್ವಿತೀಯ 75 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು.

ಮಹಿಳಾ ವಿಭಾಗದಲ್ಲಿ ವಿಜೇತರಿಗೆ 1 ಲಕ್ಷ ನಗದು ಹಾಗೂ ಟ್ರೋಫಿ, ದ್ವಿತೀಯ 50 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು.

*ಉದ್ಘಾಟನೆ*: ''''''''''''''''ಮುಕ್ಕಾಟಿರ ಕ್ರಿಕೆಟ್‌ ನಮ್ಮೆ-2026'''''''''''''''' ನ್ನು ಏ.3 ರಂದು ಬೆಳಗ್ಗೆ 11 ಗಂಟೆಗೆ ಮೂರ್ನಾಡು ವಿದ್ಯಾ ಸಂಸ್ಥೆಯ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಹಾಗೂ ಹಿರಿಯ ಹಾಕಿ ಪಟು ಬಾಳೆಯಡ ಕರುಣ್ ಕಾಳಪ್ಪ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಆಸ್ಟ್ರೇ ಗ್ರೂಪ್ಸ್ ನ ಸಿಎಂಡಿ ಜೆನಿತ್ ಅಯ್ಯಪ್ಪ ಹಾಗೂ ಕೊಡವ ಕ್ರಿಕೆಟ್‌ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಎನ್‌.ಕಾರ್ಯಪ್ಪ ಕಾರ್ಸನ್ ಉಪಸ್ಥಿತರಿರುವರು. ಪ್ರದರ್ಶನ ಪಂದ್ಯ ನಾರ್ತ್ ಕೂರ್ಗ್ ಮತ್ತು ಸೌತ್ ಕೂರ್ಗ್ ತಂಡಗಳ ನಡುವೆ ನಡೆಯಲಿದೆ ಎಂದು ರವಿ ಚಿಯಣ್ಣ ಹಾಗೂ ಭಜನ್ ಬೋಪಣ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೇತ್ರಿ ಮುಕ್ಕಾಟಿರ ಕುಟುಂಬದ ಅಧ್ಯಕ್ಷ ಮಧು ದೇವಯ್ಯ ಹಾಗೂ ಮಾಧ್ಯಮ ವಕ್ತಾರ ಉತ್ತಮ್ ಬೋಪಣ್ಣ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಲು ಜನ ತೀರ್ಮಾನ
ಎರಡನೇ ದಿನವೂ ಸಿಎಂ ಬಿರುಸಿನ ಪ್ರಚಾರ