ಶ್ರೀಕಾಂತ್ ಎನ್.ಗೌಡಸಂದ್ರ
ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್ಎಂ) ಅಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿ 30,000 ಸೌವಿರ ಗುತ್ತಿಗೆ ನೌಕರರಿಗೆ ಬರೋಬ್ಬರಿ ಮೂರು ತಿಂಗಳಿಂದ ವೇತನವೇ ಪಾವತಿಯಾಗಿಲ್ಲ.
ಆರೋಗ್ಯ ಇಲಾಖೆ ಹಾಗೂ ಎನ್ಎಚ್ಎಂ ನಿರ್ದೇಶಕರ ನಿರ್ಲಕ್ಷ್ಯಕ್ಕೆ 30,000 ನೌಕರರು ವೇತನವಿಲ್ಲದೆ ವೇದನೆ ಅನುಭವಿಸುವಂತಾಗಿದೆ. ಮತ್ತೊಂದೆಡೆ ವೇತನ ನೀಡಲಾಗದ ಸ್ಥಿತಿಯಿಂದ ಕೊರೋನಾ ಸಂಕಷ್ಟದಲ್ಲಿ ಜೀವ ಪಣಕ್ಕಿಟ್ಟು ಕರ್ತವ್ಯ ನಿಭಾಯಿಸಿದ್ದ ಸಾವಿರಾರು ಮಂದಿಯನ್ನು ಕೆಲಸದಿಂದಲೇ ತೆಗೆಯಲು ಸಿದ್ಧತೆ ನಡೆಸುತ್ತಿದೆ.ಹೌದು, ಎನ್ಎಚ್ಎಂ ಅಡಿ ಆರೋಗ್ಯ ಇಲಾಖೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ 653 ಮಂದಿ ವೈದ್ಯರು, ಜತೆಗೆ ಶುಶ್ರೂಷಕರು, ಸಮನ್ವಯಕಾರರು, ಡಾಟಾ ಎಂಟ್ರಿ ಆಪರೇಟರ್, ಡಿ ಗ್ರೂಪ್ ನೌಕರರು ಸೇರಿ 28,258 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಸೇವಾ ಭದ್ರತೆ ಒದಗಿಸಲು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಿದ್ದರೂ ಈವರೆಗೆ ಈಡೇರಿಸಿಲ್ಲ. ಬದಲಿಗೆ ರಾಜ್ಯಾದ್ಯಂತ ಕೆಲಸ ಮಾತ್ರ ಮಾಡಿಸಿಕೊಳ್ಳಲಾಗುತ್ತಿದೆ.
ಸಿಬ್ಬಂದಿ ಅಳಲು:
ಕೆಲಸದಿಂದಲೇ ತೆಗೆಯಲು ಸಿದ್ಧತೆ:
ಜತೆಗೆ ಎಲ್ಲಾ ವಿಭಾಗದ ಎನ್ಎಚ್ಎಂ ಗುತ್ತಿಗೆ ಸಿಬ್ಬಂದಿಯನ್ನು ಮೌಲ್ಯಮಾಪನದ ಹೆಸರಿನಲ್ಲಿ ವಿವಿಧ ಪರೀಕ್ಷೆಗೆ ಒಳಪಡಿಸಿ ಬಳಿಕ 15,000ಕ್ಕೂ ಹೆಚ್ಚು ಮಂದಿಯನ್ನು ಕೆಲಸದಿಂದ ತೆಗೆಯಲು ಸಿದ್ಧತೆ ಮಾಡಲಾಗುತ್ತಿದೆ. 10 ರಿಂದ 20 ವರ್ಷಗಳ ಕಾಲ ಕನಿಷ್ಠ ವೇತನಕ್ಕೆ ದುಡಿಸಿಕೊಂಡು 40 ವರ್ಷ ವಯಸ್ಸು ದಾಟಿದ ಬಳಿಕ ಸರ್ಕಾರ ನಮ್ಮನ್ನು ಹೊರ ದಬ್ಬುತ್ತಿದೆ. ಈ ವಯಸ್ಸಿನಲ್ಲಿ ನಮಗೆ ಹೊರಗೆ ಕೆಲಸವೂ ಸಿಗುವುದಿಲ್ಲ. ನಮ್ಮ ಮುಂದಿನ ಸ್ಥಿತಿ ಏನು? ಎಂದು ಸಿಬ್ಬಂದಿ ಅಲವತ್ತುಕೊಳ್ಳುತ್ತಿದ್ದಾರೆ.
ವಿವಿಧ ಪರೀಕ್ಷೆಗೆ ಒಳಪಡಿಸಿ ಮೌಲ್ಯಮಾಪನ ನಡೆಸಿದ ಬಳಿಕ ಬಹುತೇಕರನ್ನು ಕೈಬಿಡಲು ಸಿದ್ಧತೆ ಮಾಡಲಾಗಿದೆ. ಉದಾ: ಡಾಟಾ ಎಂಟ್ರಿ ಆಪರೇಟರ್ಗಳನ್ನು ಸೀಮಿತಗೊಳಿಸಲು ನಿಯಮ ರೂಪಿಸಲಾಗಿದ್ದು ಸುತ್ತೋಲೆ ಹೊರಡಿಸಲಾಗಿದೆ.
ಕೇಂದ್ರದ ಹಣಕ್ಕಾಗಿ ಕಾಯ್ತಿದ್ದೇವೆ:
-ಬಾಕ್ಸ್-
ಎನ್ಎಚ್ಎಂ ನಿರ್ದೇಶಕರನಿರ್ಲಕ್ಷ್ಯದಿಂದ ವೇತನ ವಿಳಂಬ
ಎನ್ಎಚ್ಎಂ ಗುತ್ತಿಗೆ ನೌಕರರ ಗುತ್ತಿಗೆ ಅವಧಿ ನವೀಕರಿಸಿ ಕೇಂದ್ರಕ್ಕೆ ಕಳುಹಿಸಿದ್ದರೆ ವೇತನ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಎನ್ಎಚ್ಎಂ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವ ಸಲುವಾಗಿ ಕೇಂದ್ರಕ್ಕೆ ವೇತನ ಬಿಡುಗಡೆಗೆ ಎನ್ಎಚ್ಎಂ ರಾಜ್ಯ ನಿರ್ದೇಶಕರು ಪ್ರಸ್ತಾವನೆಯನ್ನೇ ಕಳುಹಿಸಿಲ್ಲ.ಇದೀಗ ಏಪ್ರಿಲ್ನಿಂದ ಜೂನ್ 30ರವರೆಗೆ ನೌಕರರ ಸೇವೆ ವಿಸ್ತರಿಸಿ ಆದೇಶಿಸಿದ್ದಾರೆ. ಆದರೆ ಸಕಾಲದಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸದ ಕಾರಣ ವೇತನ ಬಿಡುಗಡೆಯಾಗಿಲ್ಲ. ರಾಜ್ಯ ಆರೋಗ್ಯ ಇಲಾಖೆಯ ಖಜಾನೆಯಲ್ಲೂ ಹಣವಿಲ್ಲ. ಹೀಗಾಗಿ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಎನ್ಚ್ಎಂ ನಿರ್ದೇಶಕ ನವೀನ್ ಭಟ್ ಅವರನ್ನು ಸತತವಾಗಿ ಸಂಪರ್ಕಿಸಿದರೂ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.