ಕನ್ನಡಪ್ರಭ ವಾರ್ತೆ ಸಾಗರ
ಸಾಗರದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ನೂತನ ಸರ್ಕಾರಿ ಬಸ್ ಸಂಚಾರಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.
ಸಾರಿಗೆ ಇಲಾಖೆಯಿಂದ ಒಂದು ವರ್ಷಕ್ಕೆ 30 ಕೋಟಿ ಆದಾಯ ಬರುತ್ತಿದೆ. ಸಾಗರ ಘಟಕದಲ್ಲಿ ಪ್ರತಿದಿನ ಶಕ್ತಿಯೋಜನೆಯಡಿ 15ಸಾವಿರ ಜನರು ಪ್ರಯಾಣ ಮಾಡುತ್ತಿದ್ದು, 7 ಲಕ್ಷ ಆದಾಯ ಬರುತ್ತಿದೆ. ಉಚಿತ ಬಸ್ ಬಿಟ್ಟಿದ್ದರೂ ನಿಗಮಕ್ಕೆ ಆದಾಯ ಬರುವುದು ಕಡಿಮೆಯಾಗಿಲ್ಲ. ಸಾರ್ವಜನಿಕರ ಸಂಚಾರಕ್ಕೆ ಬೇಕಾದ ಎಲ್ಲ ಮಾರ್ಗಕ್ಕೂ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರುಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಇಲ್ಲಿಂದ ಹೆಚ್ಚಿನ ಜನರು ಹೋಗುತ್ತಿದ್ದಾರೆ. ಮಣಿಪಾಲಕ್ಕೆ ಹೋಗಿ ಅಲ್ಲಿಂದ ಮಂಗಳೂರಿಗೆ ಹೋಗಬೇಕಾಗಿತ್ತು. ಇದು ಕೆಲವೊಮ್ಮೆ ರೋಗಿಗಳಿಗೆ ಸಮಸ್ಯೆ ಆಗುತ್ತಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಆಡಳಿತದ ಎಲ್ಲ ವಿಧಾನಗಳು ನನಗೆ ಗೊತ್ತಿದೆ. ವರಿಷ್ಠರು ಅವಕಾಶ ಕೊಟ್ಟರೆ ಸಚಿವನಾಗಿ ಉತ್ತಮ ಕೆಲಸ ಮಾಡುತ್ತೇನೆ ಎನ್ನುವ ವಿಶ್ವಾಸ ನನಗಿದೆ. ಸಚಿವ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆಯೂ ಇದೆ ಎಂದು ಹೇಳಿದರು.
ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು, ಕಾಂಗ್ರೆಸ್ ಪ್ರಮುಖರಾದ ಸುರೇಶ್ ಬಾಬು, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ ಇನ್ನಿತರರು ಹಾಜರಿದ್ದರು.