ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ವಿದ್ಯಾನಗರದಲ್ಲಿನ ವಿಶ್ವ ಹಿಂದೂ ಪರಿಷತ್ ಧರ್ಮಸಿರಿಯಲ್ಲಿ ಅಭಿಯಾನದ ಪ್ರಾಂತ ಸಂಯೋಜಕ ಕೃಷ್ಣಾ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ರಾಮ ಮಂದಿರ ನಿರ್ಮಾಣಕ್ಕೆ ಉತ್ತರ ಕರ್ನಾಟಕ ಭಾಗದ ಎಲ್ಲ ಗ್ರಾಮದ ಜನರು ದೇಣಿಗೆ ನೀಡಿದ್ದರು. ಅವರಿಗೆ ಕೃತಜ್ಞತೆ ಸಲ್ಲಿಸುವ ಮನೋಭಾವದಿಂದ ಆಮಂತ್ರಣ ಪತ್ರ ನೀಡಲಾಗುತ್ತಿದೆ ಎಂದು ತಿಳಿಸಿದರು.ಈ ಅಭಿಯಾನದ ಸಿದ್ಧತೆ ಆರಂಭವಾಗಿದ್ದು, ಜ.1ರಿಂದ 15ರ ವರೆಗೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಪ್ರಮುಖ ಹಾಗೂ ಸಹ ಪ್ರಮುಖರಿಗೆ ಅಭಿಯಾನದ ಜವಾಬ್ದಾರಿ ನೀಡಲಾಗಿದೆ ಎಂದರು.
ಅಯೋಧ್ಯೆಯಲ್ಲಿ ನಡೆಯುವ ಮೂರ್ತಿ ಪ್ರತಿಷ್ಠಾಪನೆಯ ನೇರ ಪ್ರಸಾರ ವೀಕ್ಷಣೆಗೆ ದೇವಸ್ಥಾನಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಅಂದು ಸಂಜೆ ಪ್ರತಿಯೊಂದು ಮನೆಯ ಮುಂದೆ ಐದು ದೀಪ ಹಚ್ಚಬೇಕು. ಯಾರೂ ಸಹ ರ್ಯಾಲಿ, ಪಟಾಕಿ ಸಿಡಿಸದೆ ಭಕ್ತಿ, ಆರಾಧನ ರೂಪಕವಾಗಿ ಸಂಭ್ರಮಿಸಬೇಕು. ಡಿ. 22ರಂದು ಕೇಶ್ವಾಪುರದಲ್ಲಿ ವಿಶ್ವ ಹಿಂದೂ ಪರಿಷತ್ನಿಂದ ರಾಮಮಂದಿರ ಮಂತ್ರಾಕ್ಷತೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ರಾಮಮಂದಿರ ಮೂರ್ತಿ ಪ್ರತಿಷ್ಠಾಪನೆಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹಾಗೂ ದೇಶದ 4 ಸಾವಿರ ಸಂತರು, 4 ಸಾವಿರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ರಾಮಮಂದಿರ ಹೋರಾಟದಲ್ಲಿ ಹಾಗೂ ದೇಶದ ಹುತ್ಮಾತ್ಮ ಸೈನಿಕರ ಕುಟುಂಬದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಉಪಾಧ್ಯಕ್ಷ ಗಂಗಾಧರ ಹೆಗಡೆ, ಕ್ಷೇತ್ರಿಯ ಧಾರ್ಮಿಕ ವಿಭಾಗ ಪ್ರಮುಖ ಬಸವರಾಜ, ಸುಭಾಸಸಿಂಗ್ ಜಮಾದಾರ, ರಮೇಶ್ ಕದಮ, ವಿಜಯ ಕ್ಷೀರಸಾಗರ ಇದ್ದರು.
ಇದಕ್ಕೂ ಮೊದಲು ಮಂತ್ರಾಕ್ಷತೆ ಅಭಿಯಾನಕ್ಕೆ ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಚಾಲನೆ ನೀಡಿದರು. ಹುಬ್ಬಳ್ಳಿ ಮಾತಾಶ್ರಮದ ಮಾತಾ ತೇಜೋಮಯಿ ಮಾತೋಶ್ರೀ, ಹೊಸಪೇಟೆಯ ಚಿಂತಾಮಣಿ ಮಠದ ಶಿವಾನಂದ ಭಾರತಿ ಚಿಂತಾಮಣಿ ಸ್ವಾಮೀಜಿ, ಹುಕ್ಕೇರಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಗದಗದ ಶಿವಾನಂದ ಬೃಹನ್ಮಠದ ಸದಾಶಿವಾನಂದ ಸ್ವಾಮೀಜಿ ಇದ್ದರು.