ಇಂಡಿಗನತ್ತ ಗ್ರಾಮದಲ್ಲಿ 10 ವರ್ಷದ ಬಾಲಕನನ್ನು ಹೊತ್ತೊಯ್ದು ಕೊಂದು ಹಾಕಿದ ಚಿರತೆಯ ಚಲನವಲನವು ಥರ್ಮಲ್ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಿರತೆ ಸೆರೆಗೆ 4 ಡ್ರೋನ್:
ಚಿರತೆಯ ಸೆರೆಗೆ 4 ಬೋನ್ಗಳನ್ನು ಅರಣ್ಯ ಇಲಾಖೆ ಅಳವಡಿಸಿದ್ದು, ಸ್ಥಳದಲ್ಲಿ 30ಕ್ಕೂ ಹೆಚ್ಚು ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಜೊತೆಗೆ ರಾತ್ರಿಯಿಡೀ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಥರ್ಮಲ್ ಡ್ರೋನ್ನಲ್ಲಿ ಚಿರತೆ ಓಡಾಟದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೀಗಾಗಿ ಸದ್ಯಕ್ಕೆ ನಾಗಮಲೆಗೆ ತೆರಳುವ ಪಾದಯಾತ್ರಿಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.