ನಿವೇಶನ ರಹಿತರಿಂದ ಚೇರಳ ಶ್ರೀಮಂಗಲ ಗ್ರಾಮದ ಪೈಸಾರಿ ಜಾಗದಲ್ಲಿ 30 ಶೆಡ್ ಗಳು!

KannadaprabhaNewsNetwork |  
Published : Apr 03, 2025, 12:34 AM IST
ಚಿತ್ರ : 1ಎಂಡಿಕೆ4 : ಚೇರಳ ಶ್ರೀಮಂಗಲ ಗ್ರಾಮದ ಸರ್ಕಾರಿ ಜಾಗದಲ್ಲಿ ಅಕ್ರಮ ಶೆಡ್ ಹಾಕಿರುವುದು.  | Kannada Prabha

ಸಾರಾಂಶ

ಪೈಸಾರಿ ಜಾಗದಲ್ಲಿ ನಿವೇಶನ ರಹಿತರು ಏಕಾಏಕಿ ಸುಮಾರು 30ಕ್ಕೂ ಅಧಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ತಮಗೆ ನಿವೇಶನ ನೀಡುವಂತೆ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇರಳ ಶ್ರೀಮಂಗಲ ಗ್ರಾಮದ ಪೈಸಾರಿ ಜಾಗದಲ್ಲಿ ನಿವೇಶನ ರಹಿತರು ಮಂಗಳವಾರ ಏಕಾಏಕಿ ಸುಮಾರು 30ಕ್ಕೂ ಅಧಿಕ ಶೆಡ್ ಗಳನ್ನು ನಿರ್ಮಿಸಿಕೊಂಡು ತಮಗೆ ನಿವೇಶನ ನೀಡುವಂತೆ ಆಗ್ರಹಿಸಿದ್ದಾರೆ.

ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯಿಂದ ಕಳೆದ ಏಳು ವರ್ಷದಿಂದಲೂ ಕೂಡ ನಿವೇಶನ ರಹಿತರಿಗೆ ಹಾಗೂ ಸಂತ್ರಸ್ತರಿಗೆ ಜಾಗ ನೀಡುವುದಾಗಿ ಹೇಳಿ ಈ ವರೆಗೂ ಜಾಗ ನೀಡಿಲ್ಲ. ಇದರಿಂದ ನಾವು ಈ ಜಾಗದಲ್ಲಿ ಶೆಡ್ ಗಳನ್ನು ನಿರ್ಮಿಸಿಕೊಂಡಿದ್ದೇವೆ. ನಮಗೆ ಜಾಗ ಹಂಚಿಕೆ ಮಾಡುವ ವರೆಗೂ ಇಲ್ಲೇ ಶೆಡ್ ನಿರ್ಮಿಸಿಕೊಂಡು ವಾಸ ಮಾಡುತ್ತೇವೆ ಎಂದು ನಿವೇಶನ ರಹಿತರು ಆರೋಪಿಸಿದ್ದಾರೆ.

ಸ್ಥಳಕ್ಕೆ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ನಿವೇಶನ ರಹಿತರೊಂದಿಗೆ ಮಾತನಾಡಿದ ಅವರು, ಈ ಜಾಗ ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯ ಹೆಸರಿನಲ್ಲಿದೆ. 50 ಸೆಂಟ್ ಜಾಗ ಚೆಟ್ಟಳ್ಳಿ ಗ್ರಾಪಂ ಕಸ ವಿಲೇವಾರಿ ಘಟಕಕ್ಕೆ ಗುರುತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಕೃತಿ ವಿಕೋಪ ಸಂತ್ರಸ್ತರ 8 ಕುಟುಂಬಗಳು ಸೇರಿದಂತೆ 30ಕ್ಕೂ ಅಧಿಕ ಮಂದಿ ಈಗ ಜಾಗದಲ್ಲಿ ಶೆಡ್ ಗಳನ್ನು ನಿರ್ಮಿಸಿಕೊಂಡಿದ್ದು, ಆದಷ್ಟು ಬೇಗ ನಮಗೆ ನಿವೇಶನ ನೀಡುವಂತೆ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ