ಜಿಪಂನ ₹350 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ

KannadaprabhaNewsNetwork |  
Published : Jun 28, 2024, 12:46 AM IST
ಜಿಪಂ ಸಾಮಾನ್ಯ ಸಭೆ ನಡೆಯಿತು. | Kannada Prabha

ಸಾರಾಂಶ

2024- 25ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಅಧೀನ ಇಲಾಖೆಗಳಲ್ಲಿ ₹4011.05 ಲಕ್ಷ ವೆಚ್ಚದಲ್ಲಿ ಫಲಾನುಭವಿ ಕಾರ್ಯಕ್ರಮಗಳು, ₹26810.88 ಲಕ್ಷ ವೆಚ್ಚದಲ್ಲಿ ವೇತನ, ಹೊರಗುತ್ತಿಗೆ, ದಿನಗೂಲಿ ಸಿಬ್ಬಂದಿ ವೇತನ ಮತ್ತು ಕಚೇರಿ ವೆಚ್ಚ, ₹1421.99 ಲಕ್ಷ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ₹1014.13 ಲಕ್ಷ ವೆಚ್ಚದಲ್ಲಿ ಇತರೇ ಕಾರ್ಯಕ್ರಮಗಳು ಸೇರಿದಂತೆ ಒಟ್ಟು ₹35058.05 ಲಕ್ಷ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ.

ಕಾರವಾರ: ಉತ್ತರ ಕನ್ನಡ ಜಿಪಂಗೆ 2024- 25ನೇ ಸಾಲಿನಲ್ಲಿ ಲಿಂಕ್ ಡಾಕ್ಯುಮೆಂಟ್ ಅಡಿ ಅಧೀನ ಇಲಾಖೆಗಳಿಗೆ ಹಂಚಿಕೆಯಾದ ₹350.58 ಕೋಟಿ ಮೊತ್ತದ ಕ್ರಿಯಾಯೋಜನೆಗೆ ಜಿಪಂ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಿದರು.

2024- 25ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಅಧೀನ ಇಲಾಖೆಗಳಲ್ಲಿ ₹4011.05 ಲಕ್ಷ ವೆಚ್ಚದಲ್ಲಿ ಫಲಾನುಭವಿ ಕಾರ್ಯಕ್ರಮಗಳು, ₹26810.88 ಲಕ್ಷ ವೆಚ್ಚದಲ್ಲಿ ವೇತನ, ಹೊರಗುತ್ತಿಗೆ, ದಿನಗೂಲಿ ಸಿಬ್ಬಂದಿ ವೇತನ ಮತ್ತು ಕಚೇರಿ

ವೆಚ್ಚ, ₹1421.99 ಲಕ್ಷ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ₹1014.13 ಲಕ್ಷ ವೆಚ್ಚದಲ್ಲಿ ಇತರೇ ಕಾರ್ಯಕ್ರಮಗಳು ಸೇರಿದಂತೆ ಒಟ್ಟು ₹35058.05 ಲಕ್ಷ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ ಎಂದರು.

ಈ ಕ್ರಿಯಾ ಯೋಜನೆಯ ಅನುಷ್ಠಾನ ಸಂದರ್ಭದಲ್ಲಿ ಫಲಾನುಭವಿಗಳಿಗೆ ನೆರವು ನಿಡುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ತಿಳಿಸಿದ ಅವರು, ಸರ್ಕಾರಿ ಇಲಾಖೆಗಳ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬದಲಾಗಿ, ಶಾಲೆ, ಅಂಗನವಾಡಿ, ಆಸ್ಪತೆ ಮತ್ತು ಹಾಸ್ಟೆಲ್ ಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕ್ರಿಯಾಯೋಜನೆಯಲ್ಲಿ ರೂಪಿಸಿರುವ ಎಲ್ಲ ಕಾರ್ಯಕ್ರಮಗಳನ್ನು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಯೋಜನೆಯ ಸಂಪೂರ್ಣ ಗುರಿ ಸಾಧಿಸುವಂತೆ ಸೂಚನೆ ನೀಡಿದರು.

ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಆ್ಯಂಡ್ ಏಜೆನ್ಸಿಸ್‌ನ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ