ಕಾರವಾರ: ಉತ್ತರ ಕನ್ನಡ ಜಿಪಂಗೆ 2024- 25ನೇ ಸಾಲಿನಲ್ಲಿ ಲಿಂಕ್ ಡಾಕ್ಯುಮೆಂಟ್ ಅಡಿ ಅಧೀನ ಇಲಾಖೆಗಳಿಗೆ ಹಂಚಿಕೆಯಾದ ₹350.58 ಕೋಟಿ ಮೊತ್ತದ ಕ್ರಿಯಾಯೋಜನೆಗೆ ಜಿಪಂ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಿದರು.
ವೆಚ್ಚ, ₹1421.99 ಲಕ್ಷ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ₹1014.13 ಲಕ್ಷ ವೆಚ್ಚದಲ್ಲಿ ಇತರೇ ಕಾರ್ಯಕ್ರಮಗಳು ಸೇರಿದಂತೆ ಒಟ್ಟು ₹35058.05 ಲಕ್ಷ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ ಎಂದರು.
ಈ ಕ್ರಿಯಾ ಯೋಜನೆಯ ಅನುಷ್ಠಾನ ಸಂದರ್ಭದಲ್ಲಿ ಫಲಾನುಭವಿಗಳಿಗೆ ನೆರವು ನಿಡುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ತಿಳಿಸಿದ ಅವರು, ಸರ್ಕಾರಿ ಇಲಾಖೆಗಳ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬದಲಾಗಿ, ಶಾಲೆ, ಅಂಗನವಾಡಿ, ಆಸ್ಪತೆ ಮತ್ತು ಹಾಸ್ಟೆಲ್ ಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಕ್ರಿಯಾಯೋಜನೆಯಲ್ಲಿ ರೂಪಿಸಿರುವ ಎಲ್ಲ ಕಾರ್ಯಕ್ರಮಗಳನ್ನು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಯೋಜನೆಯ ಸಂಪೂರ್ಣ ಗುರಿ ಸಾಧಿಸುವಂತೆ ಸೂಚನೆ ನೀಡಿದರು.
ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಆ್ಯಂಡ್ ಏಜೆನ್ಸಿಸ್ನ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.