ಕೊಟ್ಟೂರು ವಾರ್ಡ್ ಅಭಿವೃದ್ಧಿಗೆ ₹36 ಕೋಟಿ ಅನುದಾನ: ನೇಮರಾಜ ನಾಯ್ಕ

KannadaprabhaNewsNetwork |  
Published : Jan 16, 2026, 01:30 AM IST
ಕೊಟ್ಟೂರಿನಲ್ಲಿ ಉಜ್ಜಿನಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ. ನೇಮರಾಜ ನಾಯ್ಕ ಭೂಮಿಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಕೊಟ್ಟೂರು ಪಟ್ಟಣದಲ್ಲಿ ಚಿರಿಬಿ, ಉಜ್ಜಯಿನಿ ರಸ್ತೆ ಸೇರಿ 18 ವಾರ್ಡ್‌ಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಇತ್ತೀಚೆಗೆ ಶಾಸಕ ಕೆ. ನೇಮರಾಜ ನಾಯ್ಕ ಭೂಮಿಪೂಜೆ ನೆರವೇರಿಸಿದರು.

ಕೊಟ್ಟೂರು: ಪಟ್ಟಣದ ಇತಿಹಾಸದಲ್ಲೇ ಎಲ್ಲ ವಾರ್ಡ್‌ಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೆಕೆಆರ್‌ಡಿಬಿ ಯೋಜನೆಯಡಿ ₹36 ಕೋಟಿ ಅನುದಾನ ನೀಡಲಾಗಿದೆ ಎಂದು ಶಾಸಕ ಕೆ. ನೇಮರಾಜ ನಾಯ್ಕ ಹೇಳಿದರು.

ಪಟ್ಟಣದಲ್ಲಿ ಚಿರಿಬಿ, ಉಜ್ಜಯಿನಿ ರಸ್ತೆ ಸೇರಿ 18 ವಾರ್ಡ್‌ಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದ ಅವರು ಮಾತನಾಡಿದರು. ಕೊಟ್ಟೂರಿನಲ್ಲಿನ 20 ವಾರ್ಡ್‌ಗಳಲ್ಲಿ ಸಿಸಿ ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ದೊಡ್ಡ ಮೊತ್ತದ ಅನುದಾನ ಪಡೆಯಲಾಗಿದೆ. ಮೊದಲ ಹಂತದಲ್ಲಿ ₹18 ಕೋಟಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು, ಕೆಲವೇ ದಿನಗಳಲ್ಲಿ ಉಳಿದ ₹18 ಕೋಟಿ ಅನುದಾನಕ್ಕೆ ವಿವಿಧ ಕಾಮಗಾರಿಗಳಿಗೆ ಪೂಜೆ ನಡೆಸಲಾಗುವುದು ಎಂದರು.

ಫೆ. 12ರಂದು ಕೊಟ್ಟೂರು ರಥೋತ್ಸವ ಹಿನ್ನೆಲೆಯಲ್ಲಿ ಕಾಮಗಾರಿಗೆ ವೇಗ ನೀಡುವಂತೆ ಮತ್ತು ಫೆ. 8ರೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿದೆ. ಉಜ್ಜಯಿನಿ ರಸ್ತೆಯನ್ನು ಪಿಎಲ್‌ಡಿ ಬ್ಯಾಂಕ್‌ನಿಂದ 2 ಕಿ.ಮೀ. ವರೆಗೆ ₹2 ಕೋಟಿ ವೆಚ್ಚದಲ್ಲಿ, ಚಿರಿಬಿ ರಸ್ತೆಯನ್ನು ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಗುತ್ತಿಗೆದಾರರು ಆರಂಭಿಸಲಿದ್ದಾರೆ. ಸ್ವಾಮಿ ರಥೋತ್ಸವಕ್ಕೆ ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ರಸ್ತೆಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು. ಜೆಪಿ ಬಡಾವಣೆ, ರಾಜೀವ್ ಬಡಾವಣೆ, ಎಲ್.ಬಿ. ಬಡಾವಣೆ, ಬಸವೇಶ್ವರ ಬಡಾವಣೆ ಸೇರಿ ಬಹುತೇಕ ವಾರ್ಡ್‌ಗಳಲ್ಲಿ ಕಾಮಗಾರಿ ನಡೆಯಲಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ: ಹ.ಬೊ. ಹಳ್ಳಿ ಪುರಸಭೆಯನ್ನು ನಗರಸಭೆಯಾಗಿ, ಕೊಟ್ಟೂರು, ಮರಿಯಮ್ಮನಹಳ್ಳಿ ಪ.ಪಂ.ಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಪತ್ರ ಮುಖೇನ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾಧಿಕಾರಿಗೆ ವರದಿ ನೀಡುವಂತೆ ಸಚಿವರು ಪತ್ರ ಬರೆದಿದ್ದಾರೆ. ಮೂರು ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಶಾಸಕ ಕೆ. ನೇಮಿರಾಜ ನಾಯ್ಕ ತಿಳಿಸಿದರು.

ಜಿಪಂ ಮಾಜಿ ಸದಸ್ಯ ಎಂಎಂಜೆ ಹರ್ಷವರ್ಧನ, ಜೆಡಿಎಸ್ ಕ್ಷೇತ್ರ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಮುಖಂಡರಾದ ಎಂಎಂಜೆ ಶೋಭಿತ್, ಕನ್ನಿಹಳ್ಳಿ ಚಂದ್ರಶೇಖರ, ಬೂದಿ ಶಿವಕುಮಾರ್, ಮಲ್ಲಿಕಾರ್ಜುನ, ಬಾವಿಕಟ್ಟಿ ಶಿವಾನಂದ, ಫಕ್ಕೀರಪ್ಪ, ಬಿಎಸ್‌ಆರ್ ಮೂಗಣ್ಣ, ಎಂ. ಕೊಟ್ರೇಶ್, ರುದ್ರಮುನಿ, ಎಂಜಿನಿಯರ್ ಸತೀಶ್, ಹ.ಬೊ.ಹಳ್ಳಿ ನಾಗರಾಜ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನದ ಸತ್ಯ ರೂಪಿತವಾಗಲು ನಡೆ ನುಡಿ ಶುದ್ಧಿಯಾಗಿರಲಿ
ಮಾರಕ ಯೋಜನೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ: ಎನ್‌.ಎಸ್‌. ಹೆಗಡೆ ಕರ್ಕಿ