ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಪಟ್ಟಣದ ಪಿಕೆಪಿಎಸ್ ಸಂಘದ ಆವರಣದಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ಪಿಕೆಪಿಎಸ್ನ 65ನೇ ವಾರ್ಷಿಕ ಸರ್ವಸಾಧಾರಣ ಸಭೆ ಉದ್ಘಾಟಿಸಿ ಮಾತನಾಡಿ, 2023-24ನೇ ಸಾಲಿನ ಅಂತ್ಯಕ್ಕೆ ಅಂದಾಜು ₹ 39,99,633 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಪ್ರಸಕ್ತ ವರ್ಷ ಶೇ.8 ಲಾಭಾಂಶ ವಿತರಿಸಲು ನಿರ್ಧರಿಸಲಾಗಿದೆ ಎಂದರು. ₹ 20,40,14169.93 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಸಂಘದಿಂದ ಒಟ್ಟು 1774 ಜನರಿಗೆ ₹13,75,83,706 ಕೋಟಿ ವಿವಿಧ ಸಾಲ ವಿತರಿಸಲಾಗಿದೆ ಎಂದು ತಿಳಿಸಿದರು.
ಮಹಾಲಿಂಗಪು ಭಾಗದ ಕೃಷಿ ಅಧಿಕಾರಿ ಟಿ.ಎಂ.ಡಾಗೆ ಮಾತನಾಡಿ, ಪಿಎಂ ಕಿಸಾನ್ ಸಹಾಯಧನ ಪಡೆಯುವ ಪ್ರತಿಯೊಬ್ಬ ರೈತರು ಇ ಕೆವೈಸಿ ಮಾಡಿಸಿಕೊಳ್ಳಬೇಕು. ರೈತ ಸೇವಾ ಕೇಂದ್ರದಲ್ಲಿ ಸುತ್ತಮುತ್ತಲಿನ 10 ಗ್ರಾಮಗಳ ರೈತರಿಗಾಗಿ ಮುಂಗಾರು ಹಂಗಾಮಿನ ಸೋಯಾಬೀನ್ ಮತ್ತು ಗೋವಿನಜೋಳ ಬೀಜಗಳು, ಪರಿಕರಗಳು ಲಭ್ಯವಿದ್ದು, ರೈತರು ಮಳೆಗಾಲ ಸ್ಥಿತಿ ನೋಡಿಕೊಂಡು ಬಿತ್ತನೆ ಮಾಡಬೇಕು ಎಂದರು.ಸಭೆಯಲ್ಲಿ 28ಕ್ಕೂ ಅಧಿಕ ವಿಷಯಗಳನ್ನು ಚರ್ಚಿಸಿ, ಸರ್ವಾನುಮತದ ಠರಾವು ಪಾಸ್ ಮಾಡಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ ಪದವಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮತ್ತು ಜಾಣ ಬಡವಿದ್ಯಾರ್ಥಿಗಳು ಸೇರಿದಂತೆ ಸುಮಾರು 38 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಇವರೊಂದಿಗೆ ಉತ್ತಮ ಗ್ರಾಹಕಾರದ ನೇತಾಜಿ ಶಿಂಧೆ, ಮಹಾಲಿಂಗ ಕೌಜಲಗಿ, ಗಿರಮಲ್ಲಪ್ಪ ಬರಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.