ಕನ್ನಡಪ್ರಭ ವಾರ್ತೆ ಬೆಂಗಳೂರು ದಕ್ಷಿಣವ್ಯಾಟ್ಸಪ್ ವಿಡಿಯೋ ಕರೆ ಮಾಡಿ ನಿಮ್ಮ ಖಾತೆಯಲ್ಲಿ ಮನಿಲ್ಯಾಂಡರಿಂಗ್ ನಡೆದಿದೆ. ನಿಮ್ಮನ್ನು ಮತ್ತು ನಿಮ್ಮ ಮನೆ ಅವರನ್ನು ಬಂಧಿಸಲಾಗುವುದು ಎಂದು ಬೆದರಿಕೆ ಹಾಕಿ ಮಹಿಳೆಯಿಂದ ಹಣವನ್ನು ವರ್ಗಾಯಿಸಿಕೊಂಡು ಮೋಸ ಮಾಡಿರುವ ಘಟನೆ ಬೇಗೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅದನ್ನು ಪರಿಶೀಲಿಸಿ ನಿಮಗೆ ವಾಪಸ್ಸು ನೀಡಲಾಗುವುದು ಎಂದು ₹39,74,000 ಹಣವನ್ನು ಮಹಿಳೆಯ ಖಾತೆಯಿಂದ ಆರೋಪಿ ಎಚ್ಡಿಎಫ್ಸಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಸಂಬಂಧ ಮಹಿಳೆ ಬೇಗೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೇಗೂರು ಪೋಲಿಸರು ದೂರಿನನ್ವಯ ಪ್ರಕರಣವನ್ನು ಕೈಗೆತ್ತಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸಿದಾಗ ಅದರಲ್ಲಿ ಒಂದು ಖಾತೆಗೆ ₹6,52,000 ವರ್ಗಾವಣೆಯಾಗಿ ಚೆಕ್ ಮೂಲಕ ಹಣ ಡ್ರಾ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ.ಎಲೆಕ್ಟ್ರಾನಿಕ್ ಸಿಟಿ ಪರಪ್ಪನ ಅಗ್ರಹಾರದಲ್ಲಿ ವಾಸವಾಗಿದ್ದು ಐಸ್ ಕ್ರೀಂ ವಿತರಕ ಕೆಲಸ ಮಾಡಿಕೊಂಡಿರುವ ಪಿ.ಕವಿಯರಸು (37)ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ಆರೋಪಿಯ ಮನೆಯಲ್ಲಿ ₹1,07,100/ ಹಣ ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಉಪ ಪೊಲೀಸ್ ಆಯುಕ್ತೆ ಸಾರಾ ಫಾತಿಮಾ
ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತ ಕೆ.ಎಂ.ಸತೀಶ ನೇತೃತ್ವದಲ್ಲಿ ಬೇಗೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣಕುಮಾರ್ಗ ಹಾಗೂ ಸಿಬ್ಬಂದಿಯಾದ ಗಣೇಶ್, ಜ್ಯೋತಿಬಾ ಪಾಟೀಲ್, ರಿಯಾಜ್ ಮತ್ತು ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.