ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕೆಕೆಎಂಪಿ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಬೆಂಗಳೂರು ವಿರಂಪುರದಲ್ಲಿರುವ ಗೋಸಾಯಿ ಮಠದ ಮಂಜುನಾಥ ಭಾರತಿ ಸ್ವಾಮೀಜಿ ಅವರು ವಹಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಎಸ್.ಸುರೇಶರಾವ ಸಾಠೆರವರು ಅಧ್ಯಕ್ಷತೆ ವಹಿಸಲಿದ್ದಾರೆ. ನಾಯಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಸಂಸದರಾದ ರಮೇಶ ಜಿಗಜಿಣಗಿ, ಗೋವಿಂದ ಕಾರಜೋಳ, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ (ಕೆಕೆಎಂಪಿ) ಎಲ್ಲಾ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ.
ಸಮಾಜದ ಯುವಪೀಳಿಗೆಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಬಿಂಬಿಸುವ ವಿಶೇಷ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುತ್ತಿದೆ. ಸಮಾಜವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಪರಿಷತ್ತಿನ ತಾಲೂಕಾ ಸಮಿತಿ ಶಾಖೆಗಳನ್ನು ಸಕ್ರಿಯಗೊಳಿಸಲಾಗಿದೆ.ಈ ಸಮಾರಂಭದಲ್ಲಿ ಸಮಾಜದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ವಿಧವಾ ವೇತನ ವಿತರಿಸಲಾಗುವುದು. ಜಿಲ್ಲೆಯ ಎಲ್ಲ ಮರಾಠಾ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು. ಮಾಹಿತಿಗಾಗಿ ಜಿಲ್ಲಾಧ್ಯಕ್ಷ ಬಿ.ಬಿ.ಶಿವಾಳಕರ (7676573249), ಕಾರ್ಯದರ್ಶಿ ರಾಮು ಜಾಧವ (9980330563) ಅಥವಾ ಖಜಾಂಜಿ ಸುಭಾಷ ಚವಾಣ (9448783886) ಅವರನ್ನು ಸಂಪರ್ಕಿಸಬೇಕೆಂದು ಅವರು ಕೋರಿದರು.
ಪ್ರಧಾನ ಕಾರ್ಯದರ್ಶಿ ರಾಮು ಜಾಧವ ಮಾತನಾಡಿ, ಜೂನ್ 6ರಂದು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ ದಿನವಾಗಿರುವುದರಿಂದ ಮರಾಠ ಸಮಾಜದ ಹಿರಿಯರು ಕ್ಷತ್ರಿಯ ಮರಾಠ ಪರಿಷತ್ತಿನ ಸಹಯೋಗದಲ್ಲಿ ರಾಜ್ಯಮಟ್ಟದ ಸಭೆ ನಡೆಯಲಿದೆ. ಜೂನ್ 7ರಂದು ಜಯಂತ್ಯುತ್ಸವ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಜಿಲ್ಲೆಯ ಸಮಾಜದ ಬಂಧುಗಳು ಹಾಗೂ ಹಿಂದೂ ಸಮುದಾಯದ ಎಲ್ಲರು ಭಾಗವಹಿಸಬೇಕು ಎಂದು ವಿನಂತಿಸಿದರು.