ಸೆ.19 ರಂದು 3ನೇ ರಾಷ್ಟ್ರೀಯ ಲೋಕ್‌ ಅದಾಲತ್: ನ್ಯಾಯಾಧೀಶ ಎಚ್‌. ಜೆ. ಮರುಳಸಿದ್ದಾರಾಧ್ಯ

KannadaprabhaNewsNetwork |  
Published : Sep 13, 2026, 01:15 AM IST
ಸೆ.19 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್‌ ಅದಾಲತ್‌ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಚ್‌. ಜೆ. ಮರುಳಸಿದ್ದಾರಾಧ್ಯ ಮಾತನಾಡಿದರು. | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲ ನ್ಯಾಯಾಲಯಗಳ ಆವರಣದಲ್ಲಿ ಸೆ.19 ರಂದು 3ನೇ ರಾಷ್ಟ್ರೀಯ ಲೋಕ್‌ ಅದಾಲತ್‌ ಆಯೋಜನೆಗೊಂಡಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ಅತಿ ಶೀಘ್ರವಾಗಿ ರಾಜಿ ಸಂಧಾನದ ಮೂಲಕ ಪರಿಹಾರ ಕೊಂಡುಕೊಳ್ಳಲು ಸುವರ್ಣಾಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್‌. ಜೆ. ಮರುಳಸಿದ್ದಾರಾಧ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲ ನ್ಯಾಯಾಲಯಗಳ ಆವರಣದಲ್ಲಿ ಸೆ.19 ರಂದು 3ನೇ ರಾಷ್ಟ್ರೀಯ ಲೋಕ್‌ ಅದಾಲತ್‌ ಆಯೋಜನೆಗೊಂಡಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ಅತಿ ಶೀಘ್ರವಾಗಿ ರಾಜಿ ಸಂಧಾನದ ಮೂಲಕ ಪರಿಹಾರ ಕೊಂಡುಕೊಳ್ಳಲು ಸುವರ್ಣಾಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್‌. ಜೆ. ಮರುಳಸಿದ್ದಾರಾಧ್ಯ ಹೇಳಿದರು.

ರಾಷ್ಟ್ರೀಯ ಲೋಕ್‌ ಅದಾಲತ್‌ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ್‌ ಅದಾಲತ್‌ನಲ್ಲಿ ರಾಜಿಯಾಗಬಹುದಾದ ವಿವಿಧ ಪ್ರಕರಣಗಳನ್ನು ಪರಿಗಣಿಸಿ ಪಕ್ಷಗಾರರ ಪರಸ್ಪರ ಒಪ್ಪಿಗೆಯೊಂದಿಗೆ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗುವುದು. ಇದರಿಂದ ಸಮಯ ಹಾಗೂ ಹಣ ಉಳಿತಾಯವಾಗುವುದರ ಜತೆಗೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪ್ರಕರಣಗಳ ವಿವರ: ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್‌ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್‌ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರೀಯಲ್‌ ಎಸ್ಟೇಟ್‌ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್‌ ಹಾಗೂ ನೀರಿನ ಶುಲ್ಕಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಮತ್ತು ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್‌ ಹಾಗೂ ಇತರೆ ಪ್ರಕರಣಗಳು ಮತ್ತು ವೈವಾಹಿಕ ಕುಟುಂಬ ನ್ಯಾಯಾಲಯ (ವಿಚ್ಛೇದನೆಯನ್ನು ಹೊರತುಪಡಿಸಿ) ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ನ್ಯಾ. ಎಚ್‌. ಜೆ. ಮರುಳಸಿದ್ದಾರಾಧ್ಯ ತಿಳಿಸಿದರು.

7,237 ಪ್ರಕರಣಗಳ ಇತ್ಯರ್ಥ: ಜುಲೈನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಜರುಗಿದ್ದ ಲೋಕ್‌ ಅದಾಲತ್‌ನಲ್ಲಿ 7,237 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 3ನೇ ಲೋಕ್‌ ಅದಾಲತ್‌ನಲ್ಲಿ 4,776 ಪ್ರಕರಣಗಳು ಗುರುತಿಸಲಾಗಿದ್ದು, ಅದರಲ್ಲಿ ಸುಮಾರು 1,440 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥ ಮಾಡಲಾಗಿದೆ. ಒಂದೂವರೆ ವಾರದಲ್ಲಿ ಹೆಚ್ಚಿನ ಪ್ರಕರಣಗಳು ವಿಲೇವಾರಿ ಆಗುವಂತಹ ಎಲ್ಲಾ ಸಾಧ್ಯತೆಗಳಿವೆ ಎಂದು ನ್ಯಾ. ಎಚ್‌. ಜೆ. ಮರುಳಸಿದ್ದಾರಾಧ್ಯ ತಿಳಿಸಿದರು. ಸದಸ್ಯ ಕಾರ್ಯದರ್ಶಿ ನ್ಯಾ. ಮರಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸೂಕ್ತ ಮಾರ್ಗದರ್ಶನ, ಶುಲ್ಕ ಮರುಪಾವತಿ: ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೆ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು, ವಿವಾದ ತೀರ್ಮಾನವಾಗುತ್ತದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಿಕೊಂಡರೆ, ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು, ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕೆ ಇದು ವಿಶೇಷ ಅವಕಾಶ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಕಪಳ್ಳಿ ತಾಂಡಾದಲ್ಲಿ ಶ್ರಾವಣ ಮಾಸದ ಪೂಜೆ
ಕೋಡಿಮಠದಲ್ಲಿ ಶ್ರಾವಣ ಮಾಸದ ವಿಶೇಷ ಕಾರ್ಯಕ್ರಮಗಳಿಗೆ ತೆರೆ