ಕನ್ನಡಪ್ರಭ ವಾರ್ತೆ ಬಳ್ಳಾರಿ
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ ವಿಭಾಗಗಳು ಆಯೋಜಿಸಿದ್ದ ‘371 (ಜೆ) ಸಮರ್ಪಕ ಅನುಷ್ಠಾನ ಏನು? ಏಕೆ? ಹೇಗೆ? ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಹಳ ಮುಖ್ಯವಾಗಿ ಶಿಕ್ಷಣ, ಉದ್ಯೋಗ ಆರೋಗ್ಯ ಕ್ಷೇತ್ರಗಳಲ್ಲಿ ಆಗುವ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆರಂಭದಲ್ಲಿ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಐದು ಜಿಲ್ಲೆಗಳನ್ನು ಮಾತ್ರ ಸೇರಿಸಲಾಗಿತ್ತು. ನಂತರ ಹೋರಾಟದ ಪ್ರತಿಫಲವಾಗಿ ಬಳ್ಳಾರಿಯನ್ನು ಸೇರಿಸಲಾಯಿತು. ಈ ಹೊತ್ತಿಗೂ ಕೆಲವು ಜಿಲ್ಲೆಯವರಿಗೆ ಬಳ್ಳಾರಿಯನ್ನು 371 ನೇ(ಜೆ) ವ್ಯಾಪ್ತಿಗೆ ಸೇರಿಸಿರುವುದು ಇಷ್ಟವಿಲ್ಲ. ಇದರ ವಿರುದ್ಧವು ಹೋರಾಟಗಳಾದವು ಎಂದು ನೆನಪಿಸಿಕೊಂಡರು.ಅಭಿವೃದ್ಧಿ ಕಲ್ಪನೆಯನ್ನು ಸಂವಿಧಾನದ ಹಕ್ಕಾಗಿ ಸೇರಿಸಿದ ಶ್ರೇಯಸ್ಸು ಹಿರಿಯ ರಾಜಕೀಯ ಮುತ್ಸದ್ಧಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಲ್ಲುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಮಿತಿಗೆ ಕೇಂದ್ರ ಸರ್ಕಾರದಿಂದ ಇದುವರೆಗೂ ಸಮರ್ಪಕವಾಗಿ ಹಣ ಬಿಡುಗಡೆಯಾಗದೆ ಇರುವುದು ದುರಂತದ ಸಂಗತಿ ಎಂದು ವಿಷಾದಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಹೊನ್ನೂರಾಲಿ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗಬೇಕಿದ್ದ 371ನೇ ಜೆ ಯಶಸ್ಸಿನ ಹಿಂದೆ ಅನೇಕ ಹೋರಾಟಗಳಿವೆ. ಇದು ಸಾಮಾಜೀಕರಣ ಮತ್ತು ನಮ್ಮ ಪ್ರಜ್ಞೆಯ ಭಾಗವಾಗಿ ಮುಂದುವರಿಯಬೇಕು. ಇಂತಹ ವಿಷಯದ ಬಗೆಗೆ ವಿದ್ಯಾರ್ಥಿಗಳಲ್ಲಿ ಅರಿವನ್ನುಂಟು ಮಾಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಎಚ್.ಕೆ. ಮಂಜುನಾಥ ರೆಡ್ಡಿ ಅವರು, ವಿದ್ಯಾರ್ಥಿಗಳು ಜನಪರ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಈ ಭಾಗಕ್ಕಾಗುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಹೇಳಿದರು.