ಶೀಘ ಸಂಪುಟಕ್ಕೆ ಪುಟ್ಟದೊಂದು ಸರ್ಜರಿ ರಾಜ್ಯದ 4-5 ಸಚಿವರಿಗೆ ಕೊಕ್‌? 10 ಸಚಿವರ ಬಗ್ಗೆ ಅಸಮಾಧಾನ

KannadaprabhaNewsNetwork |  
Published : Aug 04, 2024, 01:25 AM ISTUpdated : Aug 04, 2024, 08:14 AM IST
ವಿಧಾನಸೌಧ | Kannada Prabha

ಸಾರಾಂಶ

ರಾಜ್ಯ ರಾಜಕಾರಣದಲ್ಲಿ ನಡೆದಿರುವ ವಿಪ್ಲವಗಳ ನಡುವೆಯೇ ಮುಂದಿನ ಒಂದೆರಡು ತಿಂಗಳೊಳಗೆ ಸಂಪುಟಕ್ಕೆ ಪುಟ್ಟದೊಂದು ಸರ್ಜರಿಯಾಗುವ ಸಾಧ್ಯತೆಗಳೂ ಮೂಡಿವೆ.

 ಬೆಂಗಳೂರು :  ರಾಜ್ಯ ರಾಜಕಾರಣದಲ್ಲಿ ನಡೆದಿರುವ ವಿಪ್ಲವಗಳ ನಡುವೆಯೇ ಮುಂದಿನ ಒಂದೆರಡು ತಿಂಗಳೊಳಗೆ ಸಂಪುಟಕ್ಕೆ ಪುಟ್ಟದೊಂದು ಸರ್ಜರಿಯಾಗುವ ಸಾಧ್ಯತೆಗಳೂ ಮೂಡಿವೆ.

ಇದಕ್ಕೆ ಕಾರಣ ರಾಜ್ಯದ ಸಚಿವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಪಡೆದುಕೊಂಡಿರುವ ಆಂತರಿಕ ವರದಿ. ಖಾಸಗಿ ಸಂಸ್ಥೆಯೊಂದರಿಂದ ಕಾಂಗ್ರೆಸ್ ಹೈಕಮಾಂಡ್‌ ರಾಜ್ಯದ ಸಚಿವರ ಕಾರ್ಯವೈಖರಿ ಹಾಗೂ ಸಾಧನೆ ಕುರಿತು ವರದಿಯನ್ನು ಪಡೆದಿದ್ದು, ಈ ವರದಿಯ ಪ್ರಕಾರ ಸುಮಾರು 10 ಸಚಿವರು ನಿರೀಕ್ಷಿತ ಸಾಧನೆ ತೋರಿಲ್ಲ.

ಇದರಿಂದ ಸಾರ್ವಜನಿಕ ವಲಯದಲ್ಲಿ ರಾಜ್ಯ ಸಚಿವ ಸಂಪುಟದ ಇಮೇಜ್‌ ಉತ್ತಮವಾಗಿಲ್ಲ. ಇದನ್ನು ಸರಿಪಡಿಸಿಕೊಳ್ಳಲು ಸಾಧನೆ ತೋರದ ಸಚಿವರ ಪೈಕಿ ಕನಿಷ್ಠ 4-5 ಸಚಿವರ ಬದಲಾವಣೆ ಮಾಡಬೇಕು ಎಂದು ಶಿಫಾರಸು ಮಾಡಿದೆ.

ಇದರ ಆಧಾರದ ಮೇಲೆ ಕಾಂಗ್ರೆಸ್‌ ಹೈಕಮಾಂಡ್‌ ಒಂದೆರಡು ತಿಂಗಳೊಳಗೆ ಸಂಪುಟಕ್ಕೆ ಪುಟ್ಟ ಸರ್ಜರಿ ಮಾಡುವಂತೆ ರಾಜ್ಯ ನಾಯಕತ್ವಕ್ಕೆ ಸೂಚನೆ ನೀಡುವ ಸಾಧ್ಯತೆಯಿದ್ದು, ಈಗಾಗಲೇ ಇಂತಹದೊಂದು ಸುಳಿವನ್ನು ರಾಜ್ಯ ನಾಯಕತ್ವಕ್ಕೆ ನೀಡಲಾಗಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ.

ಈ ಬೆಳವಣಿಗೆಯ ನಡುವೆ ಭಾನುವಾರ ನಗರಕ್ಕೆ ಆಗಮಿಸಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌ ಮತ್ತು ರಣದೀಪ್‌ ಸುರ್ಜೇವಾಲ ಅವರು ನಡೆಸಲಿರುವ ಸಚಿವರ ಸಭೆಯಲ್ಲಿಯೂ ಈ ವರದಿ ಬಗ್ಗೆ ಚರ್ಚಿಸಲಿದ್ದು, ಸಮರ್ಪಕವಾಗಿ ಕೆಲಸ ಮಾಡದ ಸಚಿವರಿಗೆ ಕೊನೆಯ ಎಚ್ಚರಿಕೆಯನ್ನು ನೀಡಲಿದ್ದಾರೆ ಎಂದು ಈ ಮೂಲಗಳು ಹೇಳಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!