ಕುಂದಗೋಳ:
ಈ ಭ್ರಷ್ಟಾಚಾರಕ್ಕೆ ಕಾರಣರಾದ ಪಿಡಿಒ ಹಾಗೂ ಗ್ರಾಪಂ ಆಡಳಿತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಾಲ್ಕು ದಿನಗಳ ಕಾಲಮಿತಿ ನೀಡಲಾಗಿದೆ. ಒಂದೂವರೆ ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ. ಕಳೆದ ತಿಂಗಳು ಧರಣಿ ನಡೆಸಿದ ವೇಳೆ ಭರವಸೆ ಮೇರೆಗೆ ಧರಣಿ ಹಿಂಪಡೆಯಲಾಗಿತ್ತು. ಈ ವರೆಗೂ ಅಧಿಕಾರಿಗಳಿಂದ ಸ್ಪಂದನೆ ದೊರೆಯದ ಹಿನ್ನೆಲೆ ಸೋಮವಾರ ಬೆಳಗ್ಗೆಯಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಸ್ಥಳಕ್ಕೆ ಆಗಮಿಸಿದ ಸಿಪಿಐ ಮತ್ತು ಪಿಎಸ್ಐ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ, ಅದು ವಿಫಲವಾಯಿತು.
ಭರವಸೆ ಬಳಿಕ ಸತ್ಯಾಗ್ರಹ ಅಂತ್ಯ:ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಹಾಗೂ ಗ್ಯಾರಂಟಿ ಯೋಜನಾ ತಾಲೂಕು ಅಧ್ಯಕ್ಷ ಸತೀಶ ಕೊಬ್ಬಯ್ಯನವರ ಪ್ರತಿಭಟನಾ ನಿರತನ ಮನವೊಲಿಕೆಗೆ ಮುಂದಾದರು. ಧರಣಿ ನಿರತ ಮಂಜುನಾಥನ ಬೇಡಿಕೆ ಸ್ವೀಕರಿಸಿ, 4 ದಿನದಲ್ಲಿ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ನಾವು ಸಹ ನಿಮ್ಮೊಟ್ಟಿಗೆ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ತಕ್ಷಣವೇ ಪಿಡಿಒ ಅವರಿಗೆ ಫೋನ್ ಮೂಲಕ ಸರಿಯಾಗಿ ಕೆಲಸ ನಿರ್ವಹಿಸಲು ಸೂಚನೆ ನೀಡಿದರು ಹಾಗೂ ಇಒ ಅವರಿಗೆ ಈ ಕುರಿತು ಕ್ರಮವಹಿಸಲು ಸೂಚಿಸಿದ ನಂತರ ಮಂಜುನಾಥ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದರು.