ಶೀಘ್ರವೇ ಕಾಂಗ್ರೆಸ್‌ನ 40 ಶಾಸಕರು ಹೊರಗೆ ಬರುತ್ತಾರೆ: ನಳಿನ್‌ ಕುಮಾರ್‌

KannadaprabhaNewsNetwork |  
Published : Nov 22, 2023, 01:00 AM IST
ಸಂಸದ ನಳಿನ್‌ ಕುಮಾರ್‌ ಕಟೀಲ್‌  | Kannada Prabha

ಸಾರಾಂಶ

ಕಾಂಗ್ರೆಸ್‌ನ ಆಂತರಿಕ ಜಗಳದ ನಡುವೆಯೇ ಮರಿ ಖರ್ಗೆ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್‌ ಒಡೆಯುತ್ತಿದ್ದು, ಹಸ್ತದ ಒಳಗೆ ಹಸ್ತದ ಆಪರೇಷನ್‌ ಆಗುತ್ತಿದೆ. ಈ ಭಯದಿಂದ ಕಾಂಗ್ರೆಸ್‌ನವರು ಬಿಜೆಪಿಯಿಂದ‌ ಬರ್ತಾರೆ ಎಂದು ದಾರಿ ತಪ್ಪಿಸುತ್ತಾ ಇದ್ದಾರೆ. ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್‌ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ

ಕನ್ನಡಪ್ರಭ ವಾರ್ತೆ ಮಂಗಳೂರು

ಕಾಂಗ್ರೆಸ್‌ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಮತ್ತು ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ನ 30-40 ಶಾಸಕರು ಹೊರಗೆ ಬರಲಿದ್ದಾರೆ ಎಂದು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಆಂತರಿಕ ಜಗಳದ ನಡುವೆಯೇ ಮರಿ ಖರ್ಗೆ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್‌ ಒಡೆಯುತ್ತಿದ್ದು, ಹಸ್ತದ ಒಳಗೆ ಹಸ್ತದ ಆಪರೇಷನ್‌ ಆಗುತ್ತಿದೆ. ಈ ಭಯದಿಂದ ಕಾಂಗ್ರೆಸ್‌ನವರು ಬಿಜೆಪಿಯಿಂದ‌ ಬರ್ತಾರೆ ಎಂದು ದಾರಿ ತಪ್ಪಿಸುತ್ತಾ ಇದ್ದಾರೆ. ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್‌ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ ಎಂದರು.

ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವೆಲ್‌ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು. ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಕೂಡ ಆಗುತ್ತಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ನಡೆದಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದರೂ ಬಂಧನ ಆಗುತ್ತಿಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ ಎಂದರು. ರಾಜ್ಯದಿಂದ ಬಿಡಿಗಾಸು ಇಲ್ಲ: ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ನಡೆಯುತ್ತಿದೆ. ರಾಜ್ಯದಿಂದ ಒಂದು ರು. ಬಿಡಿಗಾಸು ಬಿಡಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ. ಮೂರ್ನಾಲ್ಕು ತಿಂಗಳು‌ ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ನಳಿನ್‌ ಕುಮಾರ್‌ ಮಾರ್ಮಿಕವಾಗಿ ಹೇಳಿದರು.ಇಂದು ರಾಜ್ಯಾಧ್ಯಕ್ಷಗೆ ಭರ್ಜರಿ ಸ್ವಾಗತ:

ನ.22ರಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅವರನ್ನು ವಿಮಾನ ನಿಲ್ದಾಣದಿಂದ ಸ್ವಾಗತಿಸುತ್ತೇವೆ. ಅಲ್ಲಿಂದ ಮೆರವಣಿಗೆ ಮೂಲಕ ಮಂಗಳೂರಿನ ಸಿ.ವಿ.ನಾಯಕ್‌ ಹಾಲ್‌ನಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಬಳಿಕ ಒಂದಷ್ಟು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ