ಸಂದೀಪ್ ವಾಗ್ಲೆ
ದಶಕದ ಹಿಂದೆ ಕರಾವಳಿಯ ಗ್ರಾಮಾಂತರದಲ್ಲಿ ಮಾತ್ರವಲ್ಲ, ನಗರ ಪ್ರದೇಶಗಳಲ್ಲೂ ಸ್ವಚ್ಛಂದವಾಗಿ ಓಡಾಡಿಕೊಂಡಿದ್ದ ದನ- ಕರುಗಳು ಈಗ ಕಾಣಸಿಗುವುದೇ ಅಪರೂಪ. ಯಾಕೆಂದರೆ ಹತ್ತೇ ವರ್ಷಗಳಲ್ಲಿ ದ.ಕ. ಜಿಲ್ಲೆಯ ಗೋ ಸಂತತಿ ಶೇ.40ಕ್ಕೂ ಅಧಿಕ ಕ್ಷೀಣಿಸಿದೆ!
ಹೌದು. ಕರಾವಳಿ ಜಿಲ್ಲೆಯಲ್ಲೀಗ ಗೋವು ಸಾಕುವ ಆಸಕ್ತಿ ಗಣನೀಯವಾಗಿ ತಗ್ಗಿದೆ. ಆದರೆ ಗೋ ಹೆಸರಿನ ರಾಜಕಾರಣ ಮಾತ್ರ ಹೆಚ್ಚಾಗುತ್ತಲೇ ಇದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಪ್ರತಿ 5 ವರ್ಷಗಳಿಗೊಮ್ಮೆ ಜಾನುವಾರು ಗಣತಿ ಮಾಡುತ್ತದೆ. ಅದರ ಅಂಕಿ ಅಂಶಗಳ ಪ್ರಕಾರ ದ.ಕ. ಜಿಲ್ಲೆಯಲ್ಲಿ 2007ರಲ್ಲಿದ್ದ ಜಾನುವಾರು (ಹಸು, ಎಮ್ಮೆ)ಗಳ ಸಂಖ್ಯೆ 2019ರ ವೇಳೆಗೆ ಶೇ.40ರಷ್ಟು ಕುಸಿದಿದೆ. 2019ರಿಂದೀಚೆಗೆ (ಹೊಸ ಗಣತಿ ಇನ್ನಷ್ಟೇ ಆಗಬೇಕಿದೆ) ಈ ಸಂಖ್ಯೆ ಇನ್ನಷ್ಟು ಕುಸಿದಿರುವ ಸಾಧ್ಯತೆಯನ್ನು ಅಧಿಕಾರಿಗಳು ಅಂದಾಜಿಸಿದ್ದಾರೆ.ಗೋ ಸಂತತಿ ಎಷ್ಟಿತ್ತು, ಎಷ್ಟಿದೆ?:
ಅಳಿವಿನಂಚಿಗೆ ಸ್ಥಳೀಯ ಗೋತಳಿ!:
ಮಿಶ್ರತಳಿಯ ಗೋವುಗಳು 2007ರಲ್ಲಿ 1,66,771 ಇದ್ದರೆ, 2019ರಲ್ಲಿ 1,84,572ಕ್ಕೆ ಏರಿಕೆಯಾಗಿವೆ. ಉಳಿದಂತೆ ಎಮ್ಮೆಗಳು 2007ರಲ್ಲಿ 15,119 ಇದ್ದರೆ, 2012ರಲ್ಲಿ 3700, 2019ರಲ್ಲಿ 1832 ಇದ್ದವು.
ಗೋ ಸಂತತಿ ತೀವ್ರ ಇಳಿಮುಖವಾಗುತ್ತಿರುವ ಕುರಿತು ‘ಕನ್ನಡಪ್ರಭ’ದೊಂದಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ, ಪ್ರಸ್ತುತ ಹಿಂದಿನ ತಲೆಮಾರಿನವರು ಮಾತ್ರ ಗೋ ಸಾಕಣೆಯಲ್ಲಿ ತೊಡಗಿದ್ದಾರೆ. ಯುವ ಜನಾಂಗ ಹೈನುಗಾರಿಕೆಯಲ್ಲಿ ಆಸಕ್ತಿ ವಹಿಸುತ್ತಿಲ್ಲ. ಜತೆಗೆ ಕಾರ್ಮಿಕರ ಸಮಸ್ಯೆ ದೊಡ್ಡ ಮಟ್ಟದಲ್ಲಿದೆ. ಸಣ್ಣ ಸಣ್ಣ ಹಿಡುವಳಿಗಳ ಕಾರಣದಿಂದ ಜಾನುವಾರು ಸಾಕಣೆಗೆ ಅವಕಾಶ ಕಡಿಮೆಯಾಗಿದೆ. ಮುಖ್ಯವಾಗಿ ಕಳೆದ 10 ವರ್ಷಗಳಲ್ಲಿ ಬತ್ತ ಬೇಸಾಯ 45 ಸಾವಿರ ಹೆಕ್ಟೇರ್ನಿಂದ 9 ಸಾವಿರ ಹೆ.ಗೆ ಇಳಿದಿದೆ. ವಾಣಿಜ್ಯ, ತೋಟಗಾರಿಕೆ ಬೆಳೆಗಳು ಜಾಸ್ತಿಯಾಗುತ್ತಿರುವುದೂ ಗೋ ಸಂತತಿ ಇಳಿಮುಖವಾಗಲು ಕಾರಣ ಎಂದು ಹೇಳುತ್ತಾರೆ.
- ಡಾ.ಅರುಣ್ ಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು.