ಶ್ರೀಶೈಲದಲ್ಲಿ 400 ಕೊಠಡಿ ಸಮುಚ್ಚಯ: ಶ್ರೀಗಳು

KannadaprabhaNewsNetwork |  
Published : Feb 15, 2025, 12:34 AM IST
ಶ್ರೀಗಳು | Kannada Prabha

ಸಾರಾಂಶ

ಸರ್ಕಾರ ಹತ್ತು ಎಕರೆ ಭೂಮಿ ನೀಡಿದ್ದು, 5 ಎಕರೆ ಭೂಮಿ ಸ್ವಾಧೀನಕ್ಕೆ ಪಡೆದು ಅದರಲ್ಲಿ ಭಕ್ತರಿಗಾಗಿ ವಸತಿ ಕೊಠಡಿ ಹಾಗೂ ಸುವ್ಯವಸ್ಥಿತ ಆಸ್ಪತ್ರೆಯ ನಿರ್ಮಾಣ ಕಾರ್ಯ ನಡೆದಿದೆ. ಭಕ್ತರು ತರುವ ಕಂಬಿಗಳ ಶೇಖರಣೆಗಾಗಿ ಮಂಟಪದ ಕಾಮಗಾರಿ ಕೈಕೊಳ್ಳಲಾಗಿದೆ.

ಹುಬ್ಬಳ್ಳಿ:

ಪಂಚಪೀಠದಲ್ಲಿ‌ ಒಂದಾದ ಶ್ರೀಶೈಲ ಕ್ಷೇತ್ರದಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ 400 ವಸತಿ ಕೊಠಡಿಗಳ ನಿರ್ಮಾಣ ಕಾರ್ಯ ಕೈಕೊಳ್ಳಲಾಗಿದೆ ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಉಣಕಲ್ ಸಿದ್ದಪ್ಪಜ್ಜ ಅವರ ನೂತನ ಶಿಲಾ ಮಂಟಪ ಕಾರ್ಯವನ್ನು ಶುಕ್ರವಾರ ಸಂಜೆ ವೀಕ್ಷಿಸಿ, ದೇವಸ್ಥಾನ ಕಮಿಟಿ ನೀಡಿದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸರ್ಕಾರ ಹತ್ತು ಎಕರೆ ಭೂಮಿ ನೀಡಿದ್ದು, 5 ಎಕರೆ ಭೂಮಿ ಸ್ವಾಧೀನಕ್ಕೆ ಪಡೆದು ಅದರಲ್ಲಿ ಭಕ್ತರಿಗಾಗಿ ವಸತಿ ಕೊಠಡಿ ಹಾಗೂ ಸುವ್ಯವಸ್ಥಿತ ಆಸ್ಪತ್ರೆಯ ನಿರ್ಮಾಣ ಕಾರ್ಯ ನಡೆದಿದೆ. ಭಕ್ತರು ತರುವ ಕಂಬಿಗಳ ಶೇಖರಣೆಗಾಗಿ ಮಂಟಪದ ಕಾಮಗಾರಿ ಕೈಕೊಳ್ಳಲಾಗಿದೆ ಎಂದು ಹೇಳಿದರು.

ಉಣಕಲ್ ಸಿದ್ದಪ್ಪಜ್ಜ ದೇವಮಾನವರಾಗಿ ಭಕ್ತರ ಇಷ್ಟಾರ್ಥ ಪೂರೈಸುವ ಸಿದ್ದಿಪುರುಷರು. ದೇವಸ್ಥಾನ ಸಮಿತಿ ನೂತನ ಶಿಲಾಮಂಟಪ ನಿರ್ಮಾಣ ಕಾರ್ಯ ಹಮ್ಮಿಕೊಂಡಿದೆ. ಅದಕ್ಕೆ ಭಕ್ತ ಸಮೂಹ ಕೋಟಿ, ಕೋಟಿ ದೇಣಿಗೆ ನೀಡಿದ್ದು ಸಿದ್ದಪ್ಪಜ್ಜನ ಅಸ್ತಿತ್ವಕ್ಕೆ ಹಿಡಿದ ಕನ್ನಡಿ ಎಂದರು.

ಸಮಿತಿ ಅಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಆರೋಗ್ಯ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿ ಮಾತನಾಡಿ, ಶಿಲಾ ಮಂಟಪ ನಿರ್ಮಾಣಕ್ಕೆ ₹ 3 ಕೋಟಿ ಅಂದಾಜು ಮಾಡಲಾಗಿದೆ ಎಂದು ಹೇಳಿದರು.ಸಮಿತಿ ಸದಸ್ಯರಾದ ಶಿವಾಜಿ ಕನ್ನಿಕೊಪ್ಪ, ರಾಮಣ್ಣ ಪದ್ಮಣ್ಣವರ, ಗುರುಸಿದ್ದಪ್ಪ ಬೆಂಗೇರಿ, ಗುರುಸಿದ್ದಪ್ಪ ಮೆಣಸಿನಕಾಯಿ, ಶತಾಯು ಚಿಕ್ಕಮಠ ಅಜ್ಜ, ಸಿದ್ದನಗೌಡ ಕಾಮಧೇನು, ಜಯಮ್ಮ ಹಿರೇಮಠ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!