ಹುಬ್ಬಳ್ಳಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮೇಯರ್ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ "ಮೇಯರ್ ಜತೆ ಮಾತುಕತೆ " ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 41 ದೂರುಗಳು ಬಂದವು. ಸ್ವಚ್ಛತೆ, ಕಸ ವಿಲೇವಾರಿ, ಬೀದಿದೀಪ ನಿರ್ವಹಣೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಸಾರ್ವಜನಿಕರು ಮೇಯರ್ ಬಳಿ ಅಳಲು ತೋಡಿಕೊಂಡರು.
ವಾರ್ಡ್ ಸಂಖ್ಯೆ 52ರ ರಾಜು ಕರೆ ಮಾಡಿ, ಡೆವಲೆಪರ್ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಅಧಿಕಾರಿಗಳು ಇ-ಸ್ವತ್ತು ನೀಡಲು ವಿಳಂಬ ಮಾಡುತ್ತಿದ್ದಾರೆ. ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ ಇ-ಸ್ವತ್ತು ಮಾಡಿಕೊಟ್ಟಿಲ್ಲ ಎಂದರು. ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾತನಾಡಿ, ಮೂಲ ಮಾಲೀಕರ ತೆರಿಗೆ ವಸೂಲಿ ಮಾಡುವ ಜತೆಗೆ ಇ-ಸ್ವತ್ತು ನೀಡಲು ಸೂಚಿಸುವುದಾಗಿ ತಿಳಿಸಿದರು.
ನೇಕಾರ ನಗರದಲ್ಲಿ ಒಳಚರಂಡಿ ಚೇಂಬರ್ ಒಡೆದು ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಈ ಸಮಸ್ಯೆ ಪರಿಹರಿಸುವಂತೆ ಮಲ್ಲಪ್ಪ ಮನವಿ ಮಾಡಿದರು. ಹಂದಿಗಳ ಹಿಡಿಯುವ ಕಾರ್ಯಾಚರಣೆಗೆ ಸೂಚನೆಕಸ ಸಂಗ್ರಹಕ್ಕೆ ಮನೆ ಮನೆಗೆ ವಾಹನಗಳು ಹೋದರೂ ಕೆಲವರು ವಾಹನಗಳಲ್ಲಿ ಕಸ ಹಾಕುವುದಿಲ್ಲ. ಸಮರ್ಪಕ ಕಸ ವಿಲೇವಾರಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಕಳೆದ ಬಾರಿಯ ಫೋನ್ ಇನ್ನಲ್ಲಿ 47 ದೂರುಗಳು ಬಂದಿದ್ದವು. ಅದರಲ್ಲಿ 17 ದೂರುಗಳು ಬಾಕಿ ಇವೆ. ಈ ಬಾರಿಯ ಫೋನ್ಇನ್ನಲ್ಲಿ ಸ್ವಚ್ಛತೆ, ಕಸ ವಿಲೇವಾರಿ, ಬೀದಿ ದೀಪ ನಿರ್ವಹಣೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು 41 ದೂರುಗಳು ಬಂದಿವೆ ಎಂದರು. ಈ ವೇಳೆ ಪಾಲಿಕೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.