ಹುಬ್ಬಳ್ಳಿಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಮನೆಗಳ ಹಸ್ತಾಂತರ
ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್)ಯಿಂದ ಹುಬ್ಬಳ್ಳಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಲಾದ ಒಟ್ಟು 42,346 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನ. 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ನಿರ್ಮಾಣ ಹಂತದ ಮನೆಗಳು ಹಾಗೂ ಕಾರ್ಯಕ್ರಮ ಆಯೋಜಿಸುವ ಹಳೇ ಮಂಟೂರು ರಸ್ತೆಯ ಸ್ಥಳವನ್ನು ಭಾನುವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಈಗಾಗಲೇ ಕಾರ್ಯಕ್ರಮ ಆಯೋಜನೆಗೆ ಸ್ಥಳ ಗುರುತಿಸಿದ್ದು, 17-18 ಎಕರೆ ಪ್ರದೇಶದಲ್ಲಿ ಬೃಹತ್ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ. ಸುಮಾರು 1.5 ಲಕ್ಷ ಆಸನಗಳ ವ್ಯವಸ್ಥೆಗೆ ಜಾಗವು ಅನುಕೂಲಕರವಾಗಿದೆ ಎಂದರು.
ಈ ಹಿಂದೆಯೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸ್ಲಂ ಬೋರ್ಡ್ನಿಂದ ರಾಜ್ಯದಲ್ಲಿ 1.83 ಲಕ್ಷ ಮನೆ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆಯಡಿ 47,863 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದರು. ಒಟ್ಟು 2.30 ಲಕ್ಷ ಮನೆ ನಿರ್ಮಿಸುವ ಗುರಿ ಸರ್ಕಾರ ಹೊಂದಿತ್ತು. ಆದರೆ, ಮುಂದಾದ ರಾಜಕೀಯ ಬೆಳವಣಿಗೆಯಿಂದ ಇದು ನನೆಗುದಿಗೆ ಬಿದ್ದಿತ್ತು. ಬಳಿಕ 2018ರಲ್ಲಿ ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಸರ್ಕಾರ ಒಂದೇ ಒಂದು ಮನೆ ನೀಡಲಿಲ್ಲ. ಪುನಃ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣವೇ ಈ ಯೋಜನೆ ಕೈಗೆತ್ತಿಕೊಂಡು ಅನುಷ್ಠಾನಗೊಳಿಸುತ್ತಿದ್ದು, ಕಳೆದ ವರ್ಷ 36,789 ಮನೆಗಳನ್ನು ಹಂಚಿಕೆ ಸಹ ಮಾಡಿದೆ ಎಂದರು.
ಬಿಜೆಪಿಗೆ ಕಾಳಜಿಯಿಲ್ಲ:
ಈ ಸಂದರ್ಭದಲ್ಲಿ ವಿಪ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಲ್ತಾಫ ಹಳ್ಳೂರ, ಅನಿಲಕುಮಾರ ಪಾಟೀಲ ಸೇರಿದಂತೆ ಹಲವರಿದ್ದರು.