೪೩ನೇ ವಾರದ ಕುಂದು ಕೊರತೆಗಳ ಸಭೆ

KannadaprabhaNewsNetwork |  
Published : Jan 18, 2026, 02:15 AM IST
೧೬ಶಿರಾ೩: ಶಿರಾ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ಬುಕ್ಕಾಪಟ್ಟಣ ಹೋಬಳಿಯ ರೈತರು ಹಾಗೂ ಸಾರ್ವಜನಿಕರ ೪೩ನೇ ವಾರದ ಕುಂದುಕೊರತೆಗಳ ಸಭೆ ಯನ್ನು ಶಾಸಕ ಸಿ ಬಿ ಸುರೇಶ್ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. | Kannada Prabha

ಸಾರಾಂಶ

ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ಬುಕ್ಕಾಪಟ್ಟಣ ಹೋಬಳಿಯ ರೈತರು ಹಾಗೂ ಸಾರ್ವಜನಿಕರ ೪೩ನೇ ವಾರದ ಕುಂದುಕೊರತೆಗಳ ಸಭೆಯನ್ನು ಚಿಕ್ಕನಾಯಕನಹಳ್ಳಿ ಶಾಸಕ ಸಿ ಬಿ ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಶಿರಾ

ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ಬುಕ್ಕಾಪಟ್ಟಣ ಹೋಬಳಿಯ ರೈತರು ಹಾಗೂ ಸಾರ್ವಜನಿಕರ ೪೩ನೇ ವಾರದ ಕುಂದುಕೊರತೆಗಳ ಸಭೆಯನ್ನು ಚಿಕ್ಕನಾಯಕನಹಳ್ಳಿ ಶಾಸಕ ಸಿ ಬಿ ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿ ಹಲವು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುರೇಶ್ ಬಾಬು, ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ವಿಶೇಷ ವೇತನಗಳಿಗೆ ಅರ್ಜಿ ಸಲ್ಲಿಸುವವರು ಕುಂದುಕೊರತೆಗಳ ಸಭೆಗೆ ಹಾಜರಾಗಿ ಅರ್ಜಿ ನೀಡಿದಲ್ಲಿ, ಒಂದು ವಾರದೊಳಗೆ ಮಂಜೂರು ಪತ್ರ ನೀಡಲಾಗುವುದು. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅರಿತು ಕೆಲಸ ಮಾಡಬೇಕು. ಪ್ರತಿಬಾರಿ ಅವರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಅಧಿಕಾರಿಗಳ ಮುಂದೆ ಗೋಗರೆಯುವುದನ್ನು ತಪ್ಪಿಸಲು ಹಾಗೂ ಶಾಸಕರನ್ನು ಹುಡುಕಿಕೊಂಡು ದೂರದಿಂದ ಬರುವ ಕಷ್ಟ ತಪ್ಪಿಸುವ ಉದ್ದೇಶದಿಂದ ಕುಂದು ಕೊರತೆ ಸಭೆ ನಡೆಸುತ್ತಿದ್ದು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬುಕ್ಕಾಪಟ್ಟಣ ಹೋಬಳಿಯ ಎಲ್ಲಾ ರೈತರು ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಆನಂದ್ ಕುಮಾರ್ ಮತ್ತು ಕಾರ್ಯ ನಿರ್ವಹಣಾಧಿಕಾರಿ ಹರೀಶ್, ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮುಖಂಡರಾದ ಶಾಂತಕುಮಾರ್, ಮುದ್ದು ಗಣೇಶ್, ಬುಕ್ಕಾಪಟ್ಟಣ ವಿ ಎಸ್ ಎಸ್ ಎನ್ ಅಧ್ಯಕ್ಷ ಹೊಸ ಪಾಳ್ಯ ಸತ್ಯನಾರಾಯಣ, ಸೇರಿದಂತೆ ಪಕ್ಷದ ಮುಖಂಡರು ಸಾರ್ವಜನಿಕರು ಬುಕ್ಕಾಪಟ್ಟಣ ಹೋಬಳಿಯ ರೈತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ