- ಹಿಟ್ನಾಳ ಜಿಪಂ ಕ್ಷೇತ್ರ ವ್ಯಾಪ್ತಿಯ 7.19 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಅಡಿಗಲ್ಲು
ಕನ್ನಡಪ್ರಭ ವಾರ್ತೆ ಕೊಪ್ಪಳ
ಹಿಟ್ನಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಹಿಟ್ನಾಳ, ಕಂಪಸಾಗರ, ಹುಲಿಗಿ, ಮುನಿರಬಾದ್ ಆರ್.ಎಸ್, ಹಳೇ ಲಿಂಗಾಪುರ, ಹೊಸ ಲಿಂಗಾಪುರ, ಮಟ್ಟಿ ಮುದ್ಲಾಪುರ, ಹೊಳೆ ಮುದ್ಲಾಪುರ, ಮುನಿರಾಬಾದ್ ಡ್ಯಾಮ್ ಹಾಗೂ ಹೊಸಳ್ಳಿ ಗ್ರಾಮಗಳಲ್ಲಿ ಅಂದಾಜು ಮೊತ್ತ ₹7.19 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಅಡಿಗಲ್ಲು ನೆರವೇರಿಸಿ, ಜೊತೆಗೆ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲು ಆಲಿಸಿ ಮಾತನಾಡಿದರು.
ಮೊನ್ನೆ ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊಪ್ಪಳದ 450 ಹಾಸಿಗೆಯ ಆಸ್ಪತ್ರೆಯ ಪೀಠೋಪಕರಣಗಳ ಖರೀದಿಗೆ ಅನುದಾನ ಮಿಸಲಿಟ್ಟು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಗದಗ, ಚಾಮರಾಜನಗರ ಹಾಗೂ ನಮ್ಮ ಕೊಪ್ಪಳ ಆಸ್ಪತ್ರೆಗೆ ₹149 ಕೋಟಿ ಅನುದಾನ ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದರು.ಕೊಪ್ಪಳಕ್ಕೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ:
ಕೊಪ್ಪಳ ವಿಧಾನಸಭ ಕ್ಷೇತ್ರದಲ್ಲಿ ಈಗಾಗಲೇ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟು ಒಂದೊಂದೇ ರಸ್ತೆಯನ್ನು ಕೈಗೆತ್ತಿಕೊಂಡು ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ನಮ್ಮ ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಇನ್ನೂ ₹50 ಕೋಟಿ ಮಂಜೂರು ಮಾಡುವಂತೆ ಮನವಿ ಮಾಡಿದ್ದೇನೆ, ಇದಕ್ಕೆ ಮುಖ್ಯಮಂತ್ರಿಗಳು ಸಕರಾತ್ಮಕವಾಗಿ ಸ್ಪಂದಿಸಿದ್ದು ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದರು.
ಈ ಸಂದರ್ಭ ಮಾಜಿ ಸಂಸದ ಸಂಗಣ್ಣ ಕರಡಿ, ಜಿಪಂ ಮಾಜಿ ಅಧ್ಯಕ್ಷ ಜನಾರ್ದನ್ ಹುಲಿಗಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರಡ್ಡಿ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಗಾಳೆಪ್ಪ ದದೇಗಲ್, ರಾಮಣ್ಣ ಚೌಡ್ಕಿ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಾಲಚಂದ್ರ ಮುನಿರಾಬಾದ್, ಪಾಲಾಕ್ಷಪ್ಪ ಗುಂಗಾಡಿ, ಈರಣ್ಣ ಹುಲಿಗಿ, ಯಂಕಪ್ಪ ಹೊಸಳ್ಳಿ, ಪ್ರಶಾಂತ್ ಗೌಡ್ರು, ಖಜಾವಾಲಿ ಜವಳಿ, ಜಿಯಾಸಾಬ್, ರಾಮಮೂರ್ತಿ, ಶರಣಪ್ಪ ಉಪ್ಪಾರ, ಬಸಣ್ಣ ಬೇವೂರು ಹೊಸಳ್ಳಿ, ನಿಂಗಜ್ಜ ಶಹಪುರ್, ಗಿರೀಶ್ ಶಹಾಪುರ, ಹನಮಂತಪ್ಪ ಹ್ಯಾಟಿ, ಉಪ ವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ತಹಶಿಲ್ದಾರ್ ವಿಠ್ಠಲ್ ಚೌಗಲೇ, ತಾಪಂ ಇಒ ದುಂಡೇಶ್ ತುರಾದಿ, ಅಶೋಕ ಹಿಟ್ನಾಳ, ನಾಗರಾಜ್ ಪಠವಾರಿ, ರಾಜು ಬಂಡಿಹಾಳ ಸೇರಿದಂತೆ ಇತರರಿದ್ದರು.