ಬೆಸ್ಕಾಂ ನಿರ್ಲಕ್ಷ್ಯದಿಂದ ಕಳೆದ 5 ತಿಂಗಳಲ್ಲಿ 46 ಮಂದಿ ಸಾವು

KannadaprabhaNewsNetwork |  
Published : Mar 21, 2024, 01:49 AM ISTUpdated : Mar 21, 2024, 09:07 AM IST
ಬಿಳಗಿ | Kannada Prabha

ಸಾರಾಂಶ

ಬೆಂಗಳೂರಿನ ವೈಟ್‌ಫೀಲ್ಡ್‌ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಜೀವ ದಹನವಾದ ಬಳಿಕವೂ ಬೆಸ್ಕಾಂ ಎಚ್ಚೆತ್ತುಕೊಂಡಿಲ್ಲ. ಬೆಸ್ಕಾಂ ನಿರ್ಲಕ್ಷ್ಯದಿಂದ ವೈಟ್‌ಫೀಲ್ಡ್ ಘಟನೆ ಬಳಿಕ ಕಳೆದ ಐದು ತಿಂಗಳಲ್ಲಿ ಮತ್ತೆ 46 ಮಂದಿ ಬಲಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಂಗಳೂರಿನ ವೈಟ್‌ಫೀಲ್ಡ್‌ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಜೀವ ದಹನವಾದ ಬಳಿಕವೂ ಬೆಸ್ಕಾಂ ಎಚ್ಚೆತ್ತುಕೊಂಡಿಲ್ಲ. ಬೆಸ್ಕಾಂ ನಿರ್ಲಕ್ಷ್ಯದಿಂದ ವೈಟ್‌ಫೀಲ್ಡ್ ಘಟನೆ ಬಳಿಕ ಕಳೆದ ಐದು ತಿಂಗಳಲ್ಲಿ ಮತ್ತೆ 46 ಮಂದಿ ಬಲಿಯಾಗಿದ್ದಾರೆ.

ಹೀಗಾಗಿ ತಡವಾಗಿ ಎಚ್ಚೆತ್ತುಕೊಂಡಿರುವ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬಿಳಗಿ, ‘ಇಂತಹ ಅಪಾಯಗಳಿಗೆ ಕಾರಣವಾಗಬಲ್ಲ ಬ್ಲಾಕ್‌ ಸ್ಪಾಟ್‌ಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 

ಮಾ.31ರೊಳಗಾಗಿ ಎಲ್ಲವೂ ಸರಿಪಡಿಸಬೇಕು. ಬೆಸ್ಕಾಂ ನಿರ್ಲಕ್ಷ್ಯದಿಂದ ಯಾವುದಾದರೂ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಹೇಳಿದ್ದಾರೆ.

ನವೆಂಬರ್‌ 20ರಂದು ವೈಟ್‌ಫೀಲ್ಡ್‌ನಲ್ಲಿ ಪಾದಚಾರಿ ಮಾರ್ಗದಲ್ಲಿ ಚಾರ್ಜ್‌ ಆಗಿರುವ ತಂತಿ ಬಿದ್ದಿದ್ದ ಪರಿಣಾಮ ತಾಯಿ ಹಾಗೂ ಮಗು ಸುಟ್ಟು ಕರಕಲಾಗಿದ್ದರು. ಇದಾದ ಬಳಿಕ 46 ಮಂದಿ ಸಾವನ್ನಪ್ಪಿದ್ದಾರೆ. 

ನವೆಂಬರ್‌ನಲ್ಲಿ 8, ಡಿಸೆಂಬರ್‌ನಲ್ಲಿ 15, ಜನವರಿಯಲ್ಲಿ 9, ಫೆಬ್ರುವರಿ 12 ಹಾಗೂ ಮಾರ್ಚ್‌ ತಿಂಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಇಂತಹ ಬ್ಲಾಕ್‌ ಸ್ಪಾಟ್‌ಗಳನ್ನು ಪತ್ತೆ ಹಚ್ಚಿ ಸರಿಪಡಿಸುವಂತೆ ನಿರ್ದೇಶನ ನೀಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ
ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್