ಕನ್ನಡಪ್ರಭ ವಾರ್ತೆ ಬಳ್ಳಾರಿ
ನಗರದ ಚೈತನ್ಯ ಕಾಲೇಜಿನ ಮುಖ್ಯಸ್ಥ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ರಾಧಾಕೃಷ್ಣ ಚಾಲನೆ ನೀಡಿದರು.
ಬಳಿಕ ಮಾತನಾಡಿ, ಬಳ್ಳಾರಿಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಕರಾಟೆ ಪಟುಗಳನ್ನು ಬಳ್ಳಾರಿಗೆ ಆಹ್ವಾನಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ.ಇಂತಹ ಸ್ಪರ್ಧೆಗಳು ನಿರಂತರವಾಗಿ ನಗರದಲ್ಲಿ ನಡೆಯುವಂತಾಗಬೇಕು ಎಂದರು.ಕರಾಟೆ ಆತ್ಮರಕ್ಷಣೆಯ ಕಲೆಯಾಗಿದ್ದು, ಇದು ಪ್ರತಿಯೊಬ್ಬ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಕಲಿಯಬೇಕಾದ ಕಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಕರಾಟೆ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರಲ್ಲದೆ, ಮಕ್ಕಳನ್ನು ಬರೀ ಪಠ್ಯಕ್ಕೆ ಸೀಮಿತಗೊಳಿಸಿದೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರು ಪ್ರೇರೇಪಿಸಬೇಕು ಎಂದರು.
ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಂ. ಕಿರಣ್ ಕುಮಾರ್, ಹೋಟೆಲ್ ಉದ್ಯಮಿ ಶಬರಿ ರವಿಚಂದ್ರನ್, ಹಿರಿಯ ಕರಾಟೆಪಟು ಕಟ್ಟೇಸ್ವಾಮಿ ಮತ್ತಿತರರಿದ್ದರು.
ಇದೇ ವೇಳೆ ಕರಾಟೆ ಕ್ಷೇತ್ರದಲ್ಲಿ ಸಾಧನೆಗೈದಿರುವ ಹಾಗೂ ಸಾವಿರಾರು ವಿದ್ಯಾರ್ಥಿಗಳಿಗೆ ಕರಾಟೆ ಕಲಿಸಿ ಮಾರ್ಗದರ್ಶನ ಮಾಡಿರುವ ಹುಬ್ಬಳ್ಳಿಯ ಹನ್ಸಿ ಅಣ್ಣಪ್ಪ ಮರ್ಕಲ್ ಅವರಿಗೆ ರಾಜ್ಯಮಟ್ಟದ ಕರಾಟೆ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು ₹11 ಸಾವಿರ ನಗದು ಹಾಗೂ ಫಲಕದೊಂದಿಗೆ ಸಮಾರಂಭದಲ್ಲಿ ಹಾಜರಿದ್ದ ಗಣ್ಯರು ಅಣ್ಣಪ್ಪ ಮರ್ಕಲ್ ಅವರನ್ನು ಸನ್ಮಾನಿಸಿ ಗೌರವಿಸಿದರು.