ದೇಶದಲ್ಲಿ ಪ್ರತಿ ವರ್ಷ ರೇಬೀಸ್‌ನಿಂದ 5-6 ಸಾವಿರ ಜನರ ಮರಣ: ಡಾ.ಮುರಳಿಧರ್ ಕಿರಣಕರೆ

KannadaprabhaNewsNetwork |  
Published : Dec 22, 2024, 01:31 AM IST
ನರಸಿಂಹರಾಜಪುರ ಸೀನಿಯರ್ ಚೇಂಬರ್ ಆಶ್ರಯದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ತೀರ್ಥಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಮುರುಳಿಧರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಭಾರತ ದೇಶದಲ್ಲಿ ಪ್ರತಿ ವರ್ಷ ರೇಬಿಸ್ ಕಾಯಿಲೆಯಿಂದ 5 ರಿಂದ 6 ಸಾವಿರ ಜನರು ಮರಣ ಹೊಂದುತ್ತಿದ್ದಾರೆ ಎಂದು ತೀರ್ಥಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಮುರುಳಿಧರ್ ತಿಳಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೀನಿಯರ್ ಛೇಂಬರ್ ಆಶ್ರಯದಲ್ಲಿ ಉಪನ್ಯಾಸ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಭಾರತ ದೇಶದಲ್ಲಿ ಪ್ರತಿ ವರ್ಷ ರೇಬಿಸ್ ಕಾಯಿಲೆಯಿಂದ 5 ರಿಂದ 6 ಸಾವಿರ ಜನರು ಮರಣ ಹೊಂದುತ್ತಿದ್ದಾರೆ ಎಂದು ತೀರ್ಥಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಮುರುಳಿಧರ್ ತಿಳಿಸಿದರು.

ಗುರುವಾರ ಅಳಲಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೀನಿಯರ್ ಛೇಂಬರ್ ಆಶ್ರಯದಲ್ಲಿ ನಡೆದ ಮಾನವನಿಗೆ ಪ್ರಾಣಿಗಳಿಂದ ಬರುವ ಪ್ರಾಣಿಜನ್ಯ ರೋಗಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ, ಹುಚ್ಚು ನಾಯಿ ಮನುಷ್ಯರಿಗೆ ಕಚ್ಚುವುದರಿಂದ, ಆ ನಾಯಿ ಜೊಲ್ಲಿ ನಿಂದ ರೇಬಿಸ್ ಬರುವ ಸಾಧ್ಯತೆ ಇದೆ. ಹುಚ್ಚು ನಾಯಿಗಳು ಹಸುಗಳಿಗೆ ಕಚ್ಚುವುದರಿಂದ ಹಸುಗಳಿಗೂ ಸಹ ರೇಬಿಸ್ ಬರುತ್ತದೆ. ಯಾವುದೇ ನಾಯಿ ಕಚ್ಚಿದಾಗ ಪ್ರಥಮ ಚಿಕಿತ್ಸೆಯಾಗಿ ಕಚ್ಚಿದ ಜಾಗವನ್ನು ಸೋಪಿನಿಂದ ಕನಿಷ್ಠ 15 ನಿಮಿಷ ಚೆನ್ನಾಗಿ ತೊಳೆಯಬೇಕು. ಇದರಿಂದ ಶೇ. 90 ರಷ್ಟು ರೋಗ ಹರಡುವುದನ್ನು ತಡೆಯುತ್ತದೆ. ನಾಯಿ ಅಥವಾ ಯಾವುದೇ ಸಾಕು ಪ್ರಾಣಿಗಳನ್ನು ಮುಟ್ಟಿದಾಗ ಕೈಯನ್ನು ಚೆನ್ನಾಗಿ ತೊಳೆದು ಕೊಳ್ಳಬೇಕು. ಇಲ್ಲದಿದ್ದರೆ ಪ್ರಾಣಿಗಳ ಮೈ ಮೇಲೆ ಇರುವ ವೈರಸ್ ಮನುಷ್ಯರಿಗೂ ಹರಡುತ್ತದೆ.

ಇಲಿಗಳು ತೆರೆದಿಟ್ಟ ನೀರಿನ ತೊಟ್ಟಿಯೊಳಗೆ ಮೂತ್ರ ಮಾಡುವ ಸಾಧ್ಯತೆ ಇದೆ. ಆ ನೀರನ್ನು ಬಳಸಿದಾಗ, ಕೈ ಕಾಲು ತೊಳೆದಾಗ ಆಲರ್ಜಿ, ಜ್ವರ ಬರುವ ಸಾಧ್ಯತೆ ಇದೆ ಎಂದರು.

ಸಭೆ ಅಧ್ಯಕ್ಷತೆಯನ್ನು ಸೀನಿಯರ್ ಛೇಂಬರ್ ಅಧ್ಯಕ್ಷ ಕೆ.ಆರ್.ನಾಗರಾಜ ಪುರಾಣಿಕ್ ವಹಿಸಿದ್ದರು. ಕಾರ್ಯದರ್ಶಿ ಪಿ.ಎಸ್. ವಿದ್ಯಾನಂದ ಕುಮಾರ್ , ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರಾದ ಪೂರ್ಣಿಮ, ಪಶು ಆಸ್ಪತ್ರೆ ಜಾನುವಾರು ಅಧಿಕಾರಿ ಡಾ.ಶೇಷಾಚಲ, ಕೆ.ಎಸ್. ರಾಜಕುಮಾರ್, ಲಕ್ಷ್ಮೀಶ, ಕುಮಾರ ಜಿ.ಶೆಟ್ಟಿ, ಗಂಗಾಧರ್ ಮತ್ತಿತರರು ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ