5 ಕೋಟಿ ರು. ವೆಚ್ಚದ ಜಲಜೀವನ ಮಿಷನ್ ಭೂಮಿ ಪೂಜೆ

KannadaprabhaNewsNetwork |  
Published : Dec 24, 2023, 01:45 AM ISTUpdated : Dec 24, 2023, 01:46 AM IST
ಹುಮನಾಬಾದ್‌ ತಾಲೂಕಿನ ಘಾಟಬೋರಳ ಗ್ರಾಮ ಪಂಚಾಯತ್ ಆವರಣದಲ್ಲಿ ಶುಕ್ರವಾರ ಜರುಗಿದ 5ಕೋಟಿ ರು. ವೆಚ್ಛದ ಜಲಜೀವನ ಮಿಷನ್‌ ಯೋಜನೆಯಡಿ ಕುಡಿಯುವ ನೀರಿನ ಪೈಪಲೈನ್‌ ಅಳವಡಿಸುವುದು ಮತ್ತು ನಳಗಳ ಜೋಡಣೆ ಕಾಮಗಾರಿಯ ಭೂಮಿ ಪೂಜೆ ನೆರೆವೇರಿಸಿ ಶಾಸಕ ಡಾ. ಸಿದ್ದು ಪಾಟೀಲ್‌ ಮಾತನಾಡಿದರು.  | Kannada Prabha

ಸಾರಾಂಶ

5 ಕೋಟಿ ರು. ವೆಚ್ಚದ ಜಲ್‌ಜೀವನ್‌ ಮಿಷನ್‌ಗೆ ಭೂಮಿ ಪೂಜೆ ನೆರವೇರಿತು.

ಹುಮನಾಬಾದ್‌: ಗ್ರಾಮದ ಪ್ರತಿಯೊಂದು ಮನೆಯವರು ಆರೋಗ್ಯ ದೃಷ್ಟಿಯಿಂದ ಯೋಜನೆ ಜಲ್‌ಜೀವನ ಮಿಷನ್‌ ಯೋಜನೆ ಸದಪಯೋಗ ಮಾಡಿಕೊಳ್ಳಬೇಕು. ಜಲ ಜೀವನ್‌ ಮಿಷನ್‌ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ ಕಳಪೆಯಾಗದಂತೆ ಗ್ರಾಮಸ್ಥರು ನಿಗಾವಹಿಸಬೇಕು ಎಂದು ಶಾಸಕ ಡಾ.ಸಿದ್ದು ಪಾಟೀಲ್‌ ತಿಳಿಸಿದರು.

ತಾಲೂಕಿನ ಘಾಟಬೋರಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಜರುಗಿದ 5 ಕೋಟಿ ರು. ವೆಚ್ಚದ ಜಲಜೀವನ ಮಿಷನ್‌ ಯೋಜನೆಯಡಿ ಕುಡಿಯುವ ನೀರಿನ ಪೈಪಲೈನ್‌ ಅಳವಡಿಸುವುದು ಮತ್ತು ನಳಗಳ ಜೋಡಣೆ ಕಾಮಗಾರಿಯ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿದರು.

ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಜಲಜೀವನ್‌ ಮಿಷನ್‌ ಯೋಜನೆ ಹಿಂದಿನ ಮಾಜಿ ಶಾಸಕ ರಾಜಶೇಖರ ಪಾಟೀಲ್‌ ಕೈಗೆತ್ತಿಕೊಂಡಿದ್ದರು ಎಂದು ಅವರು ಹೇಳಿದರಲ್ಲದೆ ಗ್ರಾಮದಲ್ಲಿ ಪೈಪಲೈನ್‌ ಅಳವಡಿಸಿ ಬಳಿಕ ವಿಧಾನ ಪರಿಷತ್‌ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿಕೊಂಡು ಸಚಿವ ಪ್ರಿಯಾಂಕ್‌ ಖರ್ಗೆ ಅವರ ಬಳಿ ನಿಯೋಗ ತೆರಳಿ ಕಾರಂಜಾ ಜಲಾಶಯದಿಂದ ನೀರು ಪೂರೈಕೆಗೆ ಮನವಿಸುವದಾಗಿ ಭರವಸೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ ಪಾಟೀಲ್‌ ಮಾತನಾಡಿ. ಗ್ರಾಮೀಣ ಭಾಗದ ಜನರಿಗೆ ಉಂಟಾಗಿದ್ದ ಕುಡಿಯುವ ನೀರಿನ ಕೊರತೆಯನ್ನು ನೀಗಿಸುವುದರ ಜೊತೆಗೆ ಗ್ರಾಮೀಣ ಜನರ ಉತ್ತಮ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅತ್ಯುತ್ತಮ ಯೋಜನೆ ಇದಾಗಿದೆ ಎಂದು ಹೇಳಿದ ಅವರು. ಶೈಕ್ಷಣಿಕವಾಗಿ ಬೆಳೆಯುತ್ತಿರುವ ಗ್ರಾಮಕ್ಕೆ ಗ್ರಾಮದ ಜನತೆಯ ಅಶೋತ್ತರಗಳಿಗೆ ನಿರಂತರವಾಗಿ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವದಾಗಿ ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಭೀಮರಾವ್‌ ಪಾಟೀಲ್‌ ಮಾತನಾಡಿ, ಸರ್ಕಾರದ ಮೇಲೆ ಒತ್ತಡ ಹಾಕಿ ಕಾರಂಜಾ ಜಲಾಶಯ ನೀರಿನ ಜೊತೆ ಜೊತೆಗೆ ಗ್ರಾಮದ ಸರ್ವತೋಮುಖ ಪ್ರಗತಿಗಾಗಿ ಸರ್ಕಾರದ ಹಲವಾರು ಯೋಜನೆಗಳ ಅನುಷ್ಠಾನಕ್ಕೆ ನಾವೆಲ್ಲರು ಒಗ್ಗಟ್ಟಿನಿಂದ ಪ್ರಯತ್ನಿಸುವದಾಗಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪದ್ಮಾಕರ ಪಾಟೀಲ್‌, ಮಾಜಿ ಉಪಾಧ್ಯಕ್ಷ ಡಾ.ಪ್ರಕಾಶ ಪಾಟೀಲ್‌, ಗ್ರಾಪಂ ಮಾಜಿ ಅಧ್ಯಕ್ಷ, ರಾಜಕುಮಾರ ಪಾಟೀಲ್‌, ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಾರ್ಥ ಪರಂಜಪೆ ಗ್ರಾಮದ ಅಭಿವೃದ್ಧಿಯ ಕುರಿತು ಮಾತನಾಡಿದರು. ಪಿಕೆಪಿಎಸ್‌ ಅಧ್ಯಕ್ಷ ಅಭಿಜಿತ ಪಾಟೀಲ್‌, ಗ್ರಾಪಂ ಅಧ್ಯಕ್ಷ ಪ್ರಭಾವತಿ ಘಂಟೆ, ಉಪಾಧ್ಯಕ್ಷ ಕುಶಾಲಬಾಯಿ ಮಾನಕರೆ, ಜ್ಞಾನೇಶ್ವರ ಭೋಸ್ಲೆ, ರಂಜೀತ ಮಾನಕರೆ, ಸಿಪಿಐ ಗುರುಲಿಂಗಪ್ಪ ಪಾಟೀಲ್‌ ಸೇರಿದಂತೆ ಅನೇಕರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ