ಕನ್ನಡಪ್ರಭ ವಾರ್ತೆ ಉಡುಪಿ
ಅವರು ಭಾನುವಾರ ಉಡುಪಿ ಜಿಲ್ಲಾ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ನಮ್ಮ ರಾಜ್ಯದ ಹೈಕೋರ್ಟ್ನಲ್ಲಿ 3 ಲಕ್ಷಕ್ಕೂ ಅಧಿಕ ವ್ಯಾಜ್ಯಗಳು ಬಾಕಿ ಇವೆ, ಅಂದರೆ ಇವುಗಳಿಂದಾಗಿ ರಾಜ್ಯದ 30 ಲಕ್ಷಕ್ಕೂ ಅಧಿಕ ಕುಟುಂಬಗಳ ನೆಮ್ಮದಿ ಹಾಳಾಗಿರುತ್ತದೆ. ಆದ್ದರಿಂದ ಇದು ಚಿಕ್ಕ ಸಮಸ್ಯೆಯಲ್ಲ, ಇದನ್ನು ಗಂಭೀರವಾಗಿ ತೆಗೆದುಕೊಳ್ಳಿ ಎಂದವರು ವೇದಿಕೆಯಲ್ಲಿದ್ದ ರಾಜ್ಯ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮತ್ತು ಹೈಕೋರ್ಟಿನ ನ್ಯಾಯಾಧೀಶರನ್ನು ಉದ್ದೇಶಿಸಿ ಹೇಳಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಜ. ಅರವಿಂದ ಕುಮಾರ್, ದೇಶದ ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಬಾಕಿ ವ್ಯಾಜ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸುತ್ತಾ, ಬ್ಯಾಂಕಿಂಗ್, ಭೂವಿವಾದ, ಮೋಟಾರು ವಾಹನದಂತಹ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಲೋಕ ಅದಾಲತ್ನಲ್ಲಿ ಪರಿಹರಿಸಿಕೊಳ್ಳಬೇಕು, ನ್ಯಾಯಾಲಯಗಳಲ್ಲಿ ತಂತ್ರಜ್ಞಾನಗಳನ್ನು ಬಳಸಿಕೊಂಡು ವ್ಯಾಜ್ಯಗಳನ್ನು ತ್ವರಿತವಾಗಿ ವಿಲೇ ಮಾಡಬೇಕು, ವಕೀಲರು ಅನವಶ್ಯಕವಾಗಿ ವಿಚಾರಣೆ ಮುಂದೂಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ಮಾಡಿದರು.
ಸ್ಮರಣಸಂಚಿಕೆಯನ್ನು ಹೈಕೋರ್ಟ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯದೀಶ ಜಸ್ಟೀಸ್ ಇ.ಎಸ್. ಇಂದಿರೇಶ್ ಬಿಡುಗಡೆ ಮಾಡಿದರು.ಉಡುಪಿ ಜಿಲ್ಲೆಯಲ್ಲಿ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸಿ ಮುಂದೆ ನ್ಯಾಯಾಧೀಶರಾದ, ಸರ್ಕಾರಿ ಅಭಿಯೋಜಕರಾದ ಸಾಧಕರನ್ನು ಅಭಿನಂದಿಸಲಾಯಿತು. ಈ ಹಿಂದೆ ವಕೀಲರ ಸಂಘದ ಅಧ್ಯಕ್ಷರಾಗಿದ್ದ ಹಿರಿಯರನ್ನು ಗೌರವಿಸಲಾಯಿತು.
ಶತಮಾನೋತ್ತರ ಬೆಳ್ಳಿಹಬ್ಬ ಆಚರಣೆ ಸಮಿತಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು, ಹಿರಿಯ ನ್ಯಾಯವಾದಿ ಮೇರಿ ಶ್ರೇಷ್ಟ ನಿರೂಪಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್. ವಂದಿಸಿದರು.