ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕನಿಗೆ ₹5 ಲಕ್ಷ

KannadaprabhaNewsNetwork |  
Published : Aug 11, 2025, 12:33 AM IST
ಸಸಸಸ | Kannada Prabha

ಸಾರಾಂಶ

ಮಸೀದಿಯ ಮುಂದೆಯೇ ಗವಿಸಿದ್ದಪ್ಪನ ಕೊಲೆಯಾಗಿದೆ. ಈ ಸಂದರ್ಭದಲ್ಲಿ ಆ ಯುವಕನ ಕೊಲೆ ತಡೆಯುವ ಕೆಲಸ ಮುಸ್ಲಿಮರು ಯಾಕೆ ಮಾಡಲಿಲ್ಲ

ಕೊಪ್ಪಳ: ಹಿಂದೂ ಯುವಕ ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹ 5 ಲಕ್ಷ ಕೊಡಲಾಗುವುದು ಎಂಬ ಅಭಿಯಾನ ಆರಂಭಿಸಲಾಗುವುದು ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದರು.

ಇತ್ತೀಚೆಗೆ ಮುಸ್ಲಿಂ ಮಹಿಳೆಯನ್ನು ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಅವರು, ಮಸೀದಿಯ ಮುಂದೆಯೇ ಗವಿಸಿದ್ದಪ್ಪನ ಕೊಲೆಯಾಗಿದೆ. ಈ ಸಂದರ್ಭದಲ್ಲಿ ಆ ಯುವಕನ ಕೊಲೆ ತಡೆಯುವ ಕೆಲಸ ಮುಸ್ಲಿಮರು ಯಾಕೆ ಮಾಡಲಿಲ್ಲ? ರಿಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ. ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ? ಅವರನ್ನು ಮದುವೆ ಆಗಬಾರದೆಂದು ಏಲ್ಲಿದೆ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ಕೊಡುವ ಅಭಿಯಾನ ಆರಂಭಿಸಲಿದ್ದೇವೆ ಎಂದರು.

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅಧಿವೇಶನಲ್ಲಿ ನಾವು ತರಾಟೆ ತೆಗೆದುಕೊಳ್ಳಲಿದ್ದೇವೆ. ಈ ಕೊಲೆಗೆ ಸರ್ಕಾರವೇ ಸಾಥ್ ನೀಡಿದೆ. ಕೊಲೆ ಮಾಡಿದ ಯುವಕ ಕೊಲೆಗೂ ಮುನ್ನ ಕೈಯಲ್ಲಿ ಮಚ್ಚು ಹಿಡಿದುಕೊಂಡು ಸಾಮಾಜಿಕ ಜಾಲತಾಣದಲ್ಲಿ ತೋರಿಸಿದ್ದಾನೆ. ಆಗ ಪೊಲೀಸರು ಏನು ಮಾಡುತ್ತಿದ್ದರು? ಆ ಯುವಕನನ್ನು ಕೊಲೆಗೆ ಮುಂಚೆ ಯಾಕೆ ಬಂಧಿಸಲಿಲ್ಲ? ಕೊಲೆಯಾದ ಬಳಿಕವೂ ಮುಸ್ಲಿಂ ಸಮುದಾಯದ ಯುವಕರನ್ನು ರಕ್ಷಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಸಾಬರ ಸರ್ಕಾರ:ಅಧಿವೇಶನದಲ್ಲಿ ಈ ಕುರಿತು ಪ್ರಶ್ನಿಸುತ್ತೇನೆ. ಮಚ್ಚು ತೆಗೆದುಕೊಂಡು ಓಡಾಡುವವರಿಗೆ ಸರ್ಕಾರದ ಬೆಂಬಲವಿದೆ. ಸಿಎಂ ಸಿದ್ದರಾಮಯ್ಯ ಈ ಘಟನೆಗೆ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಈ ಘಟನೆಗೆ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದು ಸಾಬರ್‌ ಸರ್ಕಾರವಾಗಿದೆ ಎಂದರು.

ಆ. 11ರಂದು ಗವಿಸಿದ್ದಪ್ಪ ಕೊಲೆ ಪ್ರಕರಣ ಖಂಡಿಸಿ ಜರುಗುವ ಪ್ರತಿಭಟನೆಗೆ ಎಲ್ಲರೂ ಸಹಕರಿಸಬೇಕು. ಇದೇ ನೆಪದಲ್ಲಿ ಗಣೇಶ ಹಬ್ಬಕ್ಕೆ ಅಡ್ಡಿಪಡಿಸಬಾರದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!