ನಗರದ ಅಭಿವೃದ್ಧಿಗೆ 50 ಕೋಟಿ ರು. ಅನುದಾನಕ್ಕೆ ಬೇಡಿಕೆ

KannadaprabhaNewsNetwork |  
Published : Dec 06, 2024, 08:59 AM IST
ಫೋಟೋ, 5 hsd4: ರಾಜ್ಯ ಹಣಕಾಸು ಆಯೋಗ ಹಾಗೂ ನಗರ ಸಭೆಯ ನಿಧಿಯಡಿ 26 ಪರಿಶಿಷ್ಟ ಜಾತಿ ಹಾಗೂ 10 ಪರಿಶಿಷ್ಟ ವರ್ಗ ವಿದ್ಯಾರ್ಥಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಲ್ಯಾಪ್‍ಟಾಪ್ ವಿತರಿಸಿದರು. | Kannada Prabha

ಸಾರಾಂಶ

ಚಿತ್ರದುರ್ಗ: ಚಿತ್ರದುರ್ಗ ನಗರದ ಅಭಿವೃದ್ಧಿಗೆ 50 ಕೋಟಿ ರು. ಅನುದಾನ ನೀಡುವಂತೆ ಪೌರಾಡಳಿತ ಸಚಿವರಿಗೆ ಪತ್ರ ಬರೆದಿರುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ಚಿತ್ರದುರ್ಗ: ಚಿತ್ರದುರ್ಗ ನಗರದ ಅಭಿವೃದ್ಧಿಗೆ 50 ಕೋಟಿ ರು. ಅನುದಾನ ನೀಡುವಂತೆ ಪೌರಾಡಳಿತ ಸಚಿವರಿಗೆ ಪತ್ರ ಬರೆದಿರುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ಗುರುವಾರ ನಗರಸಭೆ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿ ಅವರು ಮಾತನಾಡಿದರು.

15ನೇ ಹಣಕಾಸು ಹಾಗೂ ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ನಗರದ ಕಸ ವಿಲೇವಾರಿಗಾಗಿ 95.50 ಲಕ್ಷ ರು. ವೆಚ್ಚದಲ್ಲಿ 9 ವಾಹನಗಳನ್ನು ಸಚಿವರು ಮಂಜೂರು ಮಾಡಿದ್ದು, ಇವುಗಳಿಗೆ ಚಾಲನೆ ನೀಡಲಾಗಿದೆ. ಇದರೊಂದಿಗೆ 12 ಹೊಸ ಕಸ ವಿಲೇವಾರಿ ವಾಹನಗಳನ್ನು ನೀಡುವ ಭರವಸೆ ನೀಡಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಇದರಲ್ಲಿ 7.19 ಕೋಟಿ ರು.ಗಳನ್ನು ನಗರದ ಅಭಿವೃದ್ಧಿಗಾಗಿ ಮೀಸಲು ಇರಿಸಲಾಗಿದೆ. ಯಾವುದೇ ತಾರತಮ್ಯ ಮಾಡದೆ ನಗರ ವ್ಯಾಪ್ತಿಯ ಪ್ರತಿ ವಾರ್ಡ್‍ಗಳಿಗೂ 30.95 ಲಕ್ಷ ರು. ಅನುದಾನ ನೀಡಲಾಗಿದೆ. ಇದರಲ್ಲಿ ಸಿಸಿ ರಸ್ತೆ, ಒಳಚರಂಡಿ, ಹೈಮಾಸ್ಟ್ ದೀಪ, ಉದ್ಯಾನವನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಲಾಗುವುದು. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಎಂಬಿಬಿಎಸ್ ಹಾಗೂ ಬಿಇ ಓದುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ರಾಜ್ಯ ಹಣಕಾಸು ಆಯೋಗ ಹಾಗೂ ನಗರಸಭೆಯ ಅನುದಾನದಲ್ಲಿ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಎಂಬಿಬಿಎಸ್ ವಿದ್ಯಾರ್ಥಿಗಳು ವಿದ್ಯಾಭ್ಯಾಸ ತರುವಾಯ ವೈದ್ಯ ವೃತ್ತಿಯಲ್ಲಿ ಬಡವರ ಸೇವೆ ಮಾಡುವಂತೆ ಕರೆ ನೀಡಿದರು.

ಕೊಳಚೆ ನಿರ್ಮೂಲನಾ ಮಂಡಳಿಯಿಂದ ನೀಡಿರುವ ಹಕ್ಕುಪತ್ರಗಳಿಗೆ ನಗರಸಭೆಯಿಂದ ಇ-ಸ್ವತ್ತು ನೀಡಿದ್ದು, ಮುಂದೆ ಯಾರು ಕೂಡ ಇ-ಸ್ವತ್ತು ಪಡೆಯಲು ನಗರಸಭೆಗೆ ಸುತ್ತಾಡುವ ಅಗತ್ಯವಿಲ್ಲ. ತಮ್ಮ ಕೈಗೆ ಇ-ಸ್ವತ್ತುಗಳನ್ನು ತಲುಪಿಸಲಾಗುವುದು. ನಗರದಲ್ಲಿ 1001 ವಸತಿ ನಿರ್ಮಾಣಗಳ ಕಾರ್ಯ ನಡೆಯುತ್ತಿದೆ. ಇದರಲ್ಲಿ ಎಲ್ಲೂ ಫಲಾನುಭವಿಗಳ ಪುನಾರವರ್ತನೆ ಆಗದಂತೆ ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷೆ ಸುಮಿತಾ.ಬಿ.ಎಸ್, ಉಪಾಧ್ಯಕ್ಷೆ ಶ್ರೀದೇವಿ.ಜಿ.ಎಸ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸರುಲ್ಲಾ, ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಸಭೆ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ