ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದ ಕಾರ್ಯಕರ್ತರು, ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ೫ ರು.ಪ್ರೋತ್ಸಾಹ ಧನವನ್ನು ೧೦ ರು.ಗೆ ಏರಿಕೆ ಮಾಡಬೇಕು. ಹಾಲು ಉತ್ಪಾದಕರ ಮಕ್ಕಳಿಗೆ ಜಿಲ್ಲೆಗೊಂದು ವಿದ್ಯಾರ್ಥಿಗಳ ವಸತಿ ನಿಲಯ ಪ್ರಾರಂಭಿಸಬೇಕೆಂಬುದೂ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್ರಾಜ್, ಕೆಎಂಎಫ್ನಡಿ ೧೫ ಹಾಲು ಒಕ್ಕೂಟಗಳಿದ್ದು, ೧೪,೯೦೦ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳಿವೆ. ಇವುಗಳ ಮೂಲಕ ನಿತ್ಯ ೨೨.೫ ಲಕ್ಷ ಸದಸ್ಯರಿಂದ ೧ ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಹೈನುಗಾರಿಕೆಯಲ್ಲಿ ಅನೇಕ ಬಿಕ್ಕಟ್ಟುಗಳು ಎದುರಾಗಿವೆ.ಲೀಟರ್ ಹಾಲಿನ ಉತ್ಪಾದನಾ ವೆಚ್ಚ ೪೫ ರು.ಗಳಾಗಿದ್ದು,. ಕೆಎಂಎಫ್ ನೀಡುತ್ತಿರುವ ಪ್ರೋತ್ಸಾಹ ಧನ ಸೇರಿದರೆ ೩೭ ರು. ಹಣವನ್ನು ಉತ್ಪಾದಕರಿಗೆ ಪಾವತಿಸಲಾಗುತ್ತಿದೆ. ಇದರಲ್ಲಿ ಪ್ರತೀ ಲೀಟರ್ ಮೇಲೆ ೬ ರಿಂದ ೭ ರು. ನಷ್ಟವಾಗುತ್ತಿದೆ. ಹೀಗಿದ್ದರೂ ಕೂಡ ಸರ್ಕಾರ ಪ್ರೋತ್ಸಾಹ ಧನವನ್ನು ಏಳೆಂಟು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು.
ಸಂಘಟನೆಯ ಪದಾಧಿಕಾರಿಗಳಾದ ಎನ್.ಲಿಂಗರಾಜಮೂರ್ತಿ, ಟಿ.ಆರ್.ಸಿದ್ದೇಗೌಡ, ಎಸ್.ವಿಶ್ವನಾಥ್, ನಾಗಮ್ಮ, ಮಹದೇವು, ಸತೀಶ್, ಗುರುಸ್ವಾಮಿ, ಮರಿಲಿಂಗೇಗೌಡ, ಎ.ಎಲ್.ಶಿವಕುಮಾರ್, ಸಿದ್ದರಾಜು, ಇತರರಿದ್ದರು.