ಜನವರಿಯಿಂದಲೇ ನೀರಿನ ಸಮಸ್ಯೆ ಭೀಕರವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳ ಅಂದಾಜು 1) ಜಿಲ್ಲೆಯ ಜಲಮೂಲಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿತ
3) ನದಿಗಳಲ್ಲಿ ನೀರು ಬತ್ತಿ ಬಹುಗ್ರಾಮ ಕುಡಿವ ನೀರಿನ ಯೋಜನೆ ನಿಂತರೆ ಪರಿಸ್ಥಿ ಗಂಭೀರ
4) ತುಂಗಾ ನದಿ ಬತ್ತಿದ ನಂತರ ಶಿವಮೊಗ್ಗ ನಗರದಲ್ಲೂ ನೀರಿನ ಸಮಸ್ಯೆ ತೀವ್ರ ಸಾಧ್ಯತೆ-----------ಗೋಪಾಲ್ ಯಡಗೆರೆ
ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ವಾಡಿಕೆಗಿಂತ ತೀರಾ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣವಾಗುವ ಎಲ್ಲ ಸ್ಪಷ್ಟಲಕ್ಷಣಗಳು ಗೋಚರಿಸುತ್ತಿವೆ.
ಕಳೆದ ಬಾರಿ ಉತ್ತಮ ಮಳೆಯಾಗಿಯೂ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿತ್ತು. ಈ ಬಾರಿ ಬರವಿದೆ. ನದಿಯಲ್ಲಿ ನೀರು ಬರಿದಾಗಿ ಬಹುಗ್ರಾಮ ಕುಡಿವ ನೀರು ಪೂರೈಕೆ ಸ್ಥಗಿತಗೊಂಡರೆ ಸಮಸ್ಯೆ ಹೆಚ್ಚಾಗಲಿದೆ. ಏನೆ ಆದರೂ ಈ ಬಾರಿ ಕುಡಿಯುವ ನೀರಿನ ತಾಪತ್ರಯ ತಪ್ಪಿದ್ದಲ್ಲ.
504 ಹಳ್ಳಿಗಳಲ್ಲಿ ನೀರಿಗೆ ಸಮಸ್ಯೆ:ಜಿಲ್ಲೆಯ ಎಲ್ಲ ತಾಲೂಕುಗಳನ್ನು ಸರ್ಕಾರ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ಒಟ್ಟು 504 ಹಳ್ಳಿಗಳು ಕುಡಿಯುವ ನೀರಿನ ಬವಣೆ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಆಡಳಿತ ಅಂದಾಜಿಸಿದೆ. ಭದ್ರಾವತಿ ತಾಲೂಕಿನ 40 ಗ್ರಾಮಗಳು, ಹೊಸನಗರದಲ್ಲಿ 43, ಸಾಗರದಲ್ಲಿ 142 , ಶಿಕಾರಿಪುರದಲ್ಲಿ 94, ಶಿವಮೊಗ್ಗದಲ್ಲಿ 124, ಸೊರಬದಲ್ಲಿ 15, ತೀರ್ಥಹಳ್ಳಿಯಲ್ಲಿ 45 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಲಿದೆ ಎಂಬ ಅಂದಾಜಿದೆ.
ಈ ಹಿಂದಿನ ವರ್ಷದಲ್ಲಿ ಉತ್ತಮ ಮಳೆ ಹೊರತಾಗಿಯೂ ಬೇಸಿಗೆಯ ಕೊನೆ ದಿನಗಳಲ್ಲಿ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಆತಂಕ ಎದುರಾಗಿತ್ತು. ಈ ಬಾರಿ ಬರಗಾಲ ಇರುವುದರಿಂದ ತುಂಗಾನದಿಯಲ್ಲೂ ನೀರಿನ ಪ್ರಮಾಣ ಕಡಿಮೆ ಇದೆ. ಸದ್ಯ ತುಂಗಾ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದು, ತುಂಗಾ ನದಿ ಹರಿಯುತ್ತಿರುವುದರಿಂದ ಸಮಸ್ಯೆ ಇಲ್ಲ. ಆದರೆ ಕಳೆದ ವರ್ಷದಂತೆ ತುಂಗಾ ನದಿ ಹರಿವು ತುಂಡಾದಲ್ಲಿ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿಯಲಿದೆ. ಫೆಬ್ರವರಿಯಿಂದ ಕುಡಿಯುವ ನೀರಿಗೆ ಸಮಸ್ಯೆ ಆಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
---------------------------ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ:
-ಸ್ನೇಹಲ್ ಲೋಖಂಡೆ, ಸಿಇಓ, ಜಿ.ಪಂ. ----------
ಖಾಲಿಯಾಗುತ್ತಿರುವ ಜಲಾಶಯಗಳು:ಜಿಲ್ಲೆಯಲ್ಲಿ ಮಳೆ ಕೈಕೊಟ್ಟ ಕಾರಣ ಬೇಸಿಗೆ ಮುನ್ನವೇ ಜಲ ಮೂಲಗಳಲ್ಲಿ ನೀರಿನ ಮಟ್ಟ ದಿನದಿನಕ್ಕೆ ಪಾತಾಳ ಕಾಣುತ್ತಿದೆ. ಪ್ರಮುಖ ಜಲಾಶಯಗಳಲ್ಲೂ ಭಾರಿ ಪ್ರಮಾಣದಲ್ಲಿ ನೀರಿನ ಮಟ್ಟ ಕುಸಿದಿದೆ. ಕಳೆದ ಬಾರಿ ಇದೇ ಹೊತ್ತಿಗೆ ಶೇ.70 ರಷ್ಟು ಭರ್ತಿಯಾಗಿದ್ದ ಲಿಂಗನಮಕ್ಕಿ ಜಲಾಶಯದಲ್ಲಿ ಈ ಬಾರಿ ಶೇ.38 ರಷ್ಟು ಮಾತ್ರ ನೀರಿದೆ. ಭದ್ರಾ ಜಲಾಶಯದಲ್ಲೂ ಶೇ.49 ರಷ್ಟು ಮಾತ್ರ ನೀರಿದೆ. ಕಳೆದ ಬಾರಿ ಇದೇ ಹೊತ್ತಿಗೆ ಶೇ.93 ರಷ್ಟು ನೀರಿತ್ತು.