52 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ: ಸಂಪುಟ ನಿರ್ಧಾರ

KannadaprabhaNewsNetwork |  
Published : May 22, 2026, 02:00 AM IST
ಶಿರ್ಷಿಕೆ -೨೧ಕೆ.ಎಂ.ಎಲ್‌.ಆರ್.೧-ಮಾಲೂರು ನಗರದ ಶ್ರೀರಂಗA ಕಲ್ಯಾಣ ಮಂಟಪದಲ್ಲಿ ಮಾಲೂರು ಮಾಸ್ತಿ ಬ್ಲಾಕ್‌ಕಾಂಗ್ರೆಸ್ ಸಮಿತಿಗಳು ಏರ್ಪಡಿಸಲಾಗಿದ್ದ ಕರ್ನಾಟಕ ತಿಗಳ ಅಭಿವೃದ್ಧಿ ನಿಗಮ ಮಂಡಳಿಯ ನೂತನ ಅಧ್ಯಕ್ಷ ಎಲ್.ಎ.ಮಂಜುನಾಥ್ ಅವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನ ಸಮಾರಂಭದಲ್ಲಿ ಶಾಸಕ ಕೆ.ವೈ.ನಂಜೇಗೌಡ ಅಭಿನಂದಿಸಿದರು. | Kannada Prabha

ಸಾರಾಂಶ

ಕಲಬುರಗಿ ಜಿಲ್ಲೆಯ ಆಳಂದ ಕೋಮುಗಲಭೆ ಪ್ರಕರಣದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದ ಪ್ರಮೋದ್‌ ಮುತಾಲಿಕ್‌, ಚೈತ್ರಾ ಕುಂದಾಪುರ, ಪುಂಡಾಟಿಕೆ ನಡೆಸಿದ್ದ ಮುಸ್ಲಿಂ ಸಮುದಾಯದವರದ್ದು ಸೇರಿದಂತೆ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ಕಲಬುರಗಿ ಜಿಲ್ಲೆಯ ಆಳಂದ ಕೋಮುಗಲಭೆ ಪ್ರಕರಣದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದ ಪ್ರಮೋದ್‌ ಮುತಾಲಿಕ್‌, ಚೈತ್ರಾ ಕುಂದಾಪುರ, ಪುಂಡಾಟಿಕೆ ನಡೆಸಿದ್ದ ಮುಸ್ಲಿಂ ಸಮುದಾಯದವರದ್ದು ಸೇರಿದಂತೆ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಲಾಡ್ಲೇ ಮಶಾಕ ದರ್ಗಾ ಆವರಣದಲ್ಲಿನ ರಾಘವಚೈತನ್ಯ ಶಿವಲಿಂಗದ ಮೇಲೆ ಕೆಲ ಬಾಲಾಪರಾಧಿಗಳು ಮಲಮೂತ್ರ ವಿಸರ್ಜನೆ ಮಾಡಿ ಲಿಂಗಕ್ಕೆ ಹೇಸಿಗೆ ಹಚ್ಚಿ ಅಪಮಾನ ಮಾಡಿದ್ದರು. ಇದು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದರ ವಿರುದ್ಧ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿ, ಜೇವರ್ಗಿಯ ಆಂದೋಲ ಮಠದ ಸಿದ್ದಲಿಂಗಸ್ವಾಮಿ ನೇತೃತ್ವದಲ್ಲಿ ಲಿಂಗ ಶುದ್ಧೀಕರಣ ಮಾಡಲು ಕಲಬುರಗಿಯ ನಗರದ ವಿಶ್ವಾರಾಧ್ಯ ಗುಡಿಯಿಂದ ಅಳಂದ ಚಲೋ ನಡೆಸಲು ಕರೆ ನೀಡಲಾಗಿತ್ತು.

ಈ ವೇಳೆ ಕೋಮುಗಲಭೆ ಸಾಧ್ಯತೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರೂ, ಶ್ರೀರಾಮಸೇನೆ ಪ್ರಮೋದ್‌ ಮುತಾಲಿಕ್‌, ಚೈತ್ರಾ ಕುಂದಾಪುರ, ಸಿದ್ದಲಿಂಗ ಸ್ವಾಮೀಜಿ ಅವರು ಪಟ್ಟಣ ಪ್ರವೇಶಿಸಿದ್ದರಿಂದ ಕ್ರಿಮಿನಲ್‌ ಪ್ರಕರಣ ದಾಖಿಸಲಾಗಿತ್ತು.

ಮತ್ತೊಂದೆಡೆ ಬಂದೋಬಸ್ತ್‌ಗೆ ಇದ್ದ ಪೊಲೀಸ್ ವಾಹನಕ್ಕೆ ಜಖಂ ಮಾಡಿ ಓಡಿ ಹೋಗುತ್ತಿದ್ದ ಅಕೀಬ ಅನ್ಸಾರಿ ಎಂಬ 22 ವರ್ಷದ ಮುಸ್ಲಿಂ ಯುವಕ, ನಿಷೇಧಾಜ್ಞೆ ಇದ್ದರೂ ಗುಂಪಾಗಿ ಸಂಚರಿಸಿದ್ದ ಆರೋಪದ ಮೇಲೆ 15 ವರ್ಷದ ಬಾಲಕ ಹಾಗೂ 16 ವರ್ಷದ ಮತ್ತೊಬ್ಬನ ಮೇಲೆ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ವಾಟಾಳ್‌ ವಿರುದ್ಧದ 10 ಪ್ರಕರಣ ವಾಪಸು:

ಕನ್ನಡಪರ ಹೋರಾಟಗಳು, ಮೇಕೆದಾಟು ಹೋರಾಟ, ಕಾವೇರಿ ವಿವಾದದ ವೇಳೆಯ ಹೋರಾಟಗಳ ಹಿನ್ನೆಲೆಯಲ್ಲಿ ವಾಟಾಳ್‌ ನಾಗರಾಜ್‌ ಹಾಗೂ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಒಟ್ಟು 10 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.

ಕನ್ನಡ ಹೋರಾಟಗಾರರ ವಿರುದ್ಧ ಪ್ರಕರಣಗಳು ರದ್ದು, ಕನ್ನಡ ನಾಮಫಲಕ ಚಳುವಳಿ ವೇಳೆ ಸೋಫಿಯಾ ಸ್ಕೂಲ್‌ ಬಳಿಯ ಸ್ಕೈವಾಕ್‌ ಮೇಲೆ ಅಂಟಿಸಿದ್ದ ಇಂಗ್ಲಿಷ್‌ ಬ್ಯಾನರ್‌ ತೆರವುಗೊಳಿಸಿದ್ದ ಪ್ರಕರಣದ ಸಂಬಂಧ ರೂಪೇಶ್ ರಾಜಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣ ಹಾಗೂ ವಿಧಾನಸೌಧದ ಠಾಣೆಯಲ್ಲಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ಸೇರಿದಂತೆ ಒಟ್ಟು 52 ಪ್ರಕರಣ ಹಿಂಪಡೆಯಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರವಾಡ ಮಹಾನಗರ ಪಾಲಿಕೆ ನಾಮಫಲಕ ಅಳವಡಿಕೆ!
ಉಪ್ಪಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗಲಿ: ಪುರುಷೋತ್ತಮಾನಂದಪುರಿ ಶ್ರೀ