ರಾಮನಗರ: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಗರುತಿಸಿ ರದ್ದು ಮಾಡಿದ ರಾಜ್ಯ ಸರ್ಕಾರ ಈಗ ಸಾಮಾಜಿಕ ಭದ್ರತೆ ಮಾಸಾಶನ ಯೋಜನೆಗಳಡಿ ಜಿಲ್ಲೆಯಲ್ಲಿ ಮಾಸಾಶನ ಪಡೆಯುತ್ತಿರುವವರಲ್ಲಿ ಸುಮಾರು 54,430 ಅನುಮಾನಾಸ್ಪದ ಪಿಂಚಣಿದಾರರನ್ನು ಗುರುತಿಸಿದೆ.
54,430 ಮಂದಿ ಅನುಮಾನಾಸ್ಪದವಾಗಿ ಸುಳ್ಳು ದಾಖಲೆ ಸಲ್ಲಿಸಿ ಪಿಂಚಣಿ ಪಡೆಯುತ್ತಿರುವುದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಸಂಧ್ಯಾ ಸುರಕ್ಷಾ ವೃದ್ಧಾಪ್ಯ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ, ವಿಶೇಷ ಚೇತನ ಪೋಷಣೆ ಭತ್ಯೆ ಸೇರಿ ಜಿಲ್ಲೆಯಲ್ಲಿ ಲಕ್ಷಾಂತರ ಜನರು ಮಾಸಿಕ 800ರಿಂದ 2000 ರು.ಗಳವರೆಗೂ ಮಾಸಾಶನ ಪಡೆಯುತ್ತಿದ್ದಾರೆ.ಅವರಲ್ಲಿ ಗುರುತಿಸಿರುವ ಅನುಮಾನಾಸ್ಪದ ಪಿಂಚಣಿದಾರರು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಎಪಿಎಲ್ ಕಾರ್ಡ್ದಾರರು, ಜಿಎಸ್ಟಿ ನಂಬರ್ ಹೊಂದಿರುವವರು, ನಿಗದಿತ ಮಿತಿಗಿಂತ ಕಡಿಮೆ ವಯಸ್ಸಿನವರೂ ಇದ್ದಾರೆ ಎಂಬ ಅನುಮಾನ ಮೂಡಿದೆ.
ಮಾನದಂಡಗಳು ಭೌತಿಕವಾಗಿ ಪರಿಶೀಲನೆ:
ಈಗಾಗಲೇ ಗ್ರಾಮವಾರು, ತಾಲೂಕುವಾರು ಮತ್ತು ಜಿಲ್ಲಾವಾರು ಫಲಾನುಭವಿಗಳ ವಿವರಗಳನ್ನು ಎಲ್ಲ ತಹಸೀಲ್ದಾರ್ ಗಳಿಗೆ ಒದಗಿಸಲಾಗಿದೆ. ಫಲಾನುಭವಿಗಳ ವಯಸ್ಸು, ಆದಾಯ ಮಿತಿ, ಎಪಿಎಲ್, ಆದಾಯ ತೆರಿಗೆ ಪಾವತಿ ಮತ್ತು ಎಚ್ಆರ್ಎಂಎಸ್ ಮಾನದಂಡಗಳನ್ನು ಭೌತಿಕವಾಗಿ ಪರಿಶೀಲಿಸಬೇಕು. ಅನರ್ಹ ಫಲಾನುಭವಿಗಳ ಪಿಂಚಣಿಯನ್ನು ರದ್ದು ಪಡಿಸಲು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ವಿಭಾಗದ ಆಯುಕ್ತರು ಗ್ರಾಮ ಆಡಳಿತ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಮಿತಿ ನಿಗದಿಯೇ ಗೊಂದಲಕ್ಕೆ ಕಾರಣ:
ಆಧಾರ್ ಪರಿಶೀಲನೆ ವೇಳೆಯಲ್ಲಿ ಪಿಂಚಣಿದಾರರ ವಯಸ್ಸು ಯೋಜನೆಗೆ ಅರ್ಹವಾದ ವಯಸ್ಸಿಗಿಂತ ಕಡಿಮೆ ಇರುವುದು ಕಂಡು ಬಂದಿದೆ. ಅಲ್ಲದೇ ಆರೋಗ್ಯಕರವಾಗಿರುವವರು ಕೂಡಾ ವಿಕಲಚೇತನ ಪ್ರಮಾಣ ಪತ್ರ ಪಡೆದು ವಿಕಲಚೇತನರ ಪಿಂಚಣಿ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇಂತಹ ಪ್ರಕರಣಗಳ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುವುದು. ಇದು ಸರ್ಕಾರಕ್ಕೆ ಮಾಡುವ ವಂಚನೆ ಮಾತ್ರವಲ್ಲದೇ ಸಾರ್ವಜನಿಕರಿಗೆ ಮಾಡುವ ವಂಚನೆಯಾಗಿದೆ ಎನ್ನುತ್ತಾರೆ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಇಲಾಖೆ ಅಧಿಕಾರಿಗಳು.
ನಕಲಿ ಮಾಹಿತಿ ಗುರುತಿಸುವ ವ್ಯವಸ್ಥೆಯಿಲ್ಲ:
ಬಾಕ್ಸ್ ..............
ಪಿಂಚಿಣಿದಾರರ ಪರ ಶಾಸಕ ಇಕ್ಬಾಲ್ ಧ್ವನಿ:ರಾಜ್ಯ ಸರ್ಕಾರ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗುರುತಿಸಿರುವ 54,430 ಅನುಮಾನಾಸ್ಪದ ಪಿಂಚಣಿದಾರರ ಪರವಾಗಿ ಶಾಸಕ ಇಕ್ಬಾಲ್ ಹುಸೇನ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದರು. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳಲ್ಲಿ ಯಾರೊಬ್ಬರು ವಂಚಿತರಾಗದಂತೆ ಕ್ರಮ ವಹಿಸಬೇಕು. ಇದಕ್ಕಾಗಿ ಗ್ರಾಮವಾರು ಪಿಂಚಿಣಿದಾರರ ಪಟ್ಟಿ ಸಿದ್ಧಪಡಿಸಿ ದಾಖಲಾತಿ ಪರಿಶೀಲಿಸುವ ಆಂದೋಲನ ನಡೆಸಲಿ. ಒಬ್ಬ ಅರ್ಹ ಫಲಾನುಭವಿ ಪಿಂಚಿಣಿಯಿಂದ ವಂಚಿತರಾದರೂ ನಾನು ಸುಮ್ಮನಿರುವುದಿಲ್ಲ ಎಂದು ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕೊನೆಗೆ ಸಚಿವ ರಾಮಲಿಂಗಾರೆಡ್ಡಿರವರು ಗ್ರಾಮವಾರು ಆಂದೋಲನ ನಡೆಸುವಂತೆ ಅಪರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಕ್ಸ್................ತಾಲೂಕುಅನುಮಾನಾಸ್ಪದ ಪಿಂಚಿಣಿದಾರರ ಸಂಖ್ಯೆ
ಕನಕಪುರ16,489ರಾಮನಗರ7,511
ಮಾಗಡಿ12,056ಚನ್ನಪಟ್ಟಣ14,210
ಹಾರೋಹಳ್ಳಿ4,164ಒಟ್ಟು54,430
24ಕೆಆರ್ ಎಂಎನ್ 1,2.ಜೆಪಿಜಿ1.ಸಾಂದರ್ಭಿಕ ಚಿತ್ರ
2.ಶಾಸಕ ಇಕ್ಬಾಲ್ ಹುಸೇನ್