- ಎಸಿಎಫ್ ರತ್ನಪ್ರಭ ನೇತೃತ್ವದಲ್ಲಿ ಕಾರ್ಯಾಚರಣೆ: ಜಗದೀಶ
- - - ಕನ್ನಡಪ್ರಭ ವಾರ್ತೆ, ಚನ್ನಗಿರಿ
ತಾಲೂಕಿನ ಬಸವಾಪಟ್ಟಣ ಹೋಬಳಿಯ ಶೃಂಗಾರಬಾಗು ತಾಂಡದ ಸರ್ವೆ ನಂಬರ್: 16ರಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿನ 56 ಎಕರೆ ಅರಣ್ಯ ಭೂಮಿಯನ್ನು ರೈತರು ಸಾಗುವಳಿ ಮಾಡಿದ್ದರು. ಈ ಭೂಮಿಯನ್ನು ಶುಕ್ರವಾರ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ ಎಂದು ಮಾವಿನಕಟ್ಟೆಯ ವಲಯ ಅರಣ್ಯಾಧಿಕಾರಿ ಜಗದೀಶ್ ಹೇಳಿದರು.
ತಾಲೂಕಿನ ಶಿವಗಂಗೆ ಹಾಳ್, ಮಾವಿನಕಟ್ಟೆ, ದಾಗಿನಕಟ್ಟೆ, ಎನ್.ಬಸವನಹಳ್ಳಿ ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿಯೂ ಅರಣ್ಯ ಭೂಮಿ ಒತ್ತುವರಿಯಾಗಿದೆ. ಈಗಾಗಲೇ ಆ ಭಾಗದ ಭೂಮಿಯನ್ನು ಒತ್ತುವರಿ ಮಾಡಿಕೊಂಡ ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಎ.ಸಿ.ಎಫ್. ನ್ಯಾಯಾಲಯದ ಅಂತಿಮ ಆದೇಶ ಬಂದ ನಂತರ ಆ ಭಾಗದಲ್ಲಿಯೂ ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ, ಭೂಮಿ ಇಲಾಖೆ ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.
- - - -23ಕೆಸಿಎನ್ಜಿ2:
ಚನ್ನಗಿರಿ ತಾಲೂಕಿನ ಶೃಂಗಾರಬಾಗು ಸರ್ವೆ ನಂಬರ್: 16ರ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿದ್ದ ಜಮೀನನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದರು.