5ನೇ ದಿನದ ಗಣೇಶ ವಿಸರ್ಜನೆಗೆ ಸಂಭ್ರಮದ ಮೆರುಗು

KannadaprabhaNewsNetwork |  
Published : Sep 19, 2026, 02:15 AM IST
 | Kannada Prabha

ಸಾರಾಂಶ

. ಗದಗ, ಬೆಟಗೇರಿ ಅವಳಿ ನಗರದಲ್ಲಿ 5 ನೇ ದಿನದ ಗಣೇಶ ವಿಸರ್ಜನೆ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಜರುಗಿತು.

ಗದಗ:ಗದಗ, ಬೆಟಗೇರಿ ಅವಳಿ ನಗರದಲ್ಲಿ 5 ನೇ ದಿನದ ಗಣೇಶ ವಿಸರ್ಜನೆ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಜರುಗಿತು.

ವಿವಿಧ ಬಡಾವಣೆಗಳಲ್ಲಿ ಮನೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಭಕ್ತರು ಅದ್ದೂರಿ ಮೆರವಣಿಗೆಯ ಮೂಲಕ ವಿಸರ್ಜನಾ ಸ್ಥಳಗಳಿಗೆ ಕೊಂಡೊಯ್ದರು. ಹುಬ್ಬಳ್ಳಿ ರಸ್ತೆಯ ಟಿಪ್ಪು ಸುಲ್ತಾನ ವೃತ್ತದ ಬಳಿಯ ಬಾವಿ ಹಾಗೂ ಭೀಷ್ಮ ಕೆರೆಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು.

ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಡೊಳ್ಳಿನ ಸದ್ದು, ವಿಶೇಷ ಹಾಡುಗಳು ಹಾಗೂ ಭಕ್ತಿಗೀತೆಗಳಿಗೆ ಯುವಕರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಕೆಲವೆಡೆ ವಿವಿಧ ಕಲಾತಂಡಗಳ ಪ್ರದರ್ಶನವೂ ಮೆರವಣಿಗೆಗೆ ಮೆರುಗು ನೀಡಿತು. ಗಣೇಶನಿಗೆ ಜಯಘೋಷ ಮೊಳಗಿಸುತ್ತ ಭಕ್ತರು ಸಾಗಿದರು.

ವಿಸರ್ಜನಾ ಸ್ಥಳಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹಾಗೂ ನಗರಸಭೆ ಸಿಬ್ಬಂದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು.

ಸಂಜೆ ವೇಳೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ವಿಸರ್ಜನಾ ಸ್ಥಳಗಳಿಗೆ ಆಗಮಿಸಿದ್ದರಿಂದ ಅವಳಿ ನಗರದ ಪ್ರಮುಖ ರಸ್ತೆಗಳು ಜನದಟ್ಟಣೆಯಿಂದ ಕೂಡಿದ್ದವು, ವಿಶೇಷ ಪೂಜೆ ಸಲ್ಲಿಸಿದ ನಂತರ ಗಣೇಶ ವಿಸರ್ಜನೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್ ಸಿದ್ಧತೆ: ಮಲ್ಲಿಕಾರ್ಜುನ ನಾಗಪ್ಪ
ಎಲ್ಲರಿಗೂ ಕಾನೂನು ದೊರೆಯಲಿ: ಹುಲ್ಲೂರ ಹೇಮಲತಾ ಬಸಪ್ಪ