ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ತಾಲೂಕು ಮಟ್ಟದಲ್ಲಿ ಆರೋಗ್ಯ ಕೇಂದ್ರ
ತಾಲೂಕು ಮಟ್ಟದಲ್ಲಿ ಸಾಯಿ ಆರೋಗ್ಯ ಕೇಂದ್ರವನ್ನು ತೆರೆಯುವ ಗುರಿಯನ್ನು ಹೊಂದಿದ್ದೇವೆ. ಇದು 30 ರಿಂದ 40 ಹಾಸಿಗೆಗಳ ಸಾಮಾನ್ಯ ಆಸ್ಪತ್ರೆಯಾಗಿರುತ್ತದೆ. ನಂತರದ ಹಂತದಲ್ಲಿ ಸ್ಪೆಷಾಲಿಟಿ ಆಸ್ಪತ್ರೆ, ಮೆಡಿಕಲ್ ಕಾಲೇಜು ಇರುತ್ತವೆ. ಪ್ರಾಥಮಿಕ ಆರೋಗ್ಯ ಮಾದರಿಯನ್ನು ಉತ್ತೇಜಿಸಿದರೆ ಗರ್ಭಿಣಿ ಮತ್ತು ಶಿಶುಗಳ ಅಕಾಲಿಕ ಮರಣಗಳನ್ನು ಸುಲಭವಾಗಿ ತಡೆಯಬಹುದು ಎಂದರು. ಭಾರತದಲ್ಲಿ ಪ್ರತಿ ವರ್ಷ 25,000 ಕ್ಕೂ ಹೆಚ್ಚುತಾಯಂದಿರು ಮಗುವನ್ನು ಹೆರುವಾಗ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಮಗು ಅಥವಾ ತಾಯಿಯ ಸಾವನ್ನು ಸಂಪೂರ್ಣವಾಗಿ ತಪ್ಪಿಸಬಹುದು. ನಾವು ಅವರ ಸಮಸ್ಯೆಗಳನ್ನು ಸ್ವಲ್ಪ ಮೊದಲೇ ಕಂಡುಕೊಂಡು ಉತ್ತಮ ಆರೈಕೆಯನ್ನು ಮಾಡಬೇಕಾಗುತ್ತದೆ ಎಂದು ಹೇಳಿದರು.ಸಂಸ್ಕೃತಿ, ಸಂಸ್ಕಾರ ಉಳಿಸಿ
ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಮಾಜಿ ವಿತ್ತ ಕಾರ್ಯದರ್ಶಿ, ಜಿಎಸ್ ಟಿ ನಿರ್ಮಾತೃ ಡಾ. ಹಸ್ಮುಕ್ ಅಧಿಯಾ ಅವರಿಗೆ ‘ಗ್ಲೋಬಲ್ ಲೀಡರ್ ಶಿಪ್ ಪುರಸ್ಕಾರ’ ಮತ್ತು ಗುರುಕುಲಂ ಶಿಕ್ಷಣ, ಆರೋಗ್ಯ ವಾಹಿನಿ ಮೊಬೈಲ್ ಆಸ್ಪತ್ರೆ ಹಾಗೂ ಸಾಯಿ ಸ್ವಾಸ್ಥ್ಯ ಆರೈಕೆ ಕೇಂದ್ರಕ್ಕೆ ಬೆಂಬಲ ನೀಡುತ್ತಿರುವ ‘ವೇದಾಂತ್ ಮೋಟಾರ್ಸ್’ ಕಂಪನಿಗೆ ‘ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಕಂಪನಿಯ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿವೇಕ್ ಸರಫ್ ಮತ್ತು ನಿರ್ದೇಶಕ ಸ್ಮಿತಾ ಸರಫ್ ಅವರು ಪ್ರಶಸ್ತಿ ಸ್ವೀಕರಿಸಿದರು. ಧಾರ್ಮಿಕ ಕಾರ್ಯಕ್ರಮ
ನವರಾತ್ರಿಯ ಭಾಗವಾಗಿ ರಾಮತಾರಕ ಹೋಮ, ಆಂಜನೇಯ ಹೋಮ, ಸಾಯಿ ಗಾಯತ್ರಿ ಹೋಮ, ಬೆಂಗಾಲಿ ಶೈಲಿಯಲ್ಲಿ ದುರ್ಗಾ ಪೂಜೆ ಮತ್ತು ಆರತಿ ನೆರವೇತು. ಪೂರ್ಣಾಹುತಿ, ಅಷ್ಟಾವಧಾನ ಸೇವಾ, ಚತುರ್ವೇದ ಪಾರಾಯಣಂ, ಸಂಗೀತ, ಪಂಚವಾದ್ಯ ಹಾಗೂ ನಾದಸ್ವರದೊಂದಿಗೆ ರುದ್ರಯಾಗ ಪೂರ್ಣಗೊಂಡಿತು.