ಮಧ್ಯರಾತ್ರಿವರೆಗೆ ವ್ಯಾಪಾರ ವಹಿವಾಟಿಗೆ ಎಂಸಿಸಿ ಮನವಿ

KannadaprabhaNewsNetwork |  
Published : Aug 18, 2024, 01:50 AM IST
21 | Kannada Prabha

ಸಾರಾಂಶ

ಮೈಸೂರು ನಗರಕ್ಕೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಅವಕಾಶವಿದೆ.

ಕನ್ನಡಪ್ರಭ ವಾರ್ತೆ ಮೈಸೂರುರಾಜ್ಯ ಬಜೆಟ್ ನಲ್ಲಿ ಘೋಷಿಸಿರುವಂತೆ ಮೈಸೂರು ನಗರದಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬೇಕು ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ. ರಾಜ್ಯ ಸರ್ಕಾರವು ಬೆಳಗ್ಗೆ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿದ್ದು, ದಸರಾ ದೃಷ್ಟಿಯಲಿರಿಸಿಕೊಂಡು ಜಿಲ್ಲಾಧಿಕಾರಿಗಳು ಮೈಸೂರು ನಗರದಲ್ಲಿ ಅವಕಾಶ ನೀಡಬೇಕು ಎಂದು ಸಂಘದ ಅಧ್ಯಕ್ಷ ಕೆ.ಬಿ. ಲಿಂಗರಾಜು ಮನವಿ ಮಾಡಿದ್ದಾರೆ.ಮೈಸೂರು ನಗರಕ್ಕೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಅವಕಾಶವಿದೆ. ರಾತ್ರಿ 1 ಗಂಟೆಯವರೆಗೂ ವ್ಯಾಪಾರ ವಹಿವಾಟಿನಿಂದ ಹೆಚ್ಚಿನ ಉದ್ಯೋಗಾವಕಾಶ ಸಿಗುವುದಲ್ಲದೇ ವ್ಯಾಪಾರೋದ್ಯಮಕ್ಕೆ ಉತ್ತೇಜನ ನೀಡಿದಂತೆ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.ಈಗಾಗಲೇ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಊಟಕ್ಕೆ ತೊಂದರೆ ಆಗುತ್ತಿತ್ತು. ಆದರೆ ಈಗ 1 ಗಂಟೆಯವರೆಗೂ ವ್ಯಾಪಾರ ನಡೆದರೆ ಅನುಕೂಲವಾಗಲಿದೆ. ಮೈಸೂರು ನಗರಕ್ಕೆ ರಾತ್ರಿ ವೇಳೆಯಲ್ಲಿ ಸಾಕಷ್ಟು ಪ್ರಯಾಣಿಕರು ಬರುವುದರಿಂದ ಪ್ರಯೋಜನವಾಗಲಿದ್ದು, ಮೈಸೂರು ನಗರ ಮತ್ತಷ್ಟು ಅಭಿವೃದ್ಧಿ ಆಗಲಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಮಧ್ಯರಾತ್ರಿ 1 ಗಂಟೆಯವರೆಗೂ ವ್ಯಾಪಾರ ವಹಿವಾಟಿಗೆ ಮುಕ್ತವಕಾಶ ನೀಡಬೇಕು ಎಂದು ಅವರು ಕೋರಿರುವುದಾಗಿ ಗೌರವ ಕಾರ್ಯದರ್ಶಿ ಎ.ಕೆ. ಶಿವಾಜಿರಾವ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಬಾರಿ ಉತ್ತಮ ಮಳೆ, ಕೆರೆ ಭರ್ತಿ: ಮುಳ್ಳುಗದ್ದುಗೆ ಕಾರ್ಣಿಕ
ಡಬ್ಬಿ ಮೆಣಸಿನಕಾಯಿ ಕ್ವಿಂಟಾಲ್‌ಗೆ 90 ಸಾವಿರ ರು. ದಾಖಲೆಯ ದರ!