6 ಲಕ್ಷ ರೈತರಿಗೆ ಬಂದಿಲ್ಲ ‘ಕಿಸಾನ್‌ ಸಮ್ಮಾನ್‌’

KannadaprabhaNewsNetwork |  
Published : Jun 28, 2026, 03:00 AM ISTUpdated : Jun 28, 2026, 10:22 AM IST
 Farmers

ಸಾರಾಂಶ

ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದ 6 ಲಕ್ಷಕ್ಕೂ ಅಧಿಕ ರೈತರು ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ’ಯ 23ನೇ ಕಂತಿನಿಂದ ವಂಚಿತರಾಗಿದ್ದಾರೆ. ಜೂ.20 ರಂದು 23ನೇ ಕಂತಿನ ಹಣ ಸಹ ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಜಮೆಯಾಗಿದೆ.

ಸಿದ್ದು ಚಿಕ್ಕಬಳ್ಳೇಕೆರೆ

 ಬೆಂಗಳೂರು :  ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದ 6 ಲಕ್ಷಕ್ಕೂ ಅಧಿಕ ರೈತರು ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ’ಯ 23ನೇ ಕಂತಿನಿಂದ ವಂಚಿತರಾಗಿದ್ದಾರೆ.

ಭೂಮಿ ಹೊಂದಿರುವ ಎಲ್ಲ ರೈತರಿಗೂ 4 ತಿಂಗಳಿಗೊಮ್ಮೆ 2 ಸಾವಿರ ರುಪಾಯಿಯಂತೆ ವರ್ಷಕ್ಕೆ ₹6 ಸಾವಿರ ನೀಡುವ ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಈಗಾಗಲೇ 22 ಕಂತುಗಳು ಬಿಡುಗಡೆಯಾಗಿದ್ದು, ಜೂ.20 ರಂದು 23ನೇ ಕಂತಿನ ಹಣ ಸಹ ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಜಮೆಯಾಗಿದೆ.

ರಾಜ್ಯದಲ್ಲಿ ಕಿಸಾನ್‌ ಸಮ್ಮಾನ್‌ ಯೋಜನೆಗೆ 46,69,841 ರೈತರು ಅರ್ಹರಾಗಿದ್ದು, ಇದರಲ್ಲಿ ಬರೋಬ್ಬರಿ 3,80,428 ರೈತರು ಇ-ಕೆವೈಸಿ ಮಾಡಿಸದೇ ಇರುವುದರಿಂದ ಆರ್ಥಿಕ ನೆರವಿನಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ, 2,27,384 ರೈತರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಲಿಂಕ್‌ ಮಾಡದೇ ಇರುವುದರಿಂದ ಯೋಜನೆಯಿಂದ ಹೊರಗೆ ಉಳಿಯುವಂತಾಗಿದೆ.

ಕೃಷಿ ಇಲಾಖೆ ಕಾರ್ಯೋನ್ಮುಖವಾಗಲಿ:

ರಾಜ್ಯದಲ್ಲಿ ಕೃಷಿ ಇಲಾಖೆಯು ಕಿಸಾನ್‌ ಸಮ್ಮಾನ್‌ ಯೋಜನೆಯ ನೋಡೆಲ್‌ ಏಜೆನ್ಸಿಯಾಗಿದ್ದು, ಅಧಿಕಾರಿಗಳ ಮೂಲಕ ರೈತರಿಗೆ ಮಾಹಿತಿ ನೀಡಿ ಹಣ ಬರುವಂತೆ ಮಾಡಬೇಕಾದ ಗುರುತರ ಜವಾಬ್ದಾರಿ ಹೊಂದಿದೆ. ರಾಜ್ಯದಲ್ಲಿ ಅತಿ ಹೆಚ್ಚು ಎಂದರೆ ಬೆಳಗಾವಿ ಜಿಲ್ಲೆಯಲ್ಲಿ 41,459 ರೈತರಿಗೆ ಹಣ ಪಾವತಿಯಾಗಿಲ್ಲ. ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿದ್ದು 41,082 ರೈತರು ಹಣದಿಂದ ವಂಚಿತರಾಗಿದ್ದಾರೆ. ಬೀದರ್‌ ಜಿಲ್ಲೆಯಲ್ಲಿ 29,910 ಅನ್ನದಾತರಿಗೆ ಹಣ ಸಂದಾಯವಾಗಿಲ್ಲ. 

ಇ-ಕೆವೈಸಿ ಮಾಡಿಸುವುದು ಹೇಗೆ?  

ಮೂರು ವಿಧಾನಗಳ ಮೂಲಕ ಇ-ಕೆವೈಸಿ ಮಾಡಿಸಬಹುದು. ಪಿಎಂ ಕಿಸಾನ್‌ ಪೋರ್ಟಲ್‌(https://pmkisan.gov.in/) ಮತ್ತು ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ಆಧಾರ್‌ ಲಿಂಕ್‌ ಮಾಡಿದ ಸಕ್ರಿಯ ಮೊಬೈಲ್‌ ಸಂಖ್ಯೆ ನಮೂದಿಸಿ ಒಟಿಪಿ ಆಧಾರಿತವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ನಾಗರಿಕ ಸೇವಾ ಕೇಂದ್ರಗಳು ಮತ್ತು ರಾಜ್ಯ ಸೇವಾ ಕೇಂದ್ರ(ಎಸ್‌ಎಸ್‌ಕೆ)ಕ್ಕೆ ಆಧಾರ್‌ ಕಾರ್ಡ್‌ ಮತ್ತು ಆಧಾರ್‌ಗೆ ಲಿಂಕ್‌ ಆಗಿರುವ ಮೊಬೈಲ್‌ ತೆಗೆದುಕೊಂಡು ಹೋಗಿ ಬಯೋಮೆಟ್ರಿಕ್‌ ನೀಡಿ ಸಹ ಇ-ಕೆವೈಸಿ ಮಾಡಿಸಬಹುದು. ಇದಲ್ಲದೆ, ಪಿಎಂ ಕಿಸಾನ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ಮುಖಚರ್ಯೆ ಆಧಾರಿತ(ಫೇಸ್‌ ರೆಕಗ್ನೇಷನ್‌) ಇ-ಕೆವೈಸಿ ಪೂರ್ಣಗೊಳಿಸಬಹುದು. 24 ಗಂಟೆ ಬಳಿಕ ಇ-ಕೆವೈಸಿಯು ವೆಬ್‌ಸೈಟ್‌ನಲ್ಲಿ ಅಪ್‌ಡೇಟ್‌ ಆಗಲಿದ್ದು, ನಂತರ ಪರಿಶೀಲಿಸಬಹುದು.

ಪ್ರಮುಖ 10 ಜಿಲ್ಲೆಯ ಪಿಎಂ ಕಿಸಾನ್‌ ಫಲಾನುಭವಿಗಳ ಮಾಹಿತಿ

ಜಿಲ್ಲೆಅರ್ಹ ರೈತರುಇ-ಕೆವೈಸಿ ಬಾಕಿಆಧಾರ್‌ ಲಿಂಕ್‌ ಆಗದಿರುವುದು

ಬೆಳಗಾವಿ5,37,16522,56118,898

ತುಮಕೂರು2,64,22025,30915,773

ಬೀದರ್‌1,50,69021,9787932

ಕೊಪ್ಪಳ1,35,49220,6157548

ಬಾಗಲಕೋಟೆ1,82,29719,2337985

ಹಾಸನ2,32,79317,1299822

ರಾಯಚೂರು1,80,321175398567

ದಕ್ಷಿಣ ಕನ್ನಡ1,42,17415,36310,501

ಮಂಡ್ಯ2,15,79514,5939932

ಉಡುಪಿ1,41,47312,50610,919

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮಿಡಲ್‌ ಪಕ್ಕ...ಕಮಲನಗರದಲ್ಲಿ ಸಂಭ್ರಮದ ನಾಗರ ಪಂಚಮಿ
ದೇವೇಗೌಡರ ಮುಖ ತೋರಿಸದೇ ಗೆದ್ದು ಬನ್ನಿ