6 ವರ್ಷದ ಬಾಲಕ ಲೋಕೇಶ್‌ಗೆ ಬ್ಲಡ್ ಕ್ಯಾನ್ಸರ್: ಸಹಾಯ ಮಾಡಿ

KannadaprabhaNewsNetwork |  
Published : Mar 20, 2024, 01:21 AM IST
19ಕೆಎಂಎನ್ ಡಿ12,13 | Kannada Prabha

ಸಾರಾಂಶ

ನಾಗಮುತ್ತು ಬ್ಯಾಡರಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ವಾಟರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಇಬ್ಬರು ಗಂಡು ಮಕ್ಕಳು ಇದ್ದು, ಅದರಲ್ಲಿ ಹಿರಿಯ ಪುತ್ರ ಲೋಕೇಶನಿಗೆ ಮಂಡ್ಯ ಜಿಲ್ಲಾ ಆಸ್ಪತ್ರೆಯಲಿ ಕ್ಯಾನ್ಸರ್ ಕಾಯಿಲೆ ದೃಢಪಟ್ಟಿದೆ. ನಂತರದ ಚಿಕಿತ್ಸೆಗಾಗಿ ಈತನನ್ನು ಮೈಸೂರಿನ ನಾರಾಯಣ ಹೃದಯಾಲಯಕ್ಕೆ ಸೇರಿಸಲಾಗಿದೆ. ಅಲ್ಲಿ ಚಿಕಿತ್ಸೆಗಾಗಿ ಸುಮಾರು 12 ಲಕ್ಷ ಖರ್ಚಾಗುತ್ತದೆ.

ಕನ್ನಡಪ್ರಭ ವಾರ್ತೆ ಹಲಗೂರುಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ನಂಜಾಪುರ ಗ್ರಾಮದ ನಾಗಮುತ್ತು ಅವರ ಹಿರಿಯ ಪುತ್ರ 6 ವರ್ಷದ ಎನ್. ಲೋಕೇಶ್ ಎಂಬ ಬಾಲಕನ ಚಿಕಿತ್ಸೆಗಾಗಿ ಬ್ಯಾಡರಹಳ್ಳಿ ಗ್ರಾಪಂ ಸದಸ್ಯ, ಗೊಲ್ಲರಹಳ್ಳಿಯ ರಾಜೇಶ್ 25 ಸಾವಿರ ರು. ನೆರವು ನೀಡಿ ಮಾನವೀಯತೆ ಮೆರೆದರು.

ನಾಗಮುತ್ತು ಬ್ಯಾಡರಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ವಾಟರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಇಬ್ಬರು ಗಂಡು ಮಕ್ಕಳು ಇದ್ದು, ಅದರಲ್ಲಿ ಹಿರಿಯ ಪುತ್ರ ಲೋಕೇಶನಿಗೆ ಮಂಡ್ಯ ಜಿಲ್ಲಾ ಆಸ್ಪತ್ರೆಯಲಿ ಕ್ಯಾನ್ಸರ್ ಕಾಯಿಲೆ ದೃಢಪಟ್ಟಿದೆ.

ನಂತರದ ಚಿಕಿತ್ಸೆಗಾಗಿ ಈತನನ್ನು ಮೈಸೂರಿನ ನಾರಾಯಣ ಹೃದಯಾಲಯಕ್ಕೆ ಸೇರಿಸಲಾಗಿದೆ. ಅಲ್ಲಿ ಚಿಕಿತ್ಸೆಗಾಗಿ ಸುಮಾರು 12 ಲಕ್ಷ ಖರ್ಚಾಗುತ್ತದೆ ಎಂಬ ವಿಷಯ ತಿಳಿದು ಗ್ರಾಪಂ ಸದಸ್ಯ ರಾಜೇಶ್ 25 ಸಾವಿರ ರು. ನೆರವು ನೀಡಿದ್ದಾರೆ.

ಬಾಲಕನ ತಂದೆ ನಾಗಮುತ್ತು ಮಾತನಾಡಿ, ಬಡತನದಲ್ಲಿ ಜೀವನ ನಡೆಸುತ್ತಿದ್ದ ನನಗೆ ರಾಜೇಶ್ ಆರ್ಥಿಕ ಸಹಾಯ ಮಾಡಿದ್ದಾರೆ. ಇದಕ್ಕೆ ಅಭಾರಿಯಾಗಿದ್ದೇನೆ ಎಂದರು.

ಗ್ರಾಪಂ ಸದಸ್ಯ ರಾಜೇಶ್ ಮಾತನಾಡಿ, ಗ್ರಾಪಂ ಸಿಬ್ಬಂದಿ ಪುತ್ರ ಲೋಕೇಶ್‌ ಮಹಾಮಾರಿ ಬ್ಲಡ್ ಕ್ಯಾನ್ಸರ್ ಪೀಡಿತ ಎಂಬ ವಿಷಯ ತಿಳಿದು ನನಗೆ ತುಂಬಾ ನೋವಾಗಿದೆ. ತೀರಾ ಬಡತನದಲ್ಲಿ ಜೀವನ ಸಾಗಿಸುತ್ತಿರುವ ನಾಗಮುತ್ತು ಅವರ ಕಷ್ಟವನ್ನು ನಾನು ಅರಿತಿದ್ದು, ಅದಕ್ಕಾಗಿ ಧನ ಸಹಾಯ ಮಾಡಿದ್ದೇನೆ. ದಾನಿಗಳು ಇವರ ಕಷ್ಟಕ್ಕೆ ನೆರವಾಗುವಂತೆ ಮನವಿ ಮಾಡಿದರು.

ಈ ವೇಳೆ ಅನಿಕೇತನ ಲಯನ್ಸ್ ಕ್ಲಬ್ ಅಧ್ಯಕ್ಷ ಭಾಸ್ಕರ್, ಸದಸ್ಯರಾದ ಆನಂದ್, ಗ್ರಾಮದ ಪುಟ್ಟಸ್ವಾಮಿ, ನಾಗ, ಆನಂದ, ಸಿದ್ದರಾಜು, ಸೀನಾ, ದೇವರಾಜು, ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌