ಕನ್ನಡಪ್ರಭ ವಾರ್ತೆ ಹೊನ್ನಾಳಿ
ಅವಳಿ ತಾಲೂಕುಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಯಾವುದೇ ಹಣದ ಕೊರತೆ ಇಲ್ಲ, ಅವಳಿ ತಾಲೂಕುಗಳಿಗೆ 90 ಲಕ್ಷ ಈಗಾಗಲೇ ಬಿಡುಗಡೆ ಯಾಗಿದ್ದು, ಹೆಚ್ಚುವರಿಯಾಗಿ ಜಿಲ್ಲೆಗೆ 2 ಕೋಟಿ ರು.ಅನುದಾನ ನೀಡಿದ್ದು ಇದರಲ್ಲಿ ಹೊನ್ನಾಳಿ, ನ್ಯಾಮತಿ ತಾಲೂಕುಗಳಿಗೆ ಅನುದಾನ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಅವಳಿ ತಾಲೂಕುಗಳಲ್ಲಿ ಬೋರ್ ವೆಲ್ ಗಳಲ್ಲಿ ನೀರು ಬತ್ತಿದ ಕಾರಣ ಸುಮಾರು 13 ಹಳ್ಳಿಗಳಲ್ಲಿ ಹೊಸದಾಗಿ ಬೋರ್ವೆಲ್ ಗಳನ್ನು ಕೊರೆಯಿಸಲಾಗಿದ್ದು, ಇದಕ್ಕೆ ಅಗತ್ಯವಾದ ಪೈಪ್, ವಿದ್ಯುತ್ ಬೋರ್ಡ್ಗಳ ಅಳವಡಿಕೆ ಮಾಡಿ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.ಅವಳಿ ತಾಲೂಕುಗಳ 5 ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ಗಳಿಂದ ಬಾಡಿಗೆ ಆಧಾರದ ಮೇಲೆ ನೀರು ಪಡೆಯಲಾಗುತ್ತಿದ್ದು, ಪ್ರತಿ ತಿಂಗಳಿಗೆ ಬೋರ್ವೆಲ್ ಮಾಲೀಕರುಗಳಿಗೆ ರು.15 ಸಾವಿರ ಬಾಡಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೃಷಿ ಇಲಾಖೆ ಅಧಿಕಾರಿ ಪ್ರತಿಮಾ ಮಾತನಾಡಿ, ಪ್ರಸ್ತುತ ಬೇಸಿಗೆ ಹಂಗಾಮಿನಲ್ಲಿ 9775 ಬಿತ್ತನೆ ಗುರಿ ಹೋಂದಲಾಗಿದ್ದು, ಒಟ್ಟು 3710 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಪ್ರಸ್ತುತ ವರ್ಷದಲ್ಲಿ ನೀರಾವರಿ ಯೋಜನೆಯಡಿ ಸಾಮಾನ್ಯ ರೈತರಿಗೆ 301 ಲಕ್ಷ ರು., ವಿಶೇಷ ಘಟಕ ಯೋಜನೆಯಡಿಯಲ್ಲಿ 60ಲಕ್ಷ ಹಾಗೂ ಗಿರಿಜನ ಉಪಯೋಗ ಯೋಜನೆಯಡಿ. 19.5 ಲಕ್ಷ ಕ್ರಿಯಾ ಯೋಜನೆ ನೀಡಲಾಗಿದ್ದು, ರೈತರಿಗೆ ತುಂತುರ ಹನಿ ನೀರಾವರಿ ಘಟಕಗಳನ್ನು ಸಹಾಯ ಧನದಲ್ಲಿ ವಿತರಣೆ ಮಾಡಲಾಗಿದೆ ಎಂದರು.ವಿದ್ಯಾರ್ಥಿಗಳ ಪರದಾಟ: ಪಟ್ಟಣದ ಹೊರವಲಯದಲ್ಲಿರುವ ಹೆಲಿಪ್ಯಾಡ್ ಸಮೀಪದಲ್ಲಿರುವ ಬಿಸಿಎಂ ಹಾಸ್ಟೆಲ್ ಗಳ ವಿದ್ಯಾರ್ಥಿಗಳು ಸುಮಾರು ಕಿಲೋ ಮೀಟರ್ ಗಳಷ್ಟು ದೂರದ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗಬೇಕಾಗಿದ್ದು, ಪ್ರತಿ ದಿನ ರಸ್ತೆಯ ಪಕ್ಕದಲ್ಲಿ ನಿಂತು ಬೈಕ್ ಗಳಿಗೆ ಕೈ ಮಾಡುವ ಪರಿಸ್ಥಿತಿ ಇದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮಾ ಅವರು ಶಾಸಕರ ಗಮಕ್ಕೆ ತಂದಾಗ, ಶಾಸಕರು ಈ ಬಗ್ಗೆ ತಹಶೀಲ್ದಾರ್ ಮೂಲಕ ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಮಾಲೀಕರೊಂದಿಗೆ ಮಾತನಾಡಿ, ಈ ಮಾರ್ಗವಾಗಿ ಓಡಾಡುವ ಬಸ್ ಗಳನ್ನು ನಿಲ್ಲಿಸಿ ವಿದ್ಯಾರ್ಧಿಗಳನ್ನು ಕರೆ ತರುವಂತೆ ಸೂಚನೆ ನೀಡಲು ತೀರ್ಮಾನಿಸಲಾಯಿತು.ಸಭೆಯಲ್ಲಿ ತಹಶೀಲ್ದಾರ್ ಫೀರೋಜ್, ತಾ.ಪಂ.ಅಧಿಕಾರಿ ರಾಘವೇಂದ್ರ, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.