ಪ್ರಜಾಪ್ರಭುತ್ವ ದಿನಕ್ಕೆ 60 ಕಿಮೀ ಮಾನವ ಸರಪಳಿ

KannadaprabhaNewsNetwork |  
Published : Sep 07, 2024, 01:40 AM IST
ಪೊಟೋ: 6ಎಸ್‌ಎಂಜಿಕೆಪಿ04ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಚರ್ಚಿಸಲು ಕರೆದಿದ್ದ ವಿವಿಧ ಸಂಘ ಸಂಸ್ಥೆಗಳ ಪೂರ್ವಭಾವಿ ಸಭೆಯಲ್ಲಿ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕೇವಲ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೇ ನಾಗರಿಕರು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಚೇರಿ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಪ್ರಜಾಪ್ರಭುತ್ವ ಜನರಿಂದ ಜನರಿಗಾಗಿ ಇರುವ ಒಂದು ವ್ಯವಸ್ಥೆಯಾಗಿದ್ದು ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ ಹಾಕಿದ್ದು, ಸಂವಿಧಾನದ ಕುರಿತು ಅರಿವು ಮೂಡಿಸಲು ಸೆ.15ರಂದು ರಾಜ್ಯಾದ್ಯಂತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾ ಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಿಕೆಚೀಲೂರು ವರೆಗೆ 8 ಗ್ರಾ.ಪಂ ವ್ಯಾಪ್ತಿ, ಸ್ಥಳೀಯ ಸಂಸ್ಥೆಗಳು, ನಗರ ವ್ಯಾಪ್ತಿಯನ್ನು ಒಳಗೊಂಡು ಒಟ್ಟು 60 ಕಿ.ಮೀ ಮಾನವ ಸರಪಳಿ ರಚಿಸಲು ಸಿದ್ಧತೆಯನ್ನು ನಡೆಸ ಲಾಗಿದೆ. ಇದು ಕೇವಲ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೆ ವಿದ್ಯಾರ್ಥಿಗಳು, ನಾಗರೀಕರು, ಸ್ತ್ರೀಶಕ್ತಿ ಗುಂಪು ಗಳು, ವಿವಿಧ ಸಂಘ ಸಂಸ್ಥೆಗಳು ಈ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದರು.

ವಿವಿಧ ಕಲಾಮೇಳದೊಂದಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸ್ತ್ರೀಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿ ಗಳು, ಸ್ಕೌಟ್ಸ್ ಗೈಡ್ಸ್, ಎನ್‌ಎಸ್‌ಎಸ್, ಎನ್‌ಸಿಸಿ ಅಭ್ಯರ್ಥಿಗಳು ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಸೇರಿ ಮಾನವ ಸರಪಳಿ ನಿರ್ಮಿಲಾಗುವುದು.

ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮಹತ್ವವನ್ನು ಇಂದಿನ ಯುವ ಪಿಳಿಗೆಗೆ ತಿಳಿಸುವುದು ಹಾಗೂ ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ. ಸಮಾಜದ ಪ್ರತಿಯೊಬ್ಬರು ಸಂವಿಧಾನಕ್ಕೆ ಬದ್ಧರಾಗಿ ಜವಾಬ್ದಾರಿಯಿಂದ ಪ್ರಜಾಪ್ರಭುತ್ವದ ರೂವಾರಿಗಳಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳು, ಸಂಸ್ಥೆಗಳ ಮುಖಂಡರಿಂದ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಸಲಹೆಗಳನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ತಾಲೂಕು ಸಹಾಯಕ ನಿರ್ದೇಶಕ ಸುರೇಶ್ ಹಾಗೂ ವಿವಿಧ ಸಂಘ ಸಂಸ್ಥೆಯ ಪಧಾದಿಕಾರಿಗಳು ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?